AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೊಮಿನಿಕಾದಲ್ಲಿ ಬಂಧಿಸಲ್ಪಟ್ಟ ದೇಶಭ್ರಷ್ಟ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಮೈಮೇಲೆಲ್ಲ ಗಾಯ; ವಕೀಲರಿಂದ ಗಂಭೀರ ಆರೋಪ

ಇದೀಗ ಮೆಹುಲ್​ ಚೋಸ್ಕಿ ಜೈಲಿನಲ್ಲಿರುವ, ಅವರ ದೇಹದ ಮೇಲೆಲ್ಲ ಗಾಯಗಳಾಗಿರುವ ಫೋಟೋಗಳು ಇಂಡಿಯಾ ಟುಡೆ ಟಿವಿ ಮಾಧ್ಯಮಕ್ಕೆ ಲಭ್ಯವಾಗಿವೆ.

ಡೊಮಿನಿಕಾದಲ್ಲಿ ಬಂಧಿಸಲ್ಪಟ್ಟ ದೇಶಭ್ರಷ್ಟ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಮೈಮೇಲೆಲ್ಲ ಗಾಯ; ವಕೀಲರಿಂದ ಗಂಭೀರ ಆರೋಪ
ಮೆಹುಲ್ ಚೋಸ್ಕಿ
Lakshmi Hegde
|

Updated on:May 30, 2021 | 1:14 PM

Share

ಡೊಮಿನಿಕಾದಲ್ಲಿ ಅರೆಸ್ಟ್​ ಆಗಿದ್ದ ದೇಶಭ್ರಷ್ಟ ವಜ್ರದ ವ್ಯಾಪಾರಿ ಮೆಹುಲ್​ ಚೋಕ್ಸಿ ಅವರ ಕೆಲವು ಫೋಟೋಗಳು ವೈರಲ್​ ಆಗಿವೆ. ಆಂಟುಗುವಾ ಪೌರತ್ವ ಪಡೆದು, ಅಲ್ಲಿಯೇ ನೆಲೆಸಿದ್ದ ಚೋಸ್ಕಿ ತನ್ನ ವಿರುದ್ಧ ಕಾನೂನು ಪ್ರಕ್ರಿಯೆಗಳು ಶುರುವಾಗುತ್ತಿದ್ದಂತೆ ಡೊಮಿನಿಕಾಕ್ಕೆ ಪರಾರಿಯಾಗಿದ್ದರು. ರಾಷ್ಟ್ರವನ್ನು ಅಕ್ರಮವಾಗಿ ಪ್ರವೇಶಿಸಿದ್ದಾರೆ ಎಂಬ ಆರೋಪದ ಮೇಲೆ ಅಲ್ಲಿನ ಪೊಲೀಸರು ಬಂಧಿಸಿದ್ದರು.

ಇದೀಗ ಮೆಹುಲ್​ ಚೋಕ್ಸಿ ಜೈಲಿನಲ್ಲಿರುವ, ಅವರ ದೇಹದ ಮೇಲೆಲ್ಲ ಗಾಯಗಳಾಗಿರುವ ಫೋಟೋಗಳು ಇಂಡಿಯಾ ಟುಡೆ ಟಿವಿ ಮಾಧ್ಯಮಕ್ಕೆ ಲಭ್ಯವಾಗಿವೆ. ಕಬ್ಬಿಣದ ಗೇಟ್​​ನ ಹಿಂದೆ ಚೋಸ್ಕಿ ನಿಂತಿರುವ ಫೋಟೋ ಸಿಕ್ಕಿದ್ದು, ಅವರ ಕಣ್ಣೆಲ್ಲ ಕೆಂಪಾಗಿದ್ದನ್ನು ಫೋಟೋದಲ್ಲಿ ನೋಡಬಹುದು. ಅವರ ಕೈ ಮತ್ತು ಮಣಿಕಟ್ಟಿನ ಬಳಿಯೂ ಗಾಯಗಳಾಗಿವೆ.

ಮೆಹುಲ್​ ಚೋಕ್ಸಿ ಪರ ವಕೀಲರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚೋಸ್ಕಿಯನ್ನು ಆಂಟಿಗುವಾ ಮತ್ತು ಬಾರ್ಬುಡಾದಿಂದ ಅಪಹರಿಸಿ, ಒತ್ತಾಯ ಪೂರ್ವಕವಾಗಿ ಡೊಮಿನಿಕಾಕ್ಕೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿ ಹೋದ ಮೇಲೆ ಕೆಟ್ಟದಾಗಿ ಹೊಡೆಯಲಾಗಿದೆ. ಹೀಗಾಗಿ ಅವರ ಮೈಮೇಲೆಲ್ಲ ಗಾಯಗಳಾಗಿವೆ ಎಂದು ಹೇಳಿದ್ದಾರೆ. ಮೆಹುಲ್​ ಚೋಕ್ಸಿ ಸದ್ಯ ಕ್ವಾರಂಟೈನ್​ನಲ್ಲಿ ಇದ್ದಾರೆ. ಜೂ.2ರವರೆಗೂ ಚೋಸ್ಕಿಯನ್ನು ಯಾವುದೇ ಬೇರೆ ದೇಶಗಳಿಗೆ ವಾಪಸ್ ಕಳಿಸುವಂತಿಲ್ಲ ಎಂದು ಡೊಮಿನಿಕಾದ ನ್ಯಾಯಾಲಯವೊಂದು ಆದೇಶ ಹೊರಡಿಸಿದೆ. ಭಾರತದಲ್ಲಿ ಪಂಜಾಬ್​ ನ್ಯಾಷನಲ್​ ಬ್ಯಾಂಕ್​ನ 13,500 ಕೋಟಿ ರೂ.ವಂಚನೆ ಕೇಸ್​​ನಲ್ಲಿ ಚೋಕ್ಸಿ ಕೂಡ ಆರೋಪಿಯಾಗಿದ್ದಾರೆ. ಇಲ್ಲಿಂದ ತಲೆಮರೆಸಿಕೊಂಡು ಹೋಗಿದ್ದ ಅವರು 2018ರಿಂದಲೂ ಆಂಟಿಗುವಾದಲ್ಲಿ ವಾಸವಾಗಿದ್ದಾರೆ.

ಇದನ್ನೂ ಓದಿ: ಮೆಹುಲ್ ಚೋಸ್ಕಿ ಇಲ್ಲಿಗೆ ಬರೋದು ಬೇಡ ಎನ್ನುತ್ತಿರುವ ಆಂಟಿಗುವಾ ಪ್ರಧಾನಿ; ‘ನಾವು ಭಾರತಕ್ಕೆ ಕಳಿಸೋಲ್ಲ..’ ಅಂತಿದೆ ಡೊಮಿನಿಕಾ ಆಡಳಿತ

Published On - 8:59 am, Sun, 30 May 21

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ