AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೊಮಿನಿಕಾದಲ್ಲಿ ಬಂಧಿಸಲ್ಪಟ್ಟ ದೇಶಭ್ರಷ್ಟ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಮೈಮೇಲೆಲ್ಲ ಗಾಯ; ವಕೀಲರಿಂದ ಗಂಭೀರ ಆರೋಪ

ಇದೀಗ ಮೆಹುಲ್​ ಚೋಸ್ಕಿ ಜೈಲಿನಲ್ಲಿರುವ, ಅವರ ದೇಹದ ಮೇಲೆಲ್ಲ ಗಾಯಗಳಾಗಿರುವ ಫೋಟೋಗಳು ಇಂಡಿಯಾ ಟುಡೆ ಟಿವಿ ಮಾಧ್ಯಮಕ್ಕೆ ಲಭ್ಯವಾಗಿವೆ.

ಡೊಮಿನಿಕಾದಲ್ಲಿ ಬಂಧಿಸಲ್ಪಟ್ಟ ದೇಶಭ್ರಷ್ಟ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಮೈಮೇಲೆಲ್ಲ ಗಾಯ; ವಕೀಲರಿಂದ ಗಂಭೀರ ಆರೋಪ
ಮೆಹುಲ್ ಚೋಸ್ಕಿ
Lakshmi Hegde
|

Updated on:May 30, 2021 | 1:14 PM

Share

ಡೊಮಿನಿಕಾದಲ್ಲಿ ಅರೆಸ್ಟ್​ ಆಗಿದ್ದ ದೇಶಭ್ರಷ್ಟ ವಜ್ರದ ವ್ಯಾಪಾರಿ ಮೆಹುಲ್​ ಚೋಕ್ಸಿ ಅವರ ಕೆಲವು ಫೋಟೋಗಳು ವೈರಲ್​ ಆಗಿವೆ. ಆಂಟುಗುವಾ ಪೌರತ್ವ ಪಡೆದು, ಅಲ್ಲಿಯೇ ನೆಲೆಸಿದ್ದ ಚೋಸ್ಕಿ ತನ್ನ ವಿರುದ್ಧ ಕಾನೂನು ಪ್ರಕ್ರಿಯೆಗಳು ಶುರುವಾಗುತ್ತಿದ್ದಂತೆ ಡೊಮಿನಿಕಾಕ್ಕೆ ಪರಾರಿಯಾಗಿದ್ದರು. ರಾಷ್ಟ್ರವನ್ನು ಅಕ್ರಮವಾಗಿ ಪ್ರವೇಶಿಸಿದ್ದಾರೆ ಎಂಬ ಆರೋಪದ ಮೇಲೆ ಅಲ್ಲಿನ ಪೊಲೀಸರು ಬಂಧಿಸಿದ್ದರು.

ಇದೀಗ ಮೆಹುಲ್​ ಚೋಕ್ಸಿ ಜೈಲಿನಲ್ಲಿರುವ, ಅವರ ದೇಹದ ಮೇಲೆಲ್ಲ ಗಾಯಗಳಾಗಿರುವ ಫೋಟೋಗಳು ಇಂಡಿಯಾ ಟುಡೆ ಟಿವಿ ಮಾಧ್ಯಮಕ್ಕೆ ಲಭ್ಯವಾಗಿವೆ. ಕಬ್ಬಿಣದ ಗೇಟ್​​ನ ಹಿಂದೆ ಚೋಸ್ಕಿ ನಿಂತಿರುವ ಫೋಟೋ ಸಿಕ್ಕಿದ್ದು, ಅವರ ಕಣ್ಣೆಲ್ಲ ಕೆಂಪಾಗಿದ್ದನ್ನು ಫೋಟೋದಲ್ಲಿ ನೋಡಬಹುದು. ಅವರ ಕೈ ಮತ್ತು ಮಣಿಕಟ್ಟಿನ ಬಳಿಯೂ ಗಾಯಗಳಾಗಿವೆ.

ಮೆಹುಲ್​ ಚೋಕ್ಸಿ ಪರ ವಕೀಲರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚೋಸ್ಕಿಯನ್ನು ಆಂಟಿಗುವಾ ಮತ್ತು ಬಾರ್ಬುಡಾದಿಂದ ಅಪಹರಿಸಿ, ಒತ್ತಾಯ ಪೂರ್ವಕವಾಗಿ ಡೊಮಿನಿಕಾಕ್ಕೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿ ಹೋದ ಮೇಲೆ ಕೆಟ್ಟದಾಗಿ ಹೊಡೆಯಲಾಗಿದೆ. ಹೀಗಾಗಿ ಅವರ ಮೈಮೇಲೆಲ್ಲ ಗಾಯಗಳಾಗಿವೆ ಎಂದು ಹೇಳಿದ್ದಾರೆ. ಮೆಹುಲ್​ ಚೋಕ್ಸಿ ಸದ್ಯ ಕ್ವಾರಂಟೈನ್​ನಲ್ಲಿ ಇದ್ದಾರೆ. ಜೂ.2ರವರೆಗೂ ಚೋಸ್ಕಿಯನ್ನು ಯಾವುದೇ ಬೇರೆ ದೇಶಗಳಿಗೆ ವಾಪಸ್ ಕಳಿಸುವಂತಿಲ್ಲ ಎಂದು ಡೊಮಿನಿಕಾದ ನ್ಯಾಯಾಲಯವೊಂದು ಆದೇಶ ಹೊರಡಿಸಿದೆ. ಭಾರತದಲ್ಲಿ ಪಂಜಾಬ್​ ನ್ಯಾಷನಲ್​ ಬ್ಯಾಂಕ್​ನ 13,500 ಕೋಟಿ ರೂ.ವಂಚನೆ ಕೇಸ್​​ನಲ್ಲಿ ಚೋಕ್ಸಿ ಕೂಡ ಆರೋಪಿಯಾಗಿದ್ದಾರೆ. ಇಲ್ಲಿಂದ ತಲೆಮರೆಸಿಕೊಂಡು ಹೋಗಿದ್ದ ಅವರು 2018ರಿಂದಲೂ ಆಂಟಿಗುವಾದಲ್ಲಿ ವಾಸವಾಗಿದ್ದಾರೆ.

ಇದನ್ನೂ ಓದಿ: ಮೆಹುಲ್ ಚೋಸ್ಕಿ ಇಲ್ಲಿಗೆ ಬರೋದು ಬೇಡ ಎನ್ನುತ್ತಿರುವ ಆಂಟಿಗುವಾ ಪ್ರಧಾನಿ; ‘ನಾವು ಭಾರತಕ್ಕೆ ಕಳಿಸೋಲ್ಲ..’ ಅಂತಿದೆ ಡೊಮಿನಿಕಾ ಆಡಳಿತ

Published On - 8:59 am, Sun, 30 May 21

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ