AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart Attack: ದಕ್ಷಿಣ ಕೊರಿಯಾದಲ್ಲಿ ಸಾಮೂಹಿಕ ಹೃದಯಾಘಾತ, 80 ಜನ ಆಸ್ಪತ್ರೆಗೆ ದಾಖಲು

ಹ್ಯಾಲೋವೀನ್ ಹಬ್ಬದಲ್ಲಿ ಭಾಗಿಯಾದವರಿಗೆ ಸಾಮೂಹಿಕ ಹೃದಯಾಘಾತ ನಡೆದಿರುವ ದಕ್ಷಿಣ ಕೊರಿಯಾದಲ್ಲಿ ನಡೆದಿದೆ. 50ಕ್ಕೂ ಹೆಚ್ಚು ಮಂದಿಗೆ ಹೃದಯ ಸ್ಥಂಬನವಾಗಿದೆ ಎಂದು ವರದಿಯಾಗಿದೆ.

Heart Attack: ದಕ್ಷಿಣ ಕೊರಿಯಾದಲ್ಲಿ ಸಾಮೂಹಿಕ ಹೃದಯಾಘಾತ, 80 ಜನ ಆಸ್ಪತ್ರೆಗೆ ದಾಖಲು
TV9 Web
| Edited By: |

Updated on:Oct 29, 2022 | 11:00 PM

Share

ಸಿಯೋಲ್: ಹ್ಯಾಲೋವೀನ್ ಹಬ್ಬದಲ್ಲಿ ಭಾಗಿಯಾದವರಿಗೆ ಸಾಮೂಹಿಕ ಹೃದಯಾಘಾತ ನಡೆದಿರುವ ದಕ್ಷಿಣ ಕೊರಿಯಾದಲ್ಲಿ ನಡೆದಿದೆ. 50ಕ್ಕೂ ಹೆಚ್ಚು ಮಂದಿಗೆ ಹೃದಯ ಸ್ಥಂಬನವಾಗಿದೆ ಎಂದು ವರದಿಯಾಗಿದೆ. ದಕ್ಷಿಣ ಕೊರಿಯಾದ ಸಿಯೋಲ್ ನಲ್ಲಿ ನಡೆಯುತ್ತಿದ್ದ ಹಬ್ಬದಲ್ಲಿ 80ಕ್ಕೂ ಹೆಚ್ಚು ಮಂದಿಗೆ ಉಸಿರಾಟದ ಸಮಸ್ಯೆ ಉಂಟಾಗಿದೆ. ಘಟನೆಯ ಬಗ್ಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ದಕ್ಷಿಣ ಕೊರಿಯಾ ಸ್ಥಳೀಯ ಆಸ್ಪತ್ರೆಯಲ್ಲಿ ಉಸಿರಾಟದ ಸಮಸ್ಯೆ ಎದುರಿಸುತ್ತಿರುವವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಪಾರ್ಟಿಯಲ್ಲಿ ಭಾಗಿ ಆಗಿದ್ದ 50ಕ್ಕೂ ಹೆಚ್ಚು ಜನರಿಗೆ ಹೃದಯಾಘಾತ ದಕ್ಷಿಣ ಕೊರಿಯಾದ ಸಿಯೋಲ್‌ನಲ್ಲಿ ನೂಕುನುಗ್ಗಲಿನಿಂದ ಅವಘಡ ನಡೆದಿದೆ.  ಇಟಾವಾನ್‌ನಲ್ಲಿ ಆಯೋಜಿಸಿದ್ದ ಹ್ಯಾಲೋವೀನ್ ಪಾರ್ಟಿಯಲ್ಲಿ ಘಟನೆ ಅಸ್ವಸ್ಥಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳೀಯ ಪೋಲೀಸ್ ಅಧಿಕಾರಿಯೊಬ್ಬರು, ಹ್ಯಾಲೋವೀನ್ ಹಬ್ಬದಲ್ಲಿ ಜನಸಂದಣಿಯು ನೆರೆದಿದ್ದ ಇಟಾವೊನ್‌ನ ಬೀದಿಗಳಲ್ಲಿ ಕಾಲ್ತುಳಿತ ಸಂಭವಿಸಿದೆ ಎಂದು ತಿಳಿಸಲಾಗಿದೆ. ಘಟನೆಯ ವಿವರಗಳು ಇನ್ನೂ ತನಿಖೆಯಲ್ಲಿವೆ ಎಂದು ಅಧಿಕಾರಿಯು ಹೇಳಿದ್ದಾರೆ.

ಅಪರಿಚಿತ ಸೆಲೆಬ್ರಿಟಿಯೊಬ್ಬರು ಅಲ್ಲಿಗೆ ಭೇಟಿ ನೀಡಿರುವುದನ್ನು ಕೇಳಿದ ನಂತರ ಹೆಚ್ಚಿನ ಸಂಖ್ಯೆಯ ಜನರು ಇಟಾವಾನ್ ಬಾರ್‌ಗೆ ಧಾವಿಸಿದ ನಂತರ ಈ ಘಟನೆ ಸಂಭವಿಸಿದೆ ಎಂದು ಕೆಲವು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ. ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರು ಅಘಾತಗೊಂಡವರಿಗೆ ತ್ವರಿತ ಚಿಕಿತ್ಸೆಯನ್ನು ನೀಡಲು ಮತ್ತು ಹಬ್ಬದ ಸ್ಥಳಗಳ ಸುರಕ್ಷತೆಯನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Published On - 10:59 pm, Sat, 29 October 22

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ