AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಹುಲ್​ ಚೋಕ್ಸಿಗೆ ಸಿಕ್ಕಿಲ್ಲ ಜಾಮೀನು; ಅವರನ್ನು ಆಂಟಿಗುವಾಕ್ಕೆ ಕಳಿಸಿ ಎಂದು ವಕೀಲರಿಂದ ವಾದ ಮಂಡನೆ

ಈ ಮಧ್ಯೆ ಮೆಹುಲ್ ಚೋಕ್ಸಿ ಆಂಟಿಗುವಾಕ್ಕೆ ಕರೆದುಕೊಂಡು ಹೋದ ಯುವತಿಯ ಬಗ್ಗೆ ಇದೀಗ ಅವರ ಪತ್ನಿ ಪ್ರೀತಿ ಚೋಕ್ಸಿ ಬಾಯ್ಬಿಟ್ಟಿದ್ದಾರೆ. ಆ ಮಹಿಳೆ ನನ್ನ ಪತಿ ಮತ್ತು ಅವರ ಸಹಚರರಿಗೆ ಗೊತ್ತಿರುವವಳೇ ಆಗಿದ್ದಾಳೆ ಎಂದು ಹೇಳಿದ್ದಾರೆ.

ಮೆಹುಲ್​ ಚೋಕ್ಸಿಗೆ ಸಿಕ್ಕಿಲ್ಲ ಜಾಮೀನು; ಅವರನ್ನು ಆಂಟಿಗುವಾಕ್ಕೆ ಕಳಿಸಿ ಎಂದು ವಕೀಲರಿಂದ ವಾದ ಮಂಡನೆ
ಕೋರ್ಟ್​​ಗೆ ವೀಲ್​ಚೇರ್​ನಲ್ಲೇ ಬಂದ ಮೆಹುಲ್​ ಚೋಕ್ಸಿ
Follow us
TV9 Web
| Updated By: Lakshmi Hegde

Updated on: Jun 03, 2021 | 9:44 AM

ದೆಹಲಿ: ದೇಶಭ್ರಷ್ಟ ಉದ್ಯಮಿ ಮೆಹುಲ್​ ಚೋಕ್ಸಿಗೆ ಜಾಮೀನು ನೀಡಲು ಡೊಮಿನಿಕಾ ನ್ಯಾಯಾಲಯ ನಿರಾಕರಿಸಿದೆ. ಆಂಟಿಗುವಾದಿಂದ ಡೊಮಿನಿಕಾಕ್ಕೆ ಅಕ್ರಮವಾಗಿ ನುಸುಳಿರುವ ಬಗ್ಗೆ ಡೊಮಿನಿಕಾ ಕೋರ್ಟ್​​ನಲ್ಲಿ ಬುಧವಾರ ವಿಚಾರಣೆ ನಡೆದಿತ್ತು. ಸದ್ಯ ಅವರಿಗೆ ಜಾಮೀನು ನಿರಾಕರಿಸಿದ್ದು, ಇಂದು (ಗುರುವಾರ) ಮತ್ತೊಮ್ಮೆ ವಿಚಾರಣೆ ನಡೆಯಲಿದೆ. ಗಡೀಪಾರಿಗೆ ಸಂಬಂಧಪಟ್ಟ ವಿಚಾರಣೆಯನ್ನೂ ಕೋರ್ಟ್ ಇಂದು ಕೈಗೆತ್ತಿಕೊಳ್ಳಲಿದೆ.  ಚೋಕ್ಸಿ ನಿನ್ನೆ ಕಾರಿನಲ್ಲಿ ಬಂದು, ವೀಲ್​ಚೇರ್​ ನಲ್ಲೇ ಕೋರ್ಟ್​​ನೊಳಗೆ ಹೋಗಿದ್ದಾರೆ. ಇಂದೂ ಕೂಡ ತಮ್ಮ ತಪ್ಪನ್ನು ಚೋಕ್ಸಿ ಒಪ್ಪಿಕೊಳ್ಳದೆ ಹೋದರೆ ಪ್ರತ್ಯೇಕ ವಿಚಾರಣೆ ಶುರುವಾಗುವ ಸಾಧ್ಯತೆ ಇದೆ.

ಮೆಹುಲ್​ ಚೋಕ್ಸಿ ಹನಿಟ್ರ್ಯಾಪ್​​ಗೆ ಒಳಗಾಗಿದ್ದಾರೆ. ಅವರನ್ನು ಆಂಟಿಗುವಾದಿಂದ ಅಪಹರಿಸಿ ಡೊಮಿನಿಕಾಗೆ ಕರೆದುಕೊಂಡು ಬರಲಾಗಿದೆ ಎಂದು ಅವರ ಪರ ವಕೀಲರು ಕೋರ್ಟ್​​ಗೆ ತಿಳಿಸಿದ್ದಾರೆ. ಈ ಹೇಬಿಯಸ್​ ಕಾರ್ಪಸ್​ ಅರ್ಜಿ ವಿಚಾರಣೆ ಮೊದಲು ಮ್ಯಾಜಿಸ್ಟ್ರೇಟ್​ ಕೋರ್ಟ್​​ನಲ್ಲಿ ನಡೆಯಬೇಕು ಎಂದು ವರ್ಚ್ಯುವಲ್​ ಆಗಿ ವಿಚಾರಣೆ ನಡೆಸಿದ್ದ ಡೊಮಿನಿಕಾ ಹೈಕೋರ್ಟ್​ ನ್ಯಾಯಾಧೀಶ ಬರ್ನಿ ಸ್ಟೀಪನ್ಸನ್​ ಸೂಚನೆ ನೀಡಿದ್ದರು. ಮೆಹುಲ್ ಚೋಕ್ಸಿ ಆಂಟಿಗುವಾಕ್ಕೆ ಕಳಿಸಬೇಕು ಎಂದು ಮೆಹುಲ್ ಚೋಕ್ಸಿ ಪರ ವಕೀಲರು ವಾದಮಂಡನೆ ಮಾಡಿದ್ದಾರೆ. ಡೊಮಿನಿಕಾದ ಪೊಲೀಸ್​ ಕಸ್ಟಡಿಯಲ್ಲಿ ಮೆಹುಲ್​ ಚೋಕ್ಸಿ ಸುರಕ್ಷಿತವಾಗಿರುವುದಿಲ್ಲ. ಈಗಾಗಲೇ ಅವರಿಗೆ ಥಳಿಸಲಾಗಿದೆ. ಹೀಗಾಗಿ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದರು ಎಂದೂ ವಕೀಲರು ವಾದಮಂಡನೆ ಮಾಡಿದ್ದಾರೆ.

ಪತಿಯ ಗರ್ಲ್​ಫ್ರೆಂಡ್​ ಬಗ್ಗೆ ಬಾಯ್ಬಿಟ್ಟ ಪ್ರೀತಿ ಚೋಕ್ಸಿ ಈ ಮಧ್ಯೆ ಮೆಹುಲ್ ಚೋಕ್ಸಿ ಆಂಟಿಗುವಾಕ್ಕೆ ಕರೆದುಕೊಂಡು ಹೋದ ಯುವತಿಯ ಬಗ್ಗೆ ಇದೀಗ ಅವರ ಪತ್ನಿ ಪ್ರೀತಿ ಚೋಕ್ಸಿ ಬಾಯ್ಬಿಟ್ಟಿದ್ದಾರೆ. ಆ ಮಹಿಳೆ ನನ್ನ ಪತಿ ಮತ್ತು ಅವರ ಸಹಚರರಿಗೆ ಗೊತ್ತಿರುವವಳೇ ಆಗಿದ್ದಾಳೆ. ಆದರೆ ಇದೀಗ ಮಾಧ್ಯಮಗಳಲ್ಲಿ ಬಾರ್ಬರಾ ಎಂದು ತೋರಿಸುತ್ತಿರುವ ಯುವತಿ ಅವಳಲ್ಲ ಎಂದು ಪ್ರೀತಿ ಹೇಳಿದ್ದಾರೆ.

ಇದನ್ನೂ ಓದಿ: Gold Silver Rate Today: ಆಭರಣ ಪ್ರಿಯರಿಗೆ ಮತ್ತೆ ನಿರಾಸೆ? ಹಾಗಾದರೆ ಚಿನ್ನ, ಬೆಳ್ಳಿ ದರ ಏರಿಕೆಯೇ?

ತಿರಂಗ ಯಾತ್ರೆಯಲ್ಲಿ ಅಸಂಖ್ಯಾತ ಬಿಜೆಪಿ ಕಾರ್ಯಕರ್ತರು, ಮತ್ತು ಶಾಲಾಮಕ್ಕಳು
ತಿರಂಗ ಯಾತ್ರೆಯಲ್ಲಿ ಅಸಂಖ್ಯಾತ ಬಿಜೆಪಿ ಕಾರ್ಯಕರ್ತರು, ಮತ್ತು ಶಾಲಾಮಕ್ಕಳು
ಭುಜ್​ನಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ರಾಜನಾಥ್​ ಸಿಂಗ್
ಭುಜ್​ನಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ರಾಜನಾಥ್​ ಸಿಂಗ್
ಇಂಡಿಯಾ ಮೈತ್ರಿಕೂಟ ದುರ್ಬಲವಾಗಿದೆ: ಪಿ ಚಿದಂಬರಂ ಕಳವಳ
ಇಂಡಿಯಾ ಮೈತ್ರಿಕೂಟ ದುರ್ಬಲವಾಗಿದೆ: ಪಿ ಚಿದಂಬರಂ ಕಳವಳ
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ದಕ್ಷಿಣ ಕನ್ನಡ ಜಿಲ್ಲಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ: ದಿನೇಶ್ ಗುಂಡೂರಾವ್
ದಕ್ಷಿಣ ಕನ್ನಡ ಜಿಲ್ಲಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ: ದಿನೇಶ್ ಗುಂಡೂರಾವ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ
ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ