Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೊಮಿನಿಕಾದಲ್ಲಿ ಬಂಧಿಸಲ್ಪಟ್ಟ ದೇಶಭ್ರಷ್ಟ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಮೈಮೇಲೆಲ್ಲ ಗಾಯ; ವಕೀಲರಿಂದ ಗಂಭೀರ ಆರೋಪ

ಇದೀಗ ಮೆಹುಲ್​ ಚೋಸ್ಕಿ ಜೈಲಿನಲ್ಲಿರುವ, ಅವರ ದೇಹದ ಮೇಲೆಲ್ಲ ಗಾಯಗಳಾಗಿರುವ ಫೋಟೋಗಳು ಇಂಡಿಯಾ ಟುಡೆ ಟಿವಿ ಮಾಧ್ಯಮಕ್ಕೆ ಲಭ್ಯವಾಗಿವೆ.

ಡೊಮಿನಿಕಾದಲ್ಲಿ ಬಂಧಿಸಲ್ಪಟ್ಟ ದೇಶಭ್ರಷ್ಟ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಮೈಮೇಲೆಲ್ಲ ಗಾಯ; ವಕೀಲರಿಂದ ಗಂಭೀರ ಆರೋಪ
ಮೆಹುಲ್ ಚೋಸ್ಕಿ
Follow us
Lakshmi Hegde
|

Updated on:May 30, 2021 | 1:14 PM

ಡೊಮಿನಿಕಾದಲ್ಲಿ ಅರೆಸ್ಟ್​ ಆಗಿದ್ದ ದೇಶಭ್ರಷ್ಟ ವಜ್ರದ ವ್ಯಾಪಾರಿ ಮೆಹುಲ್​ ಚೋಕ್ಸಿ ಅವರ ಕೆಲವು ಫೋಟೋಗಳು ವೈರಲ್​ ಆಗಿವೆ. ಆಂಟುಗುವಾ ಪೌರತ್ವ ಪಡೆದು, ಅಲ್ಲಿಯೇ ನೆಲೆಸಿದ್ದ ಚೋಸ್ಕಿ ತನ್ನ ವಿರುದ್ಧ ಕಾನೂನು ಪ್ರಕ್ರಿಯೆಗಳು ಶುರುವಾಗುತ್ತಿದ್ದಂತೆ ಡೊಮಿನಿಕಾಕ್ಕೆ ಪರಾರಿಯಾಗಿದ್ದರು. ರಾಷ್ಟ್ರವನ್ನು ಅಕ್ರಮವಾಗಿ ಪ್ರವೇಶಿಸಿದ್ದಾರೆ ಎಂಬ ಆರೋಪದ ಮೇಲೆ ಅಲ್ಲಿನ ಪೊಲೀಸರು ಬಂಧಿಸಿದ್ದರು.

ಇದೀಗ ಮೆಹುಲ್​ ಚೋಕ್ಸಿ ಜೈಲಿನಲ್ಲಿರುವ, ಅವರ ದೇಹದ ಮೇಲೆಲ್ಲ ಗಾಯಗಳಾಗಿರುವ ಫೋಟೋಗಳು ಇಂಡಿಯಾ ಟುಡೆ ಟಿವಿ ಮಾಧ್ಯಮಕ್ಕೆ ಲಭ್ಯವಾಗಿವೆ. ಕಬ್ಬಿಣದ ಗೇಟ್​​ನ ಹಿಂದೆ ಚೋಸ್ಕಿ ನಿಂತಿರುವ ಫೋಟೋ ಸಿಕ್ಕಿದ್ದು, ಅವರ ಕಣ್ಣೆಲ್ಲ ಕೆಂಪಾಗಿದ್ದನ್ನು ಫೋಟೋದಲ್ಲಿ ನೋಡಬಹುದು. ಅವರ ಕೈ ಮತ್ತು ಮಣಿಕಟ್ಟಿನ ಬಳಿಯೂ ಗಾಯಗಳಾಗಿವೆ.

ಮೆಹುಲ್​ ಚೋಕ್ಸಿ ಪರ ವಕೀಲರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚೋಸ್ಕಿಯನ್ನು ಆಂಟಿಗುವಾ ಮತ್ತು ಬಾರ್ಬುಡಾದಿಂದ ಅಪಹರಿಸಿ, ಒತ್ತಾಯ ಪೂರ್ವಕವಾಗಿ ಡೊಮಿನಿಕಾಕ್ಕೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿ ಹೋದ ಮೇಲೆ ಕೆಟ್ಟದಾಗಿ ಹೊಡೆಯಲಾಗಿದೆ. ಹೀಗಾಗಿ ಅವರ ಮೈಮೇಲೆಲ್ಲ ಗಾಯಗಳಾಗಿವೆ ಎಂದು ಹೇಳಿದ್ದಾರೆ. ಮೆಹುಲ್​ ಚೋಕ್ಸಿ ಸದ್ಯ ಕ್ವಾರಂಟೈನ್​ನಲ್ಲಿ ಇದ್ದಾರೆ. ಜೂ.2ರವರೆಗೂ ಚೋಸ್ಕಿಯನ್ನು ಯಾವುದೇ ಬೇರೆ ದೇಶಗಳಿಗೆ ವಾಪಸ್ ಕಳಿಸುವಂತಿಲ್ಲ ಎಂದು ಡೊಮಿನಿಕಾದ ನ್ಯಾಯಾಲಯವೊಂದು ಆದೇಶ ಹೊರಡಿಸಿದೆ. ಭಾರತದಲ್ಲಿ ಪಂಜಾಬ್​ ನ್ಯಾಷನಲ್​ ಬ್ಯಾಂಕ್​ನ 13,500 ಕೋಟಿ ರೂ.ವಂಚನೆ ಕೇಸ್​​ನಲ್ಲಿ ಚೋಕ್ಸಿ ಕೂಡ ಆರೋಪಿಯಾಗಿದ್ದಾರೆ. ಇಲ್ಲಿಂದ ತಲೆಮರೆಸಿಕೊಂಡು ಹೋಗಿದ್ದ ಅವರು 2018ರಿಂದಲೂ ಆಂಟಿಗುವಾದಲ್ಲಿ ವಾಸವಾಗಿದ್ದಾರೆ.

ಇದನ್ನೂ ಓದಿ: ಮೆಹುಲ್ ಚೋಸ್ಕಿ ಇಲ್ಲಿಗೆ ಬರೋದು ಬೇಡ ಎನ್ನುತ್ತಿರುವ ಆಂಟಿಗುವಾ ಪ್ರಧಾನಿ; ‘ನಾವು ಭಾರತಕ್ಕೆ ಕಳಿಸೋಲ್ಲ..’ ಅಂತಿದೆ ಡೊಮಿನಿಕಾ ಆಡಳಿತ

Published On - 8:59 am, Sun, 30 May 21

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ