AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಹುಲ್​ ಚೋಕ್ಸಿ ಡೊಮಿನಿಕಾದಿಂದ ಭಾರತಕ್ಕೆ ತೆರಳಲಿದ್ದಾರೆ ಎಂದ ಆಂಟಿಗುವಾ ಪ್ರಧಾನಿ; ಡೌಗ್ಲಾಸ್-ಚಾರ್ಲ್ಸ್ ಏರ್​ಪೋರ್ಟ್ ತಲುಪಿದ ಖಾಸಗಿ ಜೆಟ್​

ಕತಾರ್​​ನ ಬಾಂಬಾರ್ಡಿಯರ್ ಗ್ಲೋಬಲ್​ 5000 ಜೆಟ್​​ ಡೌಗ್ಲಾಸ್-ಚಾರ್ಲ್ಸ್ ವಿಮಾನ ನಿಲ್ದಾಣವನ್ನು ತಲುಪಿದೆ. ಇದು ಮೇ 28ರಂದು ದೆಹಲಿಯಿಂದ ಹೊರಟು ಮಾಡ್ರಿಡ್ ಮಾರ್ಗವಾಗಿ ಡೊಮಿನಿಕಾವನ್ನು ತಲುಪಿದೆ.

ಮೆಹುಲ್​ ಚೋಕ್ಸಿ ಡೊಮಿನಿಕಾದಿಂದ ಭಾರತಕ್ಕೆ ತೆರಳಲಿದ್ದಾರೆ ಎಂದ ಆಂಟಿಗುವಾ ಪ್ರಧಾನಿ; ಡೌಗ್ಲಾಸ್-ಚಾರ್ಲ್ಸ್ ಏರ್​ಪೋರ್ಟ್ ತಲುಪಿದ ಖಾಸಗಿ ಜೆಟ್​
ಮೆಹುಲ್ ಚೋಕ್ಸಿ
Lakshmi Hegde
|

Updated on:May 30, 2021 | 2:16 PM

Share

ಪಂಜಾಬ್​ ನ್ಯಾಷನಲ್​ ಬ್ಯಾಂಕ್​ ಹಗರಣದಲ್ಲಿ ಆರೋಪಿಯಾಗಿರುವ ದೇಶಭ್ರಷ್ಟ ಉದ್ಯಮಿ ಮೆಹುಲ್ ಚೋಕ್ಸಿ ಸದ್ಯ ಡೊಮಿನಿಕಾ ಪೊಲೀಸರ ವಶದಲ್ಲಿದ್ದಾರೆ. ಡೊಮಿನಿಕಾದಿಂದ ಆಂಟಿಗುವಾಕ್ಕೆ ಚೋಕ್ಸಿಯನ್ನು ಕಳಿಸಲು ಅವಕಾಶ ನೀಡುವುದಿಲ್ಲ ಎಂದು ಅಲ್ಲಿನ ಪ್ರಧಾನಿ ಗಸ್ಟನ್ ಬ್ರೌನ್​​​ ಈಗಾಗಲೇ ಹೇಳಿದ್ದಾರೆ. ಇದೀಗ ಚೋಕ್ಸಿಯನ್ನು ಭಾರತಕ್ಕೆ ಕಳಿಸುವ ಸಿದ್ಧತೆ ನಡೆದಿದೆ, ಅವರನ್ನು ಕರೆದೊಯ್ಯಲು ಖಾಸಗಿ ವಿಮಾನವೊಂದು ಡೊಮಿನಿಕಾದ ಡೌಗ್ಲಾಸ್-ಚಾರ್ಲ್ಸ್ ಏರ್​ಪೋರ್ಟ್ ತಲುಪಿದೆ ಎಂದು ಗಸ್ಟನ್​ ಬ್ರೌನ್​ ಹೇಳಿದ್ದಾರೆ. ಹಾಗೇ ಈ ಖಾಸಗಿ ಜೆಟ್​​ನ ಫೋಟೋ ಕೂಡ ಆಂಟಿಗುವಾ ಮಾಧ್ಯಮದಲ್ಲಿ ಪ್ರಕಟವಾಗಿದೆ.

ಮೆಹುಲ್ ಚೋಕ್ಸಿ ಭಾರತದಿಂದ ಪರಾರಿಯಾಗಿಯೇ ಆಂಟಿಗುವಾಕ್ಕೆ ಹೋಗಿದ್ದು ಎಂದು ದೃಢಪಡಿಸುವ ಕೆಲವು ದಾಖಲೆಗಳನ್ನು ಭಾರತ ಡೊಮಿನಿಕಾ ಕೋರ್ಟ್​ಗೆ ಸಲ್ಲಿಸಿದೆ. ಹಾಗೇ ದಾಖಲೆಗಳ ಪರಿಶೀಲನೆ ಮಾಡಿರುವ ನ್ಯಾಯಾಧೀಶರು ಜೂ.2ರವರೆಗೆ ಚೋಕ್ಸಿ ಗಡೀಪಾರಿಗೆ ತಡೆಹಿಡಿದಿದ್ದಾರೆ. ಖಂಡಿತ ಡೊಮಿನಿಕಾದಿಂದ ಭಾರತಕ್ಕೆ ವಾಪಸ್​ ಕರೆದೊಯ್ದು, ಅಲ್ಲಿನ ಕೋರ್ಟ್​​ನಲ್ಲಿ ವಿಚಾರಣೆ ನಡೆಯಲಿದೆ ಎಂಬುದು ನನ್ನ ಅರಿವಿಗೆ ಬಂದ ವಿಚಾರಗಳು ಎಂದು ಪ್ರಧಾನಿ ಗಸ್ಟನ್​ ಬ್ರೌನ್ ಅಲ್ಲಿನ ಎಫ್​ಎಂ ಚಾನಲ್​​ವೊಂದಕ್ಕೆ​ ಹೇಳಿದ್ದಾರೆ.

ಕತಾರ್​​ನ ಬಾಂಬಾರ್ಡಿಯರ್ ಗ್ಲೋಬಲ್​ 5000 ಜೆಟ್​​ ಡೌಗ್ಲಾಸ್-ಚಾರ್ಲ್ಸ್ ವಿಮಾನ ನಿಲ್ದಾಣವನ್ನು ತಲುಪಿದೆ. ಇದು ಮೇ 28ರಂದು ದೆಹಲಿಯಿಂದ ಹೊರಟು ಮಾಡ್ರಿಡ್ ಮಾರ್ಗವಾಗಿ ಡೊಮಿನಿಕಾವನ್ನು ತಲುಪಿದೆ. ಇನ್ನು ಚೋಕ್ಸಿ ಜೈಲಿನ ಹಿಂದೆ ಇರುವ, ಅವರ ಕೈ, ಮಣಿಕಟ್ಟಿನ ಮೇಲೆ ಗಾಯಗಳಾಗಿರುವ ಫೋಟೋ ಶನಿವಾರ ಬಿಡುಗಡೆಯಾಗಿದೆ. ಅವರ ಪರ ವಕೀಲರು ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಕ್ಕಳಲ್ಲಿಯೂ ಪತ್ತೆಯಾಗುತ್ತಿದೆ ಬ್ಲ್ಯಾಕ್ ಫಂಗಸ್; ಮೆದುಳಿಗೆ ಅಟ್ಯಾಕ್, ನಿಮ್ಹಾನ್ಸ್ನಲ್ಲಿ ಇಬ್ಬರು ಬಾಲಕರಿಗೆ ಚಿಕಿತ್ಸೆ

Published On - 2:15 pm, Sun, 30 May 21

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ