AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ, ಸುತ್ತಿಗೆಯಿಂದ 50 ಬಾರಿ ಹೊಡೆದು ಕೊಲೆ

ಅಮೆರಿಕದ ಜಾರ್ಜಿಯಾದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಮಾಡಲಾಗಿದೆ. ವಿವೇಕ್ ಸೈನಿ(25) ಮೃತ ವಿದ್ಯಾರ್ಥಿ ಆತ ಹರ್ಯಾಣದ ಪಂಚಕುಲ ನಿವಾಸಿ. ವಿದ್ಯಾರ್ಥಿಯ ತಲೆಗೆ ವ್ಯಕ್ತಿಯೊಬ್ಬ ಸುತ್ತಿಗೆಯಿಂದ 50 ಬಾರಿ ಹೊಡೆದಿದ್ದಾನೆ ಎಂದು ಹೇಳಲಾಗುತ್ತಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿದ್ದು, ಮೃತದೇಹವನ್ನು ವಶಕ್ಕೆ ಪಡೆದಿದ್ದಾರೆ. ಮರಣೋತ್ತರ ಪರೀಕ್ಷೆಗೆ ರವಾನಿಸಿ ತನಿಖೆ ಆರಂಭಿಸಿದ್ದಾರೆ.

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ, ಸುತ್ತಿಗೆಯಿಂದ 50 ಬಾರಿ ಹೊಡೆದು ಕೊಲೆ
ವಿದ್ಯಾರ್ಥಿImage Credit source: NDTV
ನಯನಾ ರಾಜೀವ್
|

Updated on:Jan 30, 2024 | 8:01 AM

Share

ಅಮೆರಿಕದ ಜಾರ್ಜಿಯಾದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಮಾಡಲಾಗಿದೆ. ವಿವೇಕ್ ಸೈನಿ(25) ಮೃತ ವಿದ್ಯಾರ್ಥಿ ಆತ ಹರ್ಯಾಣದ ಪಂಚಕುಲ ನಿವಾಸಿ. ಆರೋಪಿ ವಿದ್ಯಾರ್ಥಿಯ ತಲೆಗೆ ವ್ಯಕ್ತಿಯೊಬ್ಬ ಸುತ್ತಿಗೆಯಿಂದ 50 ಬಾರಿ ಹೊಡೆದಿದ್ದಾನೆ ಎಂದು ಹೇಳಲಾಗುತ್ತಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿದ್ದು, ಮೃತದೇಹವನ್ನು ವಶಕ್ಕೆ ಪಡೆದಿದ್ದಾರೆ. ಮರಣೋತ್ತರ ಪರೀಕ್ಷೆಗೆ ರವಾನಿಸಿ ತನಿಖೆ ಆರಂಭಿಸಿದ್ದಾರೆ.

ಆರೋಪಿಯನ್ನು ಜೂಲಿಯನ್ ಫಾಕ್ನರ್ ಎಂದು ಗುರುತಿಸಲಾಗಿದ್ದು, ಈತ ಜಾರ್ಜಿಯಾದ ಲಿಥೋನಿಯಾ ನಿವಾಸಿಯಾಗಿದ್ದಾರೆ. ಮಾದಕ ವ್ಯಸನಿ ಕೂಡ ಹೌದು. ಮೃತ ವಿದ್ಯಾರ್ಥಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ, ಕಳೆದ ಕೆಲವು ದಿನಗಳಿಂದ ಈ ಯುವಕನ ಜತೆ ಸಂಪರ್ಕದಲ್ಲಿದ್ದ ಎನ್ನಲಾಗಿದೆ.

ಆರೋಪಿಯು ಕಳೆದ ಕೆಲವು ದಿನಗಳಿಂದ ವಿದ್ಯಾರ್ಥಿ ಬಳಿ ಉಚಿತವಾಗಿ ಆಹಾರ ಪದಾರ್ಥಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಎಂದು ಸ್ನೇಹಿತ ಹೇಳಿದ್ದಾರೆ. ವಿವೇಕ್ ಸೈನಿ ಜನವರಿ 14ರಂದು ಆರೋಪಿಗೆ ಉಚಿತವಾಗಿ ವಸ್ತುಗಳನ್ನು ನೀಡಲು ನಿರಾಕರಿಸಿದ್ದಾನೆ, ಈ ಕಾರಣಕ್ಕೆ ಕೊಲೆಗೆ ಯೋಜನೆ ರೂಪಿಸಿ ವಿವೇಕ್ ತಲೆಗೆ ಸುತ್ತಿಗೆಯಿಂದ ಹೊಡೆದು ಕೆಳಗೆ ಬೀಳಿಸಿ ನಂತರ 50 ಬಾರಿ ಸುತ್ತಿಗೆಯಿಂದ ಹೊಡೆದಿದ್ದಾನೆ.

ಮತ್ತಷ್ಟು ಓದಿ: ನೆಲಮಂಗಲ: ಗುರಾಯಿಸಿ ನಿಂದಿಸಿದ ಯುವಕನಿಗೆ ಚಾಕು ಇರಿತ

ಮಾಹಿತಿ ಪ್ರಕಾರ ಸೈನಿ ಎಂಬಿಎ ಓದಲು ಅಮೆರಿಕಕ್ಕೆ ತೆರಳಿದ್ದ, ರಜೆ ಇದ್ದ ಕಾರಣ ಜನವರಿ 26ರಂದು ಭಾರತಕ್ಕೆ ಬರಬೇಕಿತ್ತು. ಸೈನಿ ಮೃತದೇಹವನ್ನು ಭಾರತಕ್ಕೆ ತರುವಂತೆ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ವಿವೇಕ ಸೈನಿ ಸಾವಿನಿಂದ ನಾವು ದುಃಖಿತರಾಗಿದ್ದೇವೆ ಮತ್ತು ಈ ದಾಳಿಯನ್ನು ಖಂಡಿಸುತ್ತೇವೆ , ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಭಾರತೀಯ ಧೂತಾವಾಸ ಕಚೇರಿ ತಿಳಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:00 am, Tue, 30 January 24

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ