AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ: ಇಸ್ಲಾಮಾಬಾದ್‌ನಲ್ಲಿರುವ ಸೆಂಟಾರಸ್ ಮಾಲ್‌ನಲ್ಲಿ ಬೆಂಕಿ ಅವಘಡ

ರಕ್ಷಣಾ ತಂಡಗಳು ಬರುವುದಕ್ಕೆ ವಿಳಂಬವಾಗಿದ್ದು ಕಟ್ಟಡದ ಮೂರನೇ ಮಹಡಿಯಿಂದ ಮೊದಲ ಮಹಡಿಗೆ ಮತ್ತು ವಸತಿ ಅಪಾರ್ಟ್‌ಮೆಂಟ್‌ಗಳು ಇರುವ ಮೇಲಿನ ವಿಭಾಗಗಳಿಗೆ ವೇಗವಾಗಿ ಹರಡುತ್ತಿರುವ ಕಾರಣ ಬೆಂಕಿಯ ತೀವ್ರತೆಯನ್ನು ಹೆಚ್ಚಿಸಿದೆ

ಪಾಕಿಸ್ತಾನ: ಇಸ್ಲಾಮಾಬಾದ್‌ನಲ್ಲಿರುವ ಸೆಂಟಾರಸ್ ಮಾಲ್‌ನಲ್ಲಿ ಬೆಂಕಿ ಅವಘಡ
ಸೆಂಟಾರಸ್ ಮಾಲ್‌ನಲ್ಲಿ ಬೆಂಕಿ ಅವಘಡ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Oct 09, 2022 | 8:24 PM

Share

ಇಸ್ಲಾಮಾಬಾದ್‌ನ (Islamabad )ಸೆಂಟಾರಸ್ ಮಾಲ್‌ನ (Centaurus Mall) ಮೂರನೇ ಮಹಡಿಯಲ್ಲಿ ಭಾನುವಾರ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಮೇಲಿನ ಭಾಗದಲ್ಲಿರುವ ವಸತಿ ಅಪಾರ್ಟ್‌ಮೆಂಟ್‌ಗಳು ಸೇರಿದಂತೆ ಇತರ ಮಹಡಿಗಳಲ್ಲಿ ಹರಡಿದೆ ಎಂದು ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ. ಇದುವರೆಗೆ ಯಾವುದೇ ಸಾವು ನೋವು ವರದಿಯಾಗಿಲ್ಲ. ಅಗ್ನಿಶಾಮಕ ವಾಹನಗಳು ಸಹ ಬೆಂಕಿಯನ್ನು ನಿಯಂತ್ರಿಸಲು ಘಟನೆಯ ಸ್ಥಳಕ್ಕೆ ಧಾವಿಸಿವೆ ಎಂದು ವರದಿಯಲ್ಲಿ ಹೇಳಿದೆ. ರಕ್ಷಣಾ ತಂಡಗಳು ಬರುವುದಕ್ಕೆ ವಿಳಂಬವಾಗಿದ್ದು ಕಟ್ಟಡದ ಮೂರನೇ ಮಹಡಿಯಿಂದ ಮೊದಲ ಮಹಡಿಗೆ ಮತ್ತು ವಸತಿ ಅಪಾರ್ಟ್‌ಮೆಂಟ್‌ಗಳು ಇರುವ ಮೇಲಿನ ವಿಭಾಗಗಳಿಗೆ ವೇಗವಾಗಿ ಹರಡುತ್ತಿರುವ ಕಾರಣ ಬೆಂಕಿಯ ತೀವ್ರತೆಯನ್ನು ಹೆಚ್ಚಿಸಿದೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ. ಮೋನಾಲ್ ರೆಸ್ಟೊರೆಂಟ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಇಡೀ ಫುಡ್ ಕೋರ್ಟ್ ನಲ್ಲಿ ಬೆಂಕಿಯಾವರಿಸಿದೆ ಎಂದು ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿರುವಾಗ ಯಾವುದೇ ಗಾಯ ಅಥವಾ ಸಾವುನೋವುಗಳನ್ನು ತಪ್ಪಿಸಲು ಅಧಿಕಾರಿಗಳು ಮಾಲ್ ನಲ್ಲಿರುವ ಜನರನ್ನು ಸ್ಥಳಾಂತರಿಸುತ್ತಿದ್ದಾರೆ. ಪಾಕಿಸ್ತಾನದ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾದ ವಿಡಿಯೊ ತುಣುಕಿನಲ್ಲಿ ಗೋಪುರದಿಂದ ಹೊಗೆ ಬರುತ್ತಿರುವುದನ್ನು ತೋರಿಸಿದೆ. ಕಟ್ಟಡದಿಂದ ಹೊರಬರಲು ಪ್ರಯತ್ನಿಸುತ್ತಿರುವಾಗ ಭಯಭೀತರಾದ ಜನರು ಮಾಲ್‌ನ ಎಸ್ಕಲೇಟರ್‌ಗಳ ಕೆಳಗೆ ಓಡುತ್ತಿರುವುದನ್ನು ತೋರಿಸುವ ವಿಡಿಯೊ ತುಣುಕುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅನೇಕರು ಪೋಸ್ಟ್ ಮಾಡಿದ್ದಾರೆ.

Published On - 8:19 pm, Sun, 9 October 22

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್