AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಹುಲ್ ಚೋಸ್ಕಿ ಇಲ್ಲಿಗೆ ಬರೋದು ಬೇಡ ಎನ್ನುತ್ತಿರುವ ಆಂಟಿಗುವಾ ಪ್ರಧಾನಿ; ‘ನಾವು ಭಾರತಕ್ಕೆ ಕಳಿಸೋಲ್ಲ..’ ಅಂತಿದೆ ಡೊಮಿನಿಕಾ ಆಡಳಿತ

ನಿನ್ನೆ ಚೋಸ್ಕಿ ಬಂಧನವಾಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ್ದ ಆಂಟಿಗುವಾ ಮತ್ತು ಬಾರ್ಬುಡಾ ದೇಶದ ಪ್ರಧಾನಿ ಗಷ್ಟನ್ ಬ್ರೌನ್, ಚೋಸ್ಕಿ ದೇಶ ತೊರೆದು ಡೊಮಿನಿಕಾಗೆ ತೆರಳಿದ್ದರು. ಮತ್ತೆ ನಾವು ಅವರನ್ನು ಆಂಟಿಗುವಾಕ್ಕೆ ಪ್ರವೇಶಿಸಲು ಬಿಡುವುದಿಲ್ಲ ಎಂದಿದ್ದರು.

ಮೆಹುಲ್ ಚೋಸ್ಕಿ ಇಲ್ಲಿಗೆ ಬರೋದು ಬೇಡ ಎನ್ನುತ್ತಿರುವ ಆಂಟಿಗುವಾ ಪ್ರಧಾನಿ; ‘ನಾವು ಭಾರತಕ್ಕೆ ಕಳಿಸೋಲ್ಲ..’ ಅಂತಿದೆ ಡೊಮಿನಿಕಾ ಆಡಳಿತ
ಮೆಹುಲ್ ಚೋಸ್ಕಿ
Lakshmi Hegde
|

Updated on: May 27, 2021 | 10:31 PM

Share

ದೇಶಭ್ರಷ್ಟ ವಜ್ರದ ಉದ್ಯಮಿ ಮೆಹುಲ್ ಚೋಸ್ಕಿಯನ್ನು ಡೊಮಿನಿಕಾ ದ್ವೀಪದಲ್ಲಿ ನಿನ್ನೆ ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಇಷ್ಟುದಿನ ಆಂಟಿಗುವಾ ದೇಶದಲ್ಲಿ ಇದ್ದು, ಅಲ್ಲಿಯ ಪೌರತ್ವವನ್ನೂ ಪಡೆದಿದ್ದ ಮೆಹುಲ್​ ಚೋಸ್ಕಿ ತನ್ನ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುತ್ತಿದ್ದಂತೆ ತಲೆ ಮರೆಸಿಕೊಂಡು ಡೊಮಿನಿಕಾಗೆ ಹೋಗಿದ್ದರು. ಅಲ್ಲಿಂದಲೂ ಸಹ ಗುಪ್ತವಾಗಿ ಕ್ಯೂಬಾಕ್ಕೆ ತೆರಳಲು ಸಿದ್ಧತೆ ನಡೆಸಿದ್ದರು. ಆದರೆ ಆ ಪ್ಲ್ಯಾನ್​ ವಿಫಲಗೊಂಡಿತ್ತು.

ನಿನ್ನೆ ಚೋಸ್ಕಿ ಬಂಧನವಾಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ್ದ ಆಂಟಿಗುವಾ ಮತ್ತು ಬಾರ್ಬುಡಾ ದೇಶದ ಪ್ರಧಾನಿ ಗಷ್ಟನ್ ಬ್ರೌನ್, ಚೋಸ್ಕಿ ದೇಶ ತೊರೆದು ಡೊಮಿನಿಕಾಗೆ ತೆರಳಿದ್ದರು. ಮತ್ತೆ ನಾವು ಅವರನ್ನು ಆಂಟಿಗುವಾಕ್ಕೆ ಪ್ರವೇಶಿಸಲು ಬಿಡುವುದಿಲ್ಲ. ಡೊಮಿನಿಕಾದಿಂದಲೇ ಭಾರತಕ್ಕೆ ಹಸ್ತಾಂತರ ಆಗಬೇಕು ಎಂದು ಹೇಳಿದ್ದರು. ಆದರೆ ಡೊಮಿನಿಕಾದ ರಾಷ್ಟ್ರೀಯ ಭದ್ರತೆ ಮತ್ತು ಗೃಹ ವ್ಯವಹಾರಗಳ ಸಚಿವಾಲಯ ಇಂದು ಹೇಳಿಕೆ ಬಿಡುಗಡೆ ಮಾಡಿದ್ದು, ನಾವು ಚೋಸ್ಕಿಯನ್ನು ವಾಪಸ್​ ಆಂಟಿಗುವಾಕ್ಕೆ ಕಳಿಸು ಎಂದು ತಿಳಿಸಿದೆ. ಆಂಟಿಗುವಾದಿಂದ ಡೊಮಿನಿಕಾಗೆ ಅಕ್ರಮವಾಗಿ ಪ್ರವೇಶ ಮಾಡಿದ್ದರಿಂದ ಚೋಸ್ಕಿಯನ್ನು ಬಂಧಿಸಲಾಗಿದೆ. ಆಂಟಿಗುವಾ ಆಡಳಿತದೊಂದಿಗೆ ನಾವು ಸಂಪರ್ಕದಲ್ಲಿದ್ದು, ಚೋಸ್ಕಿಯನ್ನು ಅಲ್ಲಿಗೆ ಕಳಿಸಲು ಎಲ್ಲ ರೀತಿಯ ಸಿದ್ಧತೆಗಳನ್ನೂ ಮಾಡಲಾಗುತ್ತಿದೆ ಎಂದು ತಿಳಿಸಿದೆ.

ಇದನ್ನೂ ಓದಿ: Mehul Choksi: 13,500 ಕೋಟಿ ವಂಚನೆಯ ಆರೋಪಿ ಮೆಹುಲ್ ಚೋಸ್ಕಿ ಭಾರತಕ್ಕೆ ಹಸ್ತಾಂತರ: ಆಂಟಿಗುವಾ ಪ್ರಧಾನಿ

Mehul Choksi: ದೇಶಭ್ರಷ್ಟ ವಜ್ರ ವ್ಯಾಪಾರಿ ಮೆಹುಲ್ ಚೋಸ್ಕಿ ಡೊಮಿನಿಕಾದಲ್ಲಿ ಅರೆಸ್ಟ್​; ಕ್ಯೂಬಾಕ್ಕೆ ಹೊರಡಲು ನಡೆದಿತ್ತು ಸಿದ್ಧತೆ

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!