AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಹುಲ್ ಚೋಸ್ಕಿ ಇಲ್ಲಿಗೆ ಬರೋದು ಬೇಡ ಎನ್ನುತ್ತಿರುವ ಆಂಟಿಗುವಾ ಪ್ರಧಾನಿ; ‘ನಾವು ಭಾರತಕ್ಕೆ ಕಳಿಸೋಲ್ಲ..’ ಅಂತಿದೆ ಡೊಮಿನಿಕಾ ಆಡಳಿತ

ನಿನ್ನೆ ಚೋಸ್ಕಿ ಬಂಧನವಾಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ್ದ ಆಂಟಿಗುವಾ ಮತ್ತು ಬಾರ್ಬುಡಾ ದೇಶದ ಪ್ರಧಾನಿ ಗಷ್ಟನ್ ಬ್ರೌನ್, ಚೋಸ್ಕಿ ದೇಶ ತೊರೆದು ಡೊಮಿನಿಕಾಗೆ ತೆರಳಿದ್ದರು. ಮತ್ತೆ ನಾವು ಅವರನ್ನು ಆಂಟಿಗುವಾಕ್ಕೆ ಪ್ರವೇಶಿಸಲು ಬಿಡುವುದಿಲ್ಲ ಎಂದಿದ್ದರು.

ಮೆಹುಲ್ ಚೋಸ್ಕಿ ಇಲ್ಲಿಗೆ ಬರೋದು ಬೇಡ ಎನ್ನುತ್ತಿರುವ ಆಂಟಿಗುವಾ ಪ್ರಧಾನಿ; ‘ನಾವು ಭಾರತಕ್ಕೆ ಕಳಿಸೋಲ್ಲ..’ ಅಂತಿದೆ ಡೊಮಿನಿಕಾ ಆಡಳಿತ
ಮೆಹುಲ್ ಚೋಸ್ಕಿ
Lakshmi Hegde
|

Updated on: May 27, 2021 | 10:31 PM

Share

ದೇಶಭ್ರಷ್ಟ ವಜ್ರದ ಉದ್ಯಮಿ ಮೆಹುಲ್ ಚೋಸ್ಕಿಯನ್ನು ಡೊಮಿನಿಕಾ ದ್ವೀಪದಲ್ಲಿ ನಿನ್ನೆ ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಇಷ್ಟುದಿನ ಆಂಟಿಗುವಾ ದೇಶದಲ್ಲಿ ಇದ್ದು, ಅಲ್ಲಿಯ ಪೌರತ್ವವನ್ನೂ ಪಡೆದಿದ್ದ ಮೆಹುಲ್​ ಚೋಸ್ಕಿ ತನ್ನ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುತ್ತಿದ್ದಂತೆ ತಲೆ ಮರೆಸಿಕೊಂಡು ಡೊಮಿನಿಕಾಗೆ ಹೋಗಿದ್ದರು. ಅಲ್ಲಿಂದಲೂ ಸಹ ಗುಪ್ತವಾಗಿ ಕ್ಯೂಬಾಕ್ಕೆ ತೆರಳಲು ಸಿದ್ಧತೆ ನಡೆಸಿದ್ದರು. ಆದರೆ ಆ ಪ್ಲ್ಯಾನ್​ ವಿಫಲಗೊಂಡಿತ್ತು.

ನಿನ್ನೆ ಚೋಸ್ಕಿ ಬಂಧನವಾಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ್ದ ಆಂಟಿಗುವಾ ಮತ್ತು ಬಾರ್ಬುಡಾ ದೇಶದ ಪ್ರಧಾನಿ ಗಷ್ಟನ್ ಬ್ರೌನ್, ಚೋಸ್ಕಿ ದೇಶ ತೊರೆದು ಡೊಮಿನಿಕಾಗೆ ತೆರಳಿದ್ದರು. ಮತ್ತೆ ನಾವು ಅವರನ್ನು ಆಂಟಿಗುವಾಕ್ಕೆ ಪ್ರವೇಶಿಸಲು ಬಿಡುವುದಿಲ್ಲ. ಡೊಮಿನಿಕಾದಿಂದಲೇ ಭಾರತಕ್ಕೆ ಹಸ್ತಾಂತರ ಆಗಬೇಕು ಎಂದು ಹೇಳಿದ್ದರು. ಆದರೆ ಡೊಮಿನಿಕಾದ ರಾಷ್ಟ್ರೀಯ ಭದ್ರತೆ ಮತ್ತು ಗೃಹ ವ್ಯವಹಾರಗಳ ಸಚಿವಾಲಯ ಇಂದು ಹೇಳಿಕೆ ಬಿಡುಗಡೆ ಮಾಡಿದ್ದು, ನಾವು ಚೋಸ್ಕಿಯನ್ನು ವಾಪಸ್​ ಆಂಟಿಗುವಾಕ್ಕೆ ಕಳಿಸು ಎಂದು ತಿಳಿಸಿದೆ. ಆಂಟಿಗುವಾದಿಂದ ಡೊಮಿನಿಕಾಗೆ ಅಕ್ರಮವಾಗಿ ಪ್ರವೇಶ ಮಾಡಿದ್ದರಿಂದ ಚೋಸ್ಕಿಯನ್ನು ಬಂಧಿಸಲಾಗಿದೆ. ಆಂಟಿಗುವಾ ಆಡಳಿತದೊಂದಿಗೆ ನಾವು ಸಂಪರ್ಕದಲ್ಲಿದ್ದು, ಚೋಸ್ಕಿಯನ್ನು ಅಲ್ಲಿಗೆ ಕಳಿಸಲು ಎಲ್ಲ ರೀತಿಯ ಸಿದ್ಧತೆಗಳನ್ನೂ ಮಾಡಲಾಗುತ್ತಿದೆ ಎಂದು ತಿಳಿಸಿದೆ.

ಇದನ್ನೂ ಓದಿ: Mehul Choksi: 13,500 ಕೋಟಿ ವಂಚನೆಯ ಆರೋಪಿ ಮೆಹುಲ್ ಚೋಸ್ಕಿ ಭಾರತಕ್ಕೆ ಹಸ್ತಾಂತರ: ಆಂಟಿಗುವಾ ಪ್ರಧಾನಿ

Mehul Choksi: ದೇಶಭ್ರಷ್ಟ ವಜ್ರ ವ್ಯಾಪಾರಿ ಮೆಹುಲ್ ಚೋಸ್ಕಿ ಡೊಮಿನಿಕಾದಲ್ಲಿ ಅರೆಸ್ಟ್​; ಕ್ಯೂಬಾಕ್ಕೆ ಹೊರಡಲು ನಡೆದಿತ್ತು ಸಿದ್ಧತೆ

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!