AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maldives: ಮಾಲ್ಡೀವ್ಸ್​ನಲ್ಲಿ ಭಾರೀ ಅಗ್ನಿ ದುರಂತ, 9 ಭಾರತೀಯರು ಸೇರಿ 10 ಜನ ಸಾವು

ಮಾಲ್ಡೀವ್ಸ್ ರಾಜಧಾನಿ ಮಾಲೆಯ ಇಕ್ಕಟ್ಟಾದ ವಸತಿಗೃಹದಲ್ಲಿ ಭಾರೀ ಅಗ್ನಿ ದುರಂತ. ಬೇರೆ ಬೇರೆ ದೇಶದಿಂದ ಇಲ್ಲಿ ಕೆಲಸ ಬಂದಿದ್ದು, ಒಂದೇ ಕಟ್ಟದಲ್ಲಿ ವಾಸವಾಗಿದ್ದರು. ಇದೀಗ ಈ ಅಗ್ನಿ ದುರಂತದಲ್ಲಿ 10 ಜನ ಸಾವನ್ನಪಿದ್ದಾರೆ.

Maldives: ಮಾಲ್ಡೀವ್ಸ್​ನಲ್ಲಿ ಭಾರೀ ಅಗ್ನಿ ದುರಂತ, 9 ಭಾರತೀಯರು ಸೇರಿ 10 ಜನ ಸಾವು
Massive fire
TV9 Web
| Edited By: |

Updated on:Nov 10, 2022 | 12:18 PM

Share

ಮಾಲೆ: ಮಾಲ್ಡೀವ್ಸ್ ರಾಜಧಾನಿ ಮಾಲೆಯ ಇಕ್ಕಟ್ಟಾದ ವಸತಿಗೃಹದಲ್ಲಿ ಭಾರೀ ಅಗ್ನಿ ದುರಂತ ನಡೆದಿದೆ. ಬೇರೆ ಬೇರೆ ದೇಶದಿಂದ ಇಲ್ಲಿ ಕೆಲಸ ಬಂದಿದ್ದಾರೆ. ಒಂದೇ ಕಟ್ಟದಲ್ಲಿ ವಾಸವಾಗಿದ್ದರು. ಇದೀಗ ಈ ಅಗ್ನಿ ದುರಂತದಲ್ಲಿ 10 ಜನ ಸಾವನ್ನಪಿದ್ದಾರೆ ಎಂದು ಹೇಳಿಲಾಗಿದೆ. ಇದರಲ್ಲಿ 9 ಜನ ಭಾರತೀಯರು ಎಂದು ವರದಿಯಲ್ಲಿ ತಿಳಿಸಲಾಗಿದೆ. ಅನೇಕರಿಗೆ ಗಾಯಲಾಗಿದ್ದು, ಅಗ್ನಿಶಾಮಕ ದಳ ಈಗಾಗಲೇ ಸ್ಥಳಕ್ಕೆ ಬಂದಿದ್ದು ಬೆಂಕಿ ನಂದಿಸುವ ಕೆಲಸವನ್ನು ಮಾಡುತ್ತಿದೆ. ಇಕ್ಕಟ್ಟಾದ ವಸತಿಗೃಹಗಳಲ್ಲಿ ಬೆಂಕಿ ಆವರಿಸಿದ್ದರಿಂದ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ಸೇವೆ ತಿಳಿಸಿದೆ. ಬೆಂಕಿಯಲ್ಲಿ ಧ್ವಂಸಗೊಂಡ ಕಟ್ಟಡದ ಮೇಲಿನ ಮಹಡಿಯಿಂದ ಅಧಿಕಾರಿಗಳು 10 ಮೃತದೇಹಗಳನ್ನು ಹೊರತೆಗೆದಿದ್ದಾರೆ.

ನೆಲ ಅಂತಸ್ತಿನ ವಾಹನ ರಿಪೇರಿ ಗ್ಯಾರೇಜ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ನಾವು 10 ಶವಗಳನ್ನು ಪತ್ತೆ ಮಾಡಿದ್ದೇವೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಬೆಂಕಿಯನ್ನು ನಂದಿಸಲು ಸುಮಾರು ನಾಲ್ಕು ಗಂಟೆಗಳನ್ನು ತೆಗೆದುಕೊಂಡಿತು ಎಂದು ಸುದ್ದಿ ಸಂಸ್ಥೆ ಎಎಫ್‌ಪಿ ತಿಳಿಸಿದೆ. ಬೆಂಕಿಯಲ್ಲಿ ಸಾವನ್ನಪ್ಪಿದ ಇನ್ನೊಬ್ಬ ವ್ಯಕ್ತಿ ಬಾಂಗ್ಲಾದೇಶದ ಪ್ರಜೆ ಎಂದು ಭದ್ರತಾ ಅಧಿಕಾರಿಯನ್ನು ಉಲ್ಲೇಖಿಸಿ ಎಎಫ್‌ಪಿ ವರದಿ ಮಾಡಿದೆ.

ಬೇರೆ ಬೇರೆ ದೇಶದಿಂದ ಇಲ್ಲಿಗೆ ಬಂದಿದ್ದ ಮತ್ತು ಮಾಲ್ಡೀವ್ಸ್​ನಲ್ಲಿ ವಾಸವಾಗಿದ್ದ ಉದ್ಯೋಗಿಗಳು ಈ ಕಟ್ಟದಲ್ಲಿ ಅರ್ಧದಷ್ಟು ಜನ ಇದ್ದರು ಮತ್ತು ಹೆಚ್ಚಾಗಿ ಬಾಂಗ್ಲಾದೇಶ, ಭಾರತ, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾದಿಂದ ಬಂದವರು ಎಂದು ಹೇಳಲಾಗುತ್ತದೆ. ಯಾವುದೇ ಸಹಾಯಕ್ಕಾಗಿ, HCI ಅನ್ನು ಈ ಸಂಖ್ಯೆಗಳಲ್ಲಿ  ಸಂಪರ್ಕಿಸಿ ಎಂದು +9607361452 ; +9607790701  ಮಾಲ್ಡೀವ್ಸ್ ಟ್ವಿಟ್ ಮಾಡಿದೆ.

Published On - 12:10 pm, Thu, 10 November 22

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ