AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮುವಿನ ಸೇನಾ ಶಿಬಿರದ ಮೇಲಿನ ದಾಳಿಯ ಮಾಸ್ಟರ್​ಮೈಂಡ್ ಖ್ವಾಜಾ ಶಾಹಿದ್ ​ಮೃತದೇಹ ರುಂಡ, ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆ

2018ರಲ್ಲಿ ಜಮ್ಮುವಿನಲ್ಲಿ ಸೇನಾ ಶಿಬಿರದ ಮೇಲಿನ ದಾಳಿಯ ಮಾಸ್ಟರ್​ಮೈಂಡ್ ​ ಪಿಒಕೆಯಲ್ಲಿರುವ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೃತನನ್ನು ಖ್ವಾಜಾ ಶಾಹಿದ್ ಎಂದು ಗುರುತಿಸಲಾಗಿದೆ. ಖ್ವಾಜಾ ಶಾಹಿದ್​​ನ ಶಿರಚ್ಛೇದಿತ ಶವ ಪತ್ತೆಯಾಗಿದೆ. ಕೆಲ ದಿನಗಳ ಹಿಂದೆ ಖ್ವಾಜಾ ಶಾಹಿದ್ ಅವರನ್ನು ಅಪಹರಿಸಲಾಗಿತ್ತು.

ಜಮ್ಮುವಿನ ಸೇನಾ ಶಿಬಿರದ ಮೇಲಿನ ದಾಳಿಯ ಮಾಸ್ಟರ್​ಮೈಂಡ್ ಖ್ವಾಜಾ ಶಾಹಿದ್ ​ಮೃತದೇಹ ರುಂಡ, ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆ
ಖ್ವಾಜಾ ಶಾಹಿದ್Image Credit source: Times Now
ನಯನಾ ರಾಜೀವ್
|

Updated on:Nov 06, 2023 | 11:43 AM

Share

2018ರಲ್ಲಿ ಜಮ್ಮುವಿನಲ್ಲಿ ಸೇನಾ ಶಿಬಿರದ ಮೇಲಿನ ದಾಳಿಯ ಮಾಸ್ಟರ್​ಮೈಂಡ್ ​ ಪಿಒಕೆಯಲ್ಲಿರುವ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೃತನನ್ನು ಖ್ವಾಜಾ ಶಾಹಿದ್ ಎಂದು ಗುರುತಿಸಲಾಗಿದೆ. ಖ್ವಾಜಾ ಶಾಹಿದ್​​ನ ಶಿರಚ್ಛೇದಿತ ಶವ ಪತ್ತೆಯಾಗಿದೆ. ಕೆಲ ದಿನಗಳ ಹಿಂದೆ ಖ್ವಾಜಾ ಶಾಹಿದ್ ಅವರನ್ನು ಅಪಹರಿಸಲಾಗಿತ್ತು.

ಇಬ್ಬರೂ ಭಯೋತ್ಪಾದಕರ ಮೃತದೇಹಗಳು ನೀಲಂ ಕಣಿವೆಯಲ್ಲಿರುವ ಪಾಕಿಸ್ತಾನ ಸೇನಾ ನೆಲೆಯಲ್ಲಿವೆ. ಫೆಬ್ರವರಿ 10, 2018 ರ ಮುಂಜಾನೆ, ಭಯೋತ್ಪಾದಕರ ಗುಂಪು ಜಮ್ಮು ಬಳಿ ಇರುವ ಸುಂಜುವಾನ್ ಮಿಲಿಟರಿ ಕ್ಯಾಂಪ್ ಅನ್ನು ಪ್ರವೇಶಿಸಿತು. ಯೋಧರು ಮತ್ತು ಅವರ ಕುಟುಂಬಗಳನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿ ಗ್ರೆನೇಡ್‌ಗಳನ್ನು ಎಸೆದಿದ್ದರು.

ದಾಳಿಯಲ್ಲಿ ಆರು ಸೈನಿಕರು ಮತ್ತು ಒಬ್ಬ ನಾಗರಿಕರು ಸಾವನ್ನಪ್ಪಿದರು ಮತ್ತು ಹಲವರು ಗಾಯಗೊಂಡರು. ಭಾರತೀಯ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರೂ ಹತರಾಗಿದ್ದರು.

ಮತ್ತಷ್ಟು ಓದಿ: ವಿಡಿಯೋ ವೈರಲ್: ಪಾಕ್​​ ವಾಯುನೆಲೆಯ ಮೇಲೆ ಉಗ್ರರ ದಾಳಿ, ಒಟ್ಟು ಆರು ಸಾವು

ದಾಳಿಯ ಸಮಯದಲ್ಲಿ, ಭಯೋತ್ಪಾದಕರು ಶಿಬಿರದ ಕೆಲವು ನಿವಾಸಿಗಳನ್ನು ಒತ್ತೆಯಾಳಾಗಿರಿಸಿಕೊಂಡಿದ್ದರು. ಭಾರತೀಯ ಭದ್ರತಾ ಪಡೆಗಳು ಒತ್ತೆಯಾಳುಗಳನ್ನು ಮುಕ್ತಗೊಳಿಸಲು ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು.

ಕಳೆದ ತಿಂಗಳು ಜೈಷ್ ಮುಖ್ಯಸ್ಥ ಮಸೂದ್ ಅಜರ್​ನ ಆಪ್ತ ದಾವೂದ್ ಮಲಿಕ್, ವಜಿರಿಸ್ತಾನ್​ನಲ್ಲಿ ಹಗಲಿನಲ್ಲಿಯೇ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:42 am, Mon, 6 November 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?