AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾದ ಮೋಸ್ಟ್ ವಾಂಟೆಂಡ್ ಪಟ್ಟಿಯಲ್ಲಿ ಸಿಧು ಮೂಸೆವಲಾ ಹತ್ಯೆಯ ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್

ಕೆನಡಾದಲ್ಲಿದ್ದಾರೆ ಎಂದು ನಂಬಲಾದ ಬ್ರಾರ್, ರಜತ್ ಕುಮಾರ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಗುರ್ಲಾಲ್ ಸಿಂಗ್ ಮತ್ತು ಮೂಸೆವಾಲಾ ಹತ್ಯೆಗೆ ಯೋಜನೆ ರೂಪಿಸಿದ ಆರೋಪ ಹೊತ್ತಿದ್ದಾರೆ.

ಕೆನಡಾದ ಮೋಸ್ಟ್ ವಾಂಟೆಂಡ್ ಪಟ್ಟಿಯಲ್ಲಿ ಸಿಧು ಮೂಸೆವಲಾ ಹತ್ಯೆಯ ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್
ಗೋಲ್ಡಿ ಬ್ರಾರ್
ರಶ್ಮಿ ಕಲ್ಲಕಟ್ಟ
|

Updated on: May 02, 2023 | 2:47 PM

Share

ಪಂಜಾಬಿ ಗಾಯಕ ಸಿಧು ಮೂಸೆವಾಲಾ(Sidhu Moosewala) ಹತ್ಯೆಯ ಹಿಂದಿನ ಮಾಸ್ಟರ್‌ಮೈಂಡ್ ಗೋಲ್ಡಿ ಬ್ರಾರ್ (Goldy Brar), ಕೆನಡಾದ 25 ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದಾರೆ. ಇಂಟರ್ ಪೋಲ್ ಒಟ್ಟಾವಾದ ಫ್ಯುಜಿಟಿವ್ ಅಪ್ರೆಹೆನ್ಶನ್ ಸಪೋರ್ಟ್ ಟೀಮ್ (FAST) ಪರಾರಿಯಾಗಿರುವ ಸತಿಂದರ್ ಜಿತ್ ಸಿಂಗ್ ಗೋಲ್ಡಿ ಬ್ರಾರ್ ಅನ್ನು ಮೇ 01, 2023 ರಂದು BOLO ಕಾರ್ಯಕ್ರಮದಡಿಯಲ್ಲಿ 25 ಮೋಸ್ಟ್ ವಾಂಟೆಡ್ ಪ್ಯುಜಿಟಿವ್‌ಗಳ ಪಟ್ಟಿಯಲ್ಲಿ ಸೇರಿಸಿದೆ  ಎಂದು ನವದೆಹಲಿಯಲ್ಲಿರುವ ಕೆನಡಾದ ಹೈಕಮಿಷನ್ ಮಂಗಳವಾರ ತಮ್ಮ ಹೇಳಿಕೆಯಲ್ಲಿ ತಿಳಿಸಿದೆ.

ಮೂಸೆವಾಲಾ ಹತ್ಯೆಯಲ್ಲಿ ಬ್ರಾರ್ ಪಾತ್ರ ಬಗ್ಗೆ ರಾಯಲ್ ಕೆನಡಿಯನ್ ಮೌಂಟೆಡ್ ಪೋಲೀಸ್ (RCMP) ತನಿಖೆ ನಡೆಸುತ್ತಿದೆ.ಭಾರತದಲ್ಲಿ ಮಾಡಿದ ಅಪರಾಧಗಳು ಬಹಳ ಗಂಭೀರವಾಗಿದೆ ಮತ್ತು ಕೆನಡಾದ ಪೊಲೀಸರು ಇದರ ತನಿಖೆ ನಡೆಸುತ್ತಾರೆ ಎಂದು ಅದು ಹೇಳಿದೆ. ಆದಾಗ್ಯೂ, ಕೆನಡಾದ ಪೊಲೀಸರು ಯಾವುದೇ ಕ್ರಿಮಿನಲ್ ಅಪರಾಧಗಳಿಗೆ ಬ್ರಾರ್ ವಿರುದ್ಧ ಇನ್ನೂ ಆರೋಪ ಮಾಡಿಲ್ಲ.

ಕೆನಡಾದಲ್ಲಿದ್ದಾರೆ ಎಂದು ನಂಬಲಾದ ಬ್ರಾರ್, ರಜತ್ ಕುಮಾರ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಗುರ್ಲಾಲ್ ಸಿಂಗ್ ಮತ್ತು ಮೂಸೆವಾಲಾ ಹತ್ಯೆಗೆ ಯೋಜನೆ ರೂಪಿಸಿದ ಆರೋಪ ಹೊತ್ತಿದ್ದಾರೆ.

ಮೇ 29 ರಂದು ಪಂಜಾಬ್‌ನ ಮಾನ್ಸಾ ಜಿಲ್ಲೆಯ ಜಹಾವರ್ಕೆ ಗ್ರಾಮದಲ್ಲಿ ಮೂಸೆವಾಲಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಬ್ರಾರ್ ವಿರುದ್ಧ ಕೊಲೆ, ಕ್ರಿಮಿನಲ್ ಪಿತೂರಿ ಮತ್ತು ಅಕ್ರಮ ಬಂದೂಕುಗಳ ಪೂರೈಕೆ ಮತ್ತು ಇಂಟರ್‌ಪೋಲ್ ಕೊಲೆ ಯತ್ನದ ಆರೋಪ ಹೊರಿಸಲಾಗಿದೆ. ಜೂನ್ 2022 ರಲ್ಲಿ, ಭಾರತವು ಬ್ರಾರ್‌ಗಾಗಿ ಇಂಟರ್‌ಪೋಲ್ ರೆಡ್ ನೋಟಿಸ್ ಪಡೆದಿದೆ.

ಇದನ್ನೂ ಓದಿ: Sharad Pawar: ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಶರದ್ ಪವಾರ್​​ ರಾಜೀನಾಮೆ

ಯಾರು ಈ ಗೋಲ್ಡಿ ಬ್ರಾರ್ ?

ಪಂಜಾಬ್‌ನ ಶ್ರೀ ಮುಕ್ತಸರ್ ಸಾಹಿಬ್ ಮೂಲದ ಬ್ರಾರ್, ಡೇರಾ ಸಚ್ಚಾ ಸೌದಾ ಅನುಯಾಯಿ ಹತ್ಯೆ ಪ್ರಕರಣದ ಪ್ರಮುಖ ಸಂಚುಕೋರ. ಎಎಸ್‌ಐ ಶಂಶೇರ್ ಸಿಂಗ್ ಅವರ ಪುತ್ರ ಬ್ರಾರ್ 2017ರಲ್ಲಿ ವಿದ್ಯಾರ್ಥಿ ವೀಸಾದ ಮೇಲೆ ಕೆನಡಾಕ್ಕೆ ತೆರಳಿದ್ದರು. ತಾನು ಡಾಕ್ಟರ್ ಎಂದು ಹೇಳಿಕೊಂಡಿದ್ದ ಬ್ರಾರ್ ಫೇಸ್‌ಬುಕ್‌ನಲ್ಲಿ ಮೂಸೆವಾಲಾ ಹತ್ಯೆಯ ಹೊಣೆ ಹೊತ್ತುಕೊಂಡಿದ್ದರು.

ವರದಿಗಳ ಪ್ರಕಾರ, ಲಾರೆನ್ಸ್ ಬಿಷ್ಣೋಯ್ ಜೈಲಿಗೆ ಹೋದ ನಂತರ ಬ್ರಾರ್ ಬಿಷ್ಣೋಯ್ ಗ್ಯಾಂಗ್ ನೇತೃತ್ವ ವಹಿಸಿಕೊಂಡರು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ