AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕೋ ಶಾಪಿಂಗ್ ಸೆಂಟರ್‌ನಲ್ಲಿ ಭಾರೀ ಬೆಂಕಿ; 7,000 ಚದರ ಮೀಟರ್ ವ್ಯಾಪ್ತಿಯಲ್ಲಿ ಹಬ್ಬಿದ ಜ್ವಾಲೆ

ಉತ್ತರ ಉಪನಗರವಾದ ಖಿಮ್ಕಿಯಲ್ಲಿರುವ ಮೆಗಾ ಖಿಮ್ಕಿ ಶಾಪಿಂಗ್ ಸೆಂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಸ್ಕೋದಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡಕ್ಕೆ ಕಾರಣ ದುಷ್ಕರ್ಮಿಗಳು ಬೆಂಕಿ ಹಚ್ಚಿರುವುದಾಗಿರಬಹುದು ಎಂದು ತುರ್ತುಸೇವೆಗಳು ಹೇಳಿವೆ

ಮಾಸ್ಕೋ ಶಾಪಿಂಗ್ ಸೆಂಟರ್‌ನಲ್ಲಿ ಭಾರೀ ಬೆಂಕಿ; 7,000 ಚದರ ಮೀಟರ್ ವ್ಯಾಪ್ತಿಯಲ್ಲಿ ಹಬ್ಬಿದ ಜ್ವಾಲೆ
ಶಾಪಿಂಗ್ ಮಾಲ್ ನಲ್ಲಿ ಹಬ್ಬಿದ ಬೆಂಕಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Dec 09, 2022 | 2:24 PM

Share

ರಷ್ಯಾದ(Russia) ಅಗ್ನಿಶಾಮಕ ದಳದವರು ಶುಕ್ರವಾರ ಮಾಸ್ಕೋ ಉಪನಗರದಲ್ಲಿರುವ (Moscow suburb)ಶಾಪಿಂಗ್ ಸೆಂಟರ್‌ನಲ್ಲಿ ಸಂಭವಿಸಿದ 7,000 ಚದರ ಮೀಟರ್ ವ್ಯಾಪ್ತಿಯಲ್ಲಿ ಹರಡಿದ ಬೆಂಕಿ ನಂದಿಸಲು ಹರಸಾಹಸ ಪಟ್ಟರು ಎಂದು ತುರ್ತು ಸೇವೆಗಳು ತಿಳಿಸಿವೆ. ಮಾಸ್ಕೋ ಪ್ರದೇಶದಲ್ಲಿ ಅಗ್ನಿಶಾಮಕ ದಳದವರು 7,000 ಚದರ ಮೀಟರ್ ವ್ಯಾಪ್ತಿಯಲ್ಲಿನ ಬೆಂಕಿಯನ್ನು ನಂದಿಸುತ್ತಿದ್ದಾರೆ ಎಂದು ರಷ್ಯಾದ ತುರ್ತು ಪರಿಸ್ಥಿತಿಗಳ ಸಚಿವಾಲಯ ಹೇಳಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ಉತ್ತರ ಉಪನಗರವಾದ ಖಿಮ್ಕಿಯಲ್ಲಿರುವ ಮೆಗಾ ಖಿಮ್ಕಿ ಶಾಪಿಂಗ್ ಸೆಂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಸ್ಕೋದಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡಕ್ಕೆ ಕಾರಣ ದುಷ್ಕರ್ಮಿಗಳು ಬೆಂಕಿ ಹಚ್ಚಿರುವುದಾಗಿರಬಹುದು ಎಂದು ತುರ್ತುಸೇವೆಗಳು ಹೇಳಿರುವುದಾಗಿ ರಷ್ಯಾದ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಇದೊಂದು ಉದ್ದೇಶಪೂರ್ವಕ ನಡೆದ ಕೃತ್ಯ ಎಂದು ಇಂಟರ್‌ಫ್ಯಾಕ್ಸ್ ಸುದ್ದಿ ಸಂಸ್ಥೆ ತಿಳಿಸಿದೆ. ಬೆಂಕಿ ಹಚ್ಚಿದ್ದೇ ಈ ಘಟನೆಗೆ ಕಾರಣವೆಂದು ಶಂಕಿಸಲಾಗಿದೆ ಎಂದು ಸ್ಪುಟ್ನಿಕ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಉಕ್ರೇನ್ ಸಂಘರ್ಷದ ಹಿನ್ನೆಲೆಯಲ್ಲಿ ಕಂಪನಿಗಳು ರಷ್ಯಾದಿಂದ ನಿರ್ಗಮಿಸುವ ಮೊದಲು ರಷ್ಯಾದ ರಾಜಧಾನಿಯ ಸಮೀಪವಿರುವ ಖಿಮ್ಕಿಯಲ್ಲಿರುವ ಮೆಗಾ ಶಾಪಿಂಗ್ ಕೇಂದ್ರವು ಹೆಚ್ಚಿನ ಸಂಖ್ಯೆಯ ಪಾಶ್ಚಿಮಾತ್ಯ ರಿಟೇಲ್ ಅಂಗಡಿಗಳ ನೆಲೆಯಾಗಿತ್ತು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?