AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾದ ಮೋಸ್ಟ್ ವಾಂಟೆಂಡ್ ಪಟ್ಟಿಯಲ್ಲಿ ಸಿಧು ಮೂಸೆವಲಾ ಹತ್ಯೆಯ ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್

ಕೆನಡಾದಲ್ಲಿದ್ದಾರೆ ಎಂದು ನಂಬಲಾದ ಬ್ರಾರ್, ರಜತ್ ಕುಮಾರ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಗುರ್ಲಾಲ್ ಸಿಂಗ್ ಮತ್ತು ಮೂಸೆವಾಲಾ ಹತ್ಯೆಗೆ ಯೋಜನೆ ರೂಪಿಸಿದ ಆರೋಪ ಹೊತ್ತಿದ್ದಾರೆ.

ಕೆನಡಾದ ಮೋಸ್ಟ್ ವಾಂಟೆಂಡ್ ಪಟ್ಟಿಯಲ್ಲಿ ಸಿಧು ಮೂಸೆವಲಾ ಹತ್ಯೆಯ ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್
ಗೋಲ್ಡಿ ಬ್ರಾರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 02, 2023 | 2:47 PM

Share

ಪಂಜಾಬಿ ಗಾಯಕ ಸಿಧು ಮೂಸೆವಾಲಾ(Sidhu Moosewala) ಹತ್ಯೆಯ ಹಿಂದಿನ ಮಾಸ್ಟರ್‌ಮೈಂಡ್ ಗೋಲ್ಡಿ ಬ್ರಾರ್ (Goldy Brar), ಕೆನಡಾದ 25 ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದಾರೆ. ಇಂಟರ್ ಪೋಲ್ ಒಟ್ಟಾವಾದ ಫ್ಯುಜಿಟಿವ್ ಅಪ್ರೆಹೆನ್ಶನ್ ಸಪೋರ್ಟ್ ಟೀಮ್ (FAST) ಪರಾರಿಯಾಗಿರುವ ಸತಿಂದರ್ ಜಿತ್ ಸಿಂಗ್ ಗೋಲ್ಡಿ ಬ್ರಾರ್ ಅನ್ನು ಮೇ 01, 2023 ರಂದು BOLO ಕಾರ್ಯಕ್ರಮದಡಿಯಲ್ಲಿ 25 ಮೋಸ್ಟ್ ವಾಂಟೆಡ್ ಪ್ಯುಜಿಟಿವ್‌ಗಳ ಪಟ್ಟಿಯಲ್ಲಿ ಸೇರಿಸಿದೆ  ಎಂದು ನವದೆಹಲಿಯಲ್ಲಿರುವ ಕೆನಡಾದ ಹೈಕಮಿಷನ್ ಮಂಗಳವಾರ ತಮ್ಮ ಹೇಳಿಕೆಯಲ್ಲಿ ತಿಳಿಸಿದೆ.

ಮೂಸೆವಾಲಾ ಹತ್ಯೆಯಲ್ಲಿ ಬ್ರಾರ್ ಪಾತ್ರ ಬಗ್ಗೆ ರಾಯಲ್ ಕೆನಡಿಯನ್ ಮೌಂಟೆಡ್ ಪೋಲೀಸ್ (RCMP) ತನಿಖೆ ನಡೆಸುತ್ತಿದೆ.ಭಾರತದಲ್ಲಿ ಮಾಡಿದ ಅಪರಾಧಗಳು ಬಹಳ ಗಂಭೀರವಾಗಿದೆ ಮತ್ತು ಕೆನಡಾದ ಪೊಲೀಸರು ಇದರ ತನಿಖೆ ನಡೆಸುತ್ತಾರೆ ಎಂದು ಅದು ಹೇಳಿದೆ. ಆದಾಗ್ಯೂ, ಕೆನಡಾದ ಪೊಲೀಸರು ಯಾವುದೇ ಕ್ರಿಮಿನಲ್ ಅಪರಾಧಗಳಿಗೆ ಬ್ರಾರ್ ವಿರುದ್ಧ ಇನ್ನೂ ಆರೋಪ ಮಾಡಿಲ್ಲ.

ಕೆನಡಾದಲ್ಲಿದ್ದಾರೆ ಎಂದು ನಂಬಲಾದ ಬ್ರಾರ್, ರಜತ್ ಕುಮಾರ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಗುರ್ಲಾಲ್ ಸಿಂಗ್ ಮತ್ತು ಮೂಸೆವಾಲಾ ಹತ್ಯೆಗೆ ಯೋಜನೆ ರೂಪಿಸಿದ ಆರೋಪ ಹೊತ್ತಿದ್ದಾರೆ.

ಮೇ 29 ರಂದು ಪಂಜಾಬ್‌ನ ಮಾನ್ಸಾ ಜಿಲ್ಲೆಯ ಜಹಾವರ್ಕೆ ಗ್ರಾಮದಲ್ಲಿ ಮೂಸೆವಾಲಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಬ್ರಾರ್ ವಿರುದ್ಧ ಕೊಲೆ, ಕ್ರಿಮಿನಲ್ ಪಿತೂರಿ ಮತ್ತು ಅಕ್ರಮ ಬಂದೂಕುಗಳ ಪೂರೈಕೆ ಮತ್ತು ಇಂಟರ್‌ಪೋಲ್ ಕೊಲೆ ಯತ್ನದ ಆರೋಪ ಹೊರಿಸಲಾಗಿದೆ. ಜೂನ್ 2022 ರಲ್ಲಿ, ಭಾರತವು ಬ್ರಾರ್‌ಗಾಗಿ ಇಂಟರ್‌ಪೋಲ್ ರೆಡ್ ನೋಟಿಸ್ ಪಡೆದಿದೆ.

ಇದನ್ನೂ ಓದಿ: Sharad Pawar: ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಶರದ್ ಪವಾರ್​​ ರಾಜೀನಾಮೆ

ಯಾರು ಈ ಗೋಲ್ಡಿ ಬ್ರಾರ್ ?

ಪಂಜಾಬ್‌ನ ಶ್ರೀ ಮುಕ್ತಸರ್ ಸಾಹಿಬ್ ಮೂಲದ ಬ್ರಾರ್, ಡೇರಾ ಸಚ್ಚಾ ಸೌದಾ ಅನುಯಾಯಿ ಹತ್ಯೆ ಪ್ರಕರಣದ ಪ್ರಮುಖ ಸಂಚುಕೋರ. ಎಎಸ್‌ಐ ಶಂಶೇರ್ ಸಿಂಗ್ ಅವರ ಪುತ್ರ ಬ್ರಾರ್ 2017ರಲ್ಲಿ ವಿದ್ಯಾರ್ಥಿ ವೀಸಾದ ಮೇಲೆ ಕೆನಡಾಕ್ಕೆ ತೆರಳಿದ್ದರು. ತಾನು ಡಾಕ್ಟರ್ ಎಂದು ಹೇಳಿಕೊಂಡಿದ್ದ ಬ್ರಾರ್ ಫೇಸ್‌ಬುಕ್‌ನಲ್ಲಿ ಮೂಸೆವಾಲಾ ಹತ್ಯೆಯ ಹೊಣೆ ಹೊತ್ತುಕೊಂಡಿದ್ದರು.

ವರದಿಗಳ ಪ್ರಕಾರ, ಲಾರೆನ್ಸ್ ಬಿಷ್ಣೋಯ್ ಜೈಲಿಗೆ ಹೋದ ನಂತರ ಬ್ರಾರ್ ಬಿಷ್ಣೋಯ್ ಗ್ಯಾಂಗ್ ನೇತೃತ್ವ ವಹಿಸಿಕೊಂಡರು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು