AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪಾಕಿಸ್ತಾನದ ಸಿಯಾಲ್​ಕೋಟ್​ ಸೇನಾ ನೆಲೆಯಲ್ಲಿ ಭಯಂಕರ ಸ್ಫೋಟ; ತೀವ್ರ ಬೆಂಕಿ, ಆವರಿಸಿದ ದಟ್ಟ ಹೊಗೆ

ಸಿಯಾಲ್​ಕೋಟ್​ ಕಂಟೋನ್ಮೆಂಟ್ ಎಂಬುದು ಪಾಕಿಸ್ತಾನದ ಅತ್ಯಂತ ಹಳೇ ಮತ್ತು ಪ್ರಮುಖ ಸೇನಾ ನೆಲೆ. ಇದನ್ನು 1852ರಲ್ಲಿ ಬ್ರಿಟಿಷ್​ ಇಂಡಿಯನ್​ ಆರ್ಮಿ ಸ್ಥಾಪಿಸಿತ್ತು.

Video: ಪಾಕಿಸ್ತಾನದ ಸಿಯಾಲ್​ಕೋಟ್​ ಸೇನಾ ನೆಲೆಯಲ್ಲಿ ಭಯಂಕರ ಸ್ಫೋಟ; ತೀವ್ರ ಬೆಂಕಿ, ಆವರಿಸಿದ ದಟ್ಟ ಹೊಗೆ
ಸಿಯಾಲ್​ಕೋಟ್​​ನಲ್ಲಿ ಸ್ಫೋಟ
TV9 Web
| Updated By: Lakshmi Hegde|

Updated on: Mar 20, 2022 | 1:25 PM

Share

ಪಾಕಿಸ್ತಾನದ (Pakistan) ಉತ್ತರ ಭಾಗದಲ್ಲಿರುವ ನಗರವಾದ ಸಿಯಾಲ್​ಕೋಟ್​​ ಮಿಲಿಟರಿ ನೆಲೆಯ (Sialkot Military Base)ಬಳಿ ಇಂದು ಭಾರಿ ಸ್ಫೋಟ ಉಂಟಾಗಿದೆ. ಸ್ಫೋಟದ ಭಯಂಕರ ಸದ್ದು ಪಂಜಾಬ್​ ಪ್ರಾಂತ್ಯದಲ್ಲಿರುವ ಕಂಟೋನ್ಮೆಂಟ್ ಏರಿಯಾದವರೆಗೆ ಕೇಳಿಸಿದ್ದಾಗಿ ಎಎನ್​ಐ ವರದಿ ಮಾಡಿದೆ.  ಭಾರಿ ಶಬ್ದದೊಂದಿಗೆ ಬೆಂಕಿ ಕಾಣಿಸಿಕೊಂಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಟ್ವೀಟ್ ಮಾಡಿರುವ ದೆಹಲಿಯ ಡೇಲಿ ಮಿಲಾಪ್​ ಎಂಬ ಆನ್​ಲೈನ್ ಪತ್ರಿಕೆ ಸಂಪಾದಕ ರಿಶಿ ಸುರಿ ಟ್ವೀಟ್ ಮಾಡಿ, ಪಾಕಿಸ್ತಾನದ ಸಿಯಾಲ್​ಕೋಟ್​ ಸೇನಾ ನೆಲೆ ಬಳಿ ಭಯಂಕರ ಸ್ಫೋಟ ಉಂಟಾಗಿದೆ. ಇದು ಶಸ್ತ್ರಾಸ್ತ್ರ ಸಂಗ್ರಹಣಾ ಸ್ಥಳವಾಗಿದೆ. ಸ್ಫೋಟವುಂಟಾದ ಜಾಗದಲ್ಲಿ ಬೆಂಕಿಯೂ ವ್ಯಾಪಕವಾಗಿ ಕಂಡುಬಂದಿತ್ತು. ಆದರೆ ಅಲ್ಲಿ ನಿಜಕ್ಕೂ ಆಗಿದ್ದೇನು? ಯಾಕಾಗಿ ಸ್ಫೋಟವಾಗಿದೆ ಎಂಬುದಿನ್ನೂ ಸ್ಪಷ್ಟವಾಗಿಲ್ಲ ಎಂದು ಹೇಳಿದ್ದಾರೆ. ಹಲವು ಬಾರಿ ಸ್ಫೋಟದ ಶಬ್ದ ಕೇಳುವ ಜತೆ, ಬೆಂಕಿ ಎದ್ದು ನಂತರ ಕಪ್ಪು ಹೊಗೆ ಆಕಾಶದಲ್ಲಿ ಆವರಿಸಿದ್ದನ್ನು ವಿಡಿಯೋದಲ್ಲಿ ನೋಡಬಹುದು.

ಸಿಯಾಲ್​ಕೋಟ್​ ಕಂಟೋನ್ಮೆಂಟ್ ಎಂಬುದು ಪಾಕಿಸ್ತಾನದ ಅತ್ಯಂತ ಹಳೇ ಮತ್ತು ಪ್ರಮುಖ ಸೇನಾ ನೆಲೆ. ಇದನ್ನು 1852ರಲ್ಲಿ ಬ್ರಿಟಿಷ್​ ಇಂಡಿಯನ್​ ಆರ್ಮಿ ಸ್ಥಾಪಿಸಿತ್ತು. ಸದ್ಯ ಪಾಕಿಸ್ತಾನದಲ್ಲಿ ಪ್ರಧಾನಿ ಇಮ್ರಾನ್ ಖಾನ್​ ಕುರ್ಚಿಯೇ ಅಲ್ಲಾಡುತ್ತಿದೆ. ಸರ್ಕಾರವನ್ನು ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ. ಪಾಕಿಸ್ತಾನ್​ ಮುಸ್ಲಿಂ ಲೀಗ್​ ನವಾಜ್​ (ಪಿಎಂಎಲ್​-ಎನ್​) ಮತ್ತು ಪಾಕಿಸ್ತಾನ್ ಪೀಪಲ್ಸ್​ ಪಾರ್ಟಿ (ಪಿಪಿಪಿ)ಯ 100 ಶಾಸಕರು ಮಾರ್ಚ್​ 8ರಂದು ಇಮ್ರಾನ್ ಖಾನ್​ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರು. ಪಾಕಿಸ್ತಾನದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿಗೆ ಇಮ್ರಾನ್ ಖಾನ್​ ನೇತೃತ್ವದ ಪಾಕಿಸ್ತಾನ್​ ತೆಹ್ರೀಕ್​ ಇ ಇನ್ಸಾಫ್​ (ಪಿಟಿಐ) ಸರ್ಕಾರವೇ ಕಾರಣ ಎಂದು ಆರೋಪಿಸಿದ್ದರು. ಇದೀಗ ಇಮ್ರಾನ್​ ಖಾನ್​ಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗುತ್ತಿದೆ ಎಂಬುದಾಗಿ ವರದಿಯಾಗಿದೆ. ಇನ್ನು ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿಯಂತೂ ತೀವ್ರವಾಗಿ ಹದಗೆಟ್ಟಿದ್ದು, ಅಲ್ಲಿ ಇಮ್ರಾನ್ ಖಾನ್​ ಸ್ಥಾನ ಉಳಿಸಿಕೊಳ್ಳುವುದು ತುಸು ಕಷ್ಟವೇ ಆಗಿದೆ.

ಇದನ್ನೂ ಓದಿ: ‘ದಿ ಕಾಶ್ಮೀರ್​ ಫೈಲ್ಸ್​’ 200 ಕೋಟಿ ರೂ. ಗಳಿಸೋದು ಖಚಿತ; ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರದ್ದೇ ಆರ್ಭಟ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು