AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಹುಲ್​ ಚೋಕ್ಸಿ ಡೊಮಿನಿಕಾದಿಂದ ಭಾರತಕ್ಕೆ ತೆರಳಲಿದ್ದಾರೆ ಎಂದ ಆಂಟಿಗುವಾ ಪ್ರಧಾನಿ; ಡೌಗ್ಲಾಸ್-ಚಾರ್ಲ್ಸ್ ಏರ್​ಪೋರ್ಟ್ ತಲುಪಿದ ಖಾಸಗಿ ಜೆಟ್​

ಕತಾರ್​​ನ ಬಾಂಬಾರ್ಡಿಯರ್ ಗ್ಲೋಬಲ್​ 5000 ಜೆಟ್​​ ಡೌಗ್ಲಾಸ್-ಚಾರ್ಲ್ಸ್ ವಿಮಾನ ನಿಲ್ದಾಣವನ್ನು ತಲುಪಿದೆ. ಇದು ಮೇ 28ರಂದು ದೆಹಲಿಯಿಂದ ಹೊರಟು ಮಾಡ್ರಿಡ್ ಮಾರ್ಗವಾಗಿ ಡೊಮಿನಿಕಾವನ್ನು ತಲುಪಿದೆ.

ಮೆಹುಲ್​ ಚೋಕ್ಸಿ ಡೊಮಿನಿಕಾದಿಂದ ಭಾರತಕ್ಕೆ ತೆರಳಲಿದ್ದಾರೆ ಎಂದ ಆಂಟಿಗುವಾ ಪ್ರಧಾನಿ; ಡೌಗ್ಲಾಸ್-ಚಾರ್ಲ್ಸ್ ಏರ್​ಪೋರ್ಟ್ ತಲುಪಿದ ಖಾಸಗಿ ಜೆಟ್​
ಮೆಹುಲ್ ಚೋಕ್ಸಿ
Lakshmi Hegde
|

Updated on:May 30, 2021 | 2:16 PM

Share

ಪಂಜಾಬ್​ ನ್ಯಾಷನಲ್​ ಬ್ಯಾಂಕ್​ ಹಗರಣದಲ್ಲಿ ಆರೋಪಿಯಾಗಿರುವ ದೇಶಭ್ರಷ್ಟ ಉದ್ಯಮಿ ಮೆಹುಲ್ ಚೋಕ್ಸಿ ಸದ್ಯ ಡೊಮಿನಿಕಾ ಪೊಲೀಸರ ವಶದಲ್ಲಿದ್ದಾರೆ. ಡೊಮಿನಿಕಾದಿಂದ ಆಂಟಿಗುವಾಕ್ಕೆ ಚೋಕ್ಸಿಯನ್ನು ಕಳಿಸಲು ಅವಕಾಶ ನೀಡುವುದಿಲ್ಲ ಎಂದು ಅಲ್ಲಿನ ಪ್ರಧಾನಿ ಗಸ್ಟನ್ ಬ್ರೌನ್​​​ ಈಗಾಗಲೇ ಹೇಳಿದ್ದಾರೆ. ಇದೀಗ ಚೋಕ್ಸಿಯನ್ನು ಭಾರತಕ್ಕೆ ಕಳಿಸುವ ಸಿದ್ಧತೆ ನಡೆದಿದೆ, ಅವರನ್ನು ಕರೆದೊಯ್ಯಲು ಖಾಸಗಿ ವಿಮಾನವೊಂದು ಡೊಮಿನಿಕಾದ ಡೌಗ್ಲಾಸ್-ಚಾರ್ಲ್ಸ್ ಏರ್​ಪೋರ್ಟ್ ತಲುಪಿದೆ ಎಂದು ಗಸ್ಟನ್​ ಬ್ರೌನ್​ ಹೇಳಿದ್ದಾರೆ. ಹಾಗೇ ಈ ಖಾಸಗಿ ಜೆಟ್​​ನ ಫೋಟೋ ಕೂಡ ಆಂಟಿಗುವಾ ಮಾಧ್ಯಮದಲ್ಲಿ ಪ್ರಕಟವಾಗಿದೆ.

ಮೆಹುಲ್ ಚೋಕ್ಸಿ ಭಾರತದಿಂದ ಪರಾರಿಯಾಗಿಯೇ ಆಂಟಿಗುವಾಕ್ಕೆ ಹೋಗಿದ್ದು ಎಂದು ದೃಢಪಡಿಸುವ ಕೆಲವು ದಾಖಲೆಗಳನ್ನು ಭಾರತ ಡೊಮಿನಿಕಾ ಕೋರ್ಟ್​ಗೆ ಸಲ್ಲಿಸಿದೆ. ಹಾಗೇ ದಾಖಲೆಗಳ ಪರಿಶೀಲನೆ ಮಾಡಿರುವ ನ್ಯಾಯಾಧೀಶರು ಜೂ.2ರವರೆಗೆ ಚೋಕ್ಸಿ ಗಡೀಪಾರಿಗೆ ತಡೆಹಿಡಿದಿದ್ದಾರೆ. ಖಂಡಿತ ಡೊಮಿನಿಕಾದಿಂದ ಭಾರತಕ್ಕೆ ವಾಪಸ್​ ಕರೆದೊಯ್ದು, ಅಲ್ಲಿನ ಕೋರ್ಟ್​​ನಲ್ಲಿ ವಿಚಾರಣೆ ನಡೆಯಲಿದೆ ಎಂಬುದು ನನ್ನ ಅರಿವಿಗೆ ಬಂದ ವಿಚಾರಗಳು ಎಂದು ಪ್ರಧಾನಿ ಗಸ್ಟನ್​ ಬ್ರೌನ್ ಅಲ್ಲಿನ ಎಫ್​ಎಂ ಚಾನಲ್​​ವೊಂದಕ್ಕೆ​ ಹೇಳಿದ್ದಾರೆ.

ಕತಾರ್​​ನ ಬಾಂಬಾರ್ಡಿಯರ್ ಗ್ಲೋಬಲ್​ 5000 ಜೆಟ್​​ ಡೌಗ್ಲಾಸ್-ಚಾರ್ಲ್ಸ್ ವಿಮಾನ ನಿಲ್ದಾಣವನ್ನು ತಲುಪಿದೆ. ಇದು ಮೇ 28ರಂದು ದೆಹಲಿಯಿಂದ ಹೊರಟು ಮಾಡ್ರಿಡ್ ಮಾರ್ಗವಾಗಿ ಡೊಮಿನಿಕಾವನ್ನು ತಲುಪಿದೆ. ಇನ್ನು ಚೋಕ್ಸಿ ಜೈಲಿನ ಹಿಂದೆ ಇರುವ, ಅವರ ಕೈ, ಮಣಿಕಟ್ಟಿನ ಮೇಲೆ ಗಾಯಗಳಾಗಿರುವ ಫೋಟೋ ಶನಿವಾರ ಬಿಡುಗಡೆಯಾಗಿದೆ. ಅವರ ಪರ ವಕೀಲರು ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಕ್ಕಳಲ್ಲಿಯೂ ಪತ್ತೆಯಾಗುತ್ತಿದೆ ಬ್ಲ್ಯಾಕ್ ಫಂಗಸ್; ಮೆದುಳಿಗೆ ಅಟ್ಯಾಕ್, ನಿಮ್ಹಾನ್ಸ್ನಲ್ಲಿ ಇಬ್ಬರು ಬಾಲಕರಿಗೆ ಚಿಕಿತ್ಸೆ

Published On - 2:15 pm, Sun, 30 May 21

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು