AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ: ಇಸ್ಲಾಮಾಬಾದ್‌ನಲ್ಲಿರುವ ಸೆಂಟಾರಸ್ ಮಾಲ್‌ನಲ್ಲಿ ಬೆಂಕಿ ಅವಘಡ

ರಕ್ಷಣಾ ತಂಡಗಳು ಬರುವುದಕ್ಕೆ ವಿಳಂಬವಾಗಿದ್ದು ಕಟ್ಟಡದ ಮೂರನೇ ಮಹಡಿಯಿಂದ ಮೊದಲ ಮಹಡಿಗೆ ಮತ್ತು ವಸತಿ ಅಪಾರ್ಟ್‌ಮೆಂಟ್‌ಗಳು ಇರುವ ಮೇಲಿನ ವಿಭಾಗಗಳಿಗೆ ವೇಗವಾಗಿ ಹರಡುತ್ತಿರುವ ಕಾರಣ ಬೆಂಕಿಯ ತೀವ್ರತೆಯನ್ನು ಹೆಚ್ಚಿಸಿದೆ

ಪಾಕಿಸ್ತಾನ: ಇಸ್ಲಾಮಾಬಾದ್‌ನಲ್ಲಿರುವ ಸೆಂಟಾರಸ್ ಮಾಲ್‌ನಲ್ಲಿ ಬೆಂಕಿ ಅವಘಡ
ಸೆಂಟಾರಸ್ ಮಾಲ್‌ನಲ್ಲಿ ಬೆಂಕಿ ಅವಘಡ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Oct 09, 2022 | 8:24 PM

Share

ಇಸ್ಲಾಮಾಬಾದ್‌ನ (Islamabad )ಸೆಂಟಾರಸ್ ಮಾಲ್‌ನ (Centaurus Mall) ಮೂರನೇ ಮಹಡಿಯಲ್ಲಿ ಭಾನುವಾರ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಮೇಲಿನ ಭಾಗದಲ್ಲಿರುವ ವಸತಿ ಅಪಾರ್ಟ್‌ಮೆಂಟ್‌ಗಳು ಸೇರಿದಂತೆ ಇತರ ಮಹಡಿಗಳಲ್ಲಿ ಹರಡಿದೆ ಎಂದು ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ. ಇದುವರೆಗೆ ಯಾವುದೇ ಸಾವು ನೋವು ವರದಿಯಾಗಿಲ್ಲ. ಅಗ್ನಿಶಾಮಕ ವಾಹನಗಳು ಸಹ ಬೆಂಕಿಯನ್ನು ನಿಯಂತ್ರಿಸಲು ಘಟನೆಯ ಸ್ಥಳಕ್ಕೆ ಧಾವಿಸಿವೆ ಎಂದು ವರದಿಯಲ್ಲಿ ಹೇಳಿದೆ. ರಕ್ಷಣಾ ತಂಡಗಳು ಬರುವುದಕ್ಕೆ ವಿಳಂಬವಾಗಿದ್ದು ಕಟ್ಟಡದ ಮೂರನೇ ಮಹಡಿಯಿಂದ ಮೊದಲ ಮಹಡಿಗೆ ಮತ್ತು ವಸತಿ ಅಪಾರ್ಟ್‌ಮೆಂಟ್‌ಗಳು ಇರುವ ಮೇಲಿನ ವಿಭಾಗಗಳಿಗೆ ವೇಗವಾಗಿ ಹರಡುತ್ತಿರುವ ಕಾರಣ ಬೆಂಕಿಯ ತೀವ್ರತೆಯನ್ನು ಹೆಚ್ಚಿಸಿದೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ. ಮೋನಾಲ್ ರೆಸ್ಟೊರೆಂಟ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಇಡೀ ಫುಡ್ ಕೋರ್ಟ್ ನಲ್ಲಿ ಬೆಂಕಿಯಾವರಿಸಿದೆ ಎಂದು ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿರುವಾಗ ಯಾವುದೇ ಗಾಯ ಅಥವಾ ಸಾವುನೋವುಗಳನ್ನು ತಪ್ಪಿಸಲು ಅಧಿಕಾರಿಗಳು ಮಾಲ್ ನಲ್ಲಿರುವ ಜನರನ್ನು ಸ್ಥಳಾಂತರಿಸುತ್ತಿದ್ದಾರೆ. ಪಾಕಿಸ್ತಾನದ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾದ ವಿಡಿಯೊ ತುಣುಕಿನಲ್ಲಿ ಗೋಪುರದಿಂದ ಹೊಗೆ ಬರುತ್ತಿರುವುದನ್ನು ತೋರಿಸಿದೆ. ಕಟ್ಟಡದಿಂದ ಹೊರಬರಲು ಪ್ರಯತ್ನಿಸುತ್ತಿರುವಾಗ ಭಯಭೀತರಾದ ಜನರು ಮಾಲ್‌ನ ಎಸ್ಕಲೇಟರ್‌ಗಳ ಕೆಳಗೆ ಓಡುತ್ತಿರುವುದನ್ನು ತೋರಿಸುವ ವಿಡಿಯೊ ತುಣುಕುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅನೇಕರು ಪೋಸ್ಟ್ ಮಾಡಿದ್ದಾರೆ.

Published On - 8:19 pm, Sun, 9 October 22

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ