AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಸಂಸತ್ ದಾಳಿ, ಮುಂಬೈ ದಾಳಿ ಹಿಂದೆ ಮಸೂದ್ ಅಜರ್ ಕೈವಾಡ ಬಯಲು; ಪಾಕಿಸ್ತಾನಕ್ಕೆ ಮುಖಭಂಗ

ತಮ್ಮ ದೇಶದಲ್ಲಿ ಯಾವುದೇ ಉಗ್ರರಿಗೆ ನೆಲೆ ಕಲ್ಪಿಸಿಲ್ಲ, ಭಯೋತ್ಪಾದನೆಗೆ ನಾವು ಬೆಂಬಲ ನೀಡುತ್ತಿಲ್ಲ ಎಂಬ ಹೇಳಿಕೆಗಳನ್ನು ನೀಡುತ್ತಾ ಬೇರೆ ದೇಶಗಳ ಕಣ್ಣಿಗೆ ಮಣ್ಣೆರಚುತ್ತಿರುವ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ಜೈಶ್-ಎ-ಮೊಹಮ್ಮದ್ ಸಂಘಟನೆಯ ನಾಯಕನೊಬ್ಬ ತಮ್ಮ ಸಂಘಟನೆಯ ಮುಖ್ಯಸ್ಥನಾದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಮಸೂದ್ ಅಜರ್ ದೆಹಲಿ, ಮುಂಬೈ ದಾಳಿಗಳನ್ನು ಪ್ಲಾನ್ ಮಾಡಿದ್ದ ಎಂಬುದನ್ನು ಒಪ್ಪಿಕೊಂಡಿದ್ದಾನೆ.

ದೆಹಲಿ ಸಂಸತ್ ದಾಳಿ, ಮುಂಬೈ ದಾಳಿ ಹಿಂದೆ ಮಸೂದ್ ಅಜರ್ ಕೈವಾಡ ಬಯಲು; ಪಾಕಿಸ್ತಾನಕ್ಕೆ ಮುಖಭಂಗ
Masood Azhar
ಸುಷ್ಮಾ ಚಕ್ರೆ
|

Updated on: Sep 17, 2025 | 8:51 PM

Share

ಇಸ್ಲಮಾಬಾದ್, ಸೆಪ್ಟೆಂಬರ್ 17: ಜೈಶ್-ಎ-ಮೊಹಮ್ಮದ್‌ ಸಂಘಟನೆಯ ಹಿರಿಯ ಕಮಾಂಡರ್ ದೆಹಲಿ ಮತ್ತು ಮುಂಬೈನಲ್ಲಿ ದಾಳಿಗಳನ್ನು ಪ್ಲಾನ್ ಮಾಡುವಲ್ಲಿ ಮಸೂದ್ ಅಜರ್‌ ಮುಖ್ಯ ಪಾತ್ರ ವಹಿಸಿದ್ದ ಎಂದು ನೇರವಾಗಿ ಆರೋಪಿಸಿದ್ದಾನೆ. ಇದರ ನಂತರ ಪಾಕಿಸ್ತಾನದ ರಾಜ್ಯ ಪ್ರಾಯೋಜಿತ ಭಯೋತ್ಪಾದಕ ಸಂಪರ್ಕಗಳು ಮತ್ತೊಮ್ಮೆ ಬಹಿರಂಗಗೊಂಡಿವೆ. ಪಾಕಿಸ್ತಾನ (Pakistan) ಉಗ್ರಗಾಮಿಗಳಿಗೆ ಆಶ್ರಯ ನೀಡುತ್ತಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ವಿಶ್ವಸಂಸ್ಥೆ ಗೊತ್ತುಪಡಿಸಿದ ಗುಂಪಿನ ಪ್ರಮುಖ ವ್ಯಕ್ತಿಯಾದ ಮಸೂದ್ ಇಲ್ಯಾಸ್ ಕಾಶ್ಮೀರಿ, ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾದ ಮಸೂದ್ ಅಜರ್ ತಿಹಾರ್ ಜೈಲಿನಿಂದ ಬಿಡುಗಡೆಯಾದ ನಂತರ ಪಾಕಿಸ್ತಾನದಿಂದ ಕಾರ್ಯಾಚರಣೆಗಳನ್ನು ನಿರ್ದೇಶಿಸಿದ್ದ ಎಂದು ವೀಡಿಯೊದಲ್ಲಿ ಒಪ್ಪಿಕೊಂಡಿದ್ದಾನೆ. ಅಜರ್‌ನ ನೆಲೆ 2019ರ ಭಾರತದ ವಾಯುದಾಳಿಯ ಸ್ಥಳವಾದ ಬಾಲಕೋಟ್‌ನಲ್ಲಿದೆ ಎಂದು ಆತ ಬಹಿರಂಗಪಡಿಸಿದ್ದಾನೆ. ಇದರಿಂದ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ.

ಇದನ್ನೂ ಓದಿ: ಆಪರೇಷನ್ ಸಿಂಧೂರ್​​ನಿಂದ ಮಸೂದ್ ಅಜರ್ ಕುಟುಂಬ ಛಿದ್ರವಾಯಿತು; ಕೊನೆಗೂ ಒಪ್ಪಿಕೊಂಡ ಜೈಶ್ ಕಮಾಂಡರ್

ವಿಶ್ವಸಂಸ್ಥೆ ಗೊತ್ತುಪಡಿಸಿದ ಭಯೋತ್ಪಾದಕ ಗುಂಪಿನ ಉನ್ನತ ಕಮಾಂಡರ್ ಮಸೂದ್ ಇಲಿಯಾಸ್ ಕಾಶ್ಮೀರಿ, ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾದ ಅಜರ್ 5 ವರ್ಷಗಳ ಜೈಲು ಶಿಕ್ಷೆಯ ನಂತರ ಭಾರತದಿಂದ ಬಿಡುಗಡೆಯಾದ ನಂತರ ಪಾಕಿಸ್ತಾನದಿಂದ ಭಾರತದ ಮೇಲೆ ಭಯೋತ್ಪಾದಕ ದಾಳಿಗಳನ್ನು ಆಯೋಜಿಸಿದ್ದ ಎಂದು ವೀಡಿಯೊದಲ್ಲಿ ಒಪ್ಪಿಕೊಂಡಿದ್ದಾನೆ. “ದೆಹಲಿಯ ತಿಹಾರ್ ಜೈಲಿನಿಂದ ತಪ್ಪಿಸಿಕೊಂಡ ನಂತರ, ಅಮೀರ್-ಉಲ್-ಮುಜಾಹಿದ್ದೀನ್ ಮೌಲಾನಾ ಮಸೂದ್ ಅಜರ್ ಪಾಕಿಸ್ತಾನಕ್ಕೆ ಬರುತ್ತಾನೆ. ಬಾಲಕೋಟ್ ಮಣ್ಣು ಭಾರತದ ವಿರುದ್ಧದ ಅವನ ದೃಷ್ಟಿಕೋನ, ಧ್ಯೇಯ ಮತ್ತು ಪ್ಲಾನ್​​ಗೆ ಒಂದು ನೆಲೆಯನ್ನು ಒದಗಿಸುತ್ತದೆ. ಭಾರತ ದೇಶವನ್ನು ಭಯಭೀತಗೊಳಿಸಿದ ಅಮೀರ್-ಉಲ್-ಮುಜಾಹಿದ್ದೀನ್ ಮೌಲಾನಾ ಮಸೂದ್ ಅಜರ್ ಹೀಗೆ ಕಾಣಿಸಿಕೊಳ್ಳುತ್ತಾನೆ” ಎಂದು ಕಾಶ್ಮೀರಿ ಹೇಳುತ್ತಿರುವ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಉಗ್ರ ಹಫೀಜ್ ಸಯೀದ್, ಮಸೂದ್ ಅಜರ್​ನನ್ನು ಭಾರತಕ್ಕೆ ಹಸ್ತಾಂತರಿಸಲು ಪಾಕಿಸ್ತಾನಕ್ಕೆ ಅಭ್ಯಂತರವಿಲ್ಲ: ಬಿಲಾವಲ್

ಇದು ಪಾಕಿಸ್ತಾನದ ಮಿಲಿಟರಿ-ಭದ್ರತಾ ಸಂಸ್ಥೆಯ ಕಣ್ಗಾವಲಿನಲ್ಲಿ ಜೈಶ್ ಶಿಬಿರಗಳು ಮುಕ್ತವಾಗಿ ಕಾರ್ಯನಿರ್ವಹಿಸುತ್ತಿವೆ ಎಂಬ ಭಾರತದ ದೀರ್ಘಕಾಲೀನ ಹೇಳಿಕೆಯನ್ನು ದೃಢಪಡಿಸುತ್ತದೆ. ಪಾಕಿಸ್ತಾನ ತನ್ನ ಗಡಿಯೊಳಗೆ “ಯಾವುದೇ ಭಯೋತ್ಪಾದಕ ಅಡಗುತಾಣಗಳು” ಇಲ್ಲ ಎಂದು ಜಗತ್ತಿಗೆ ಹೇಳಿದ್ದರೂ ಸಹ ಈ ಹೇಳಿಕೆಯಿಂದಾಗಿ ಪಾಕಿಸ್ತಾನದ ನಿಜರೂಪ ಬಯಲಾದಂತಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದು; ಮೋದಿ ವಾಗ್ದಾಳಿ
ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದು; ಮೋದಿ ವಾಗ್ದಾಳಿ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ