AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕೋ ಶಾಪಿಂಗ್ ಸೆಂಟರ್‌ನಲ್ಲಿ ಭಾರೀ ಬೆಂಕಿ; 7,000 ಚದರ ಮೀಟರ್ ವ್ಯಾಪ್ತಿಯಲ್ಲಿ ಹಬ್ಬಿದ ಜ್ವಾಲೆ

ಉತ್ತರ ಉಪನಗರವಾದ ಖಿಮ್ಕಿಯಲ್ಲಿರುವ ಮೆಗಾ ಖಿಮ್ಕಿ ಶಾಪಿಂಗ್ ಸೆಂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಸ್ಕೋದಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡಕ್ಕೆ ಕಾರಣ ದುಷ್ಕರ್ಮಿಗಳು ಬೆಂಕಿ ಹಚ್ಚಿರುವುದಾಗಿರಬಹುದು ಎಂದು ತುರ್ತುಸೇವೆಗಳು ಹೇಳಿವೆ

ಮಾಸ್ಕೋ ಶಾಪಿಂಗ್ ಸೆಂಟರ್‌ನಲ್ಲಿ ಭಾರೀ ಬೆಂಕಿ; 7,000 ಚದರ ಮೀಟರ್ ವ್ಯಾಪ್ತಿಯಲ್ಲಿ ಹಬ್ಬಿದ ಜ್ವಾಲೆ
ಶಾಪಿಂಗ್ ಮಾಲ್ ನಲ್ಲಿ ಹಬ್ಬಿದ ಬೆಂಕಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Dec 09, 2022 | 2:24 PM

Share

ರಷ್ಯಾದ(Russia) ಅಗ್ನಿಶಾಮಕ ದಳದವರು ಶುಕ್ರವಾರ ಮಾಸ್ಕೋ ಉಪನಗರದಲ್ಲಿರುವ (Moscow suburb)ಶಾಪಿಂಗ್ ಸೆಂಟರ್‌ನಲ್ಲಿ ಸಂಭವಿಸಿದ 7,000 ಚದರ ಮೀಟರ್ ವ್ಯಾಪ್ತಿಯಲ್ಲಿ ಹರಡಿದ ಬೆಂಕಿ ನಂದಿಸಲು ಹರಸಾಹಸ ಪಟ್ಟರು ಎಂದು ತುರ್ತು ಸೇವೆಗಳು ತಿಳಿಸಿವೆ. ಮಾಸ್ಕೋ ಪ್ರದೇಶದಲ್ಲಿ ಅಗ್ನಿಶಾಮಕ ದಳದವರು 7,000 ಚದರ ಮೀಟರ್ ವ್ಯಾಪ್ತಿಯಲ್ಲಿನ ಬೆಂಕಿಯನ್ನು ನಂದಿಸುತ್ತಿದ್ದಾರೆ ಎಂದು ರಷ್ಯಾದ ತುರ್ತು ಪರಿಸ್ಥಿತಿಗಳ ಸಚಿವಾಲಯ ಹೇಳಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ಉತ್ತರ ಉಪನಗರವಾದ ಖಿಮ್ಕಿಯಲ್ಲಿರುವ ಮೆಗಾ ಖಿಮ್ಕಿ ಶಾಪಿಂಗ್ ಸೆಂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಸ್ಕೋದಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡಕ್ಕೆ ಕಾರಣ ದುಷ್ಕರ್ಮಿಗಳು ಬೆಂಕಿ ಹಚ್ಚಿರುವುದಾಗಿರಬಹುದು ಎಂದು ತುರ್ತುಸೇವೆಗಳು ಹೇಳಿರುವುದಾಗಿ ರಷ್ಯಾದ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಇದೊಂದು ಉದ್ದೇಶಪೂರ್ವಕ ನಡೆದ ಕೃತ್ಯ ಎಂದು ಇಂಟರ್‌ಫ್ಯಾಕ್ಸ್ ಸುದ್ದಿ ಸಂಸ್ಥೆ ತಿಳಿಸಿದೆ. ಬೆಂಕಿ ಹಚ್ಚಿದ್ದೇ ಈ ಘಟನೆಗೆ ಕಾರಣವೆಂದು ಶಂಕಿಸಲಾಗಿದೆ ಎಂದು ಸ್ಪುಟ್ನಿಕ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಉಕ್ರೇನ್ ಸಂಘರ್ಷದ ಹಿನ್ನೆಲೆಯಲ್ಲಿ ಕಂಪನಿಗಳು ರಷ್ಯಾದಿಂದ ನಿರ್ಗಮಿಸುವ ಮೊದಲು ರಷ್ಯಾದ ರಾಜಧಾನಿಯ ಸಮೀಪವಿರುವ ಖಿಮ್ಕಿಯಲ್ಲಿರುವ ಮೆಗಾ ಶಾಪಿಂಗ್ ಕೇಂದ್ರವು ಹೆಚ್ಚಿನ ಸಂಖ್ಯೆಯ ಪಾಶ್ಚಿಮಾತ್ಯ ರಿಟೇಲ್ ಅಂಗಡಿಗಳ ನೆಲೆಯಾಗಿತ್ತು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ