AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ ಅಧ್ಯಕ್ಷ ಪುಟಿನ್​​ಗೆ ಪತ್ರ ಬರೆದ ಅಮೆರಿಕ ಅಧ್ಯಕ್ಷ ಟ್ರಂಪ್ ಪತ್ನಿ ಮೆಲಾನಿಯಾ

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್​(Vladimir Putin)ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಪತ್ನಿ ಮೆಲಾನಿಯಾ ಟ್ರಂಪ್ ಪತ್ರ ಬರೆದಿದ್ದಾರೆ. ಉಕ್ರೇನ್ ಮಕ್ಕಳ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿ ಈ ಪತ್ರವನ್ನು ಬರೆದಿದ್ದಾರೆ. ಹಳ್ಳಿಯಲ್ಲಿ ಜನಿಸಿರಲಿ, ನಗರದಲ್ಲಿ ಜನಿಸಿರಲಿ ಪ್ರತಿಯೊಂದು ಮಗುವಿನ ಹೃದಯದಲ್ಲಿ ಒಂದೇ ರೀತಿಯ ಕನಸುಗಳಿವೆ. ಅವರು ಅಪಾಯಗಳಿಂದ ರಕ್ಷಣೆಯ ಕನಸು ಕಾಣುತ್ತಾರೆ.ಪೋಷಕರಂತೆ, ನಾಯಕರು ಸಹ ಮುಂದಿನ ಪೀಳಿಗೆಯ ಭರವಸೆಗಳನ್ನು ಜೀವಂತವಾಗಿಡುವ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

ರಷ್ಯಾ ಅಧ್ಯಕ್ಷ ಪುಟಿನ್​​ಗೆ ಪತ್ರ ಬರೆದ ಅಮೆರಿಕ ಅಧ್ಯಕ್ಷ ಟ್ರಂಪ್ ಪತ್ನಿ ಮೆಲಾನಿಯಾ
ಪುಟಿನ್
ನಯನಾ ರಾಜೀವ್
|

Updated on: Aug 17, 2025 | 10:41 AM

Share

ವಾಷಿಂಗ್ಟನ್, ಆಗಸ್ಟ್​ 17: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್​(Vladimir Putin)ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಪತ್ನಿ ಮೆಲಾನಿಯಾ ಟ್ರಂಪ್ ಪತ್ರ ಬರೆದಿದ್ದಾರೆ. ಉಕ್ರೇನ್ ಮಕ್ಕಳ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿ ಈ ಪತ್ರವನ್ನು ಬರೆದಿದ್ದಾರೆ. ಹಳ್ಳಿಯಲ್ಲಿ ಜನಿಸಿರಲಿ, ನಗರದಲ್ಲಿ ಜನಿಸಿರಲಿ ಪ್ರತಿಯೊಂದು ಮಗುವಿನ ಹೃದಯದಲ್ಲಿ ಒಂದೇ ರೀತಿಯ ಕನಸುಗಳಿವೆ. ಅವರು ಅಪಾಯಗಳಿಂದ ರಕ್ಷಣೆಯ ಕನಸು ಕಾಣುತ್ತಾರೆ.ಪೋಷಕರಂತೆ, ನಾಯಕರು ಸಹ ಮುಂದಿನ ಪೀಳಿಗೆಯ ಭರವಸೆಗಳನ್ನು ಜೀವಂತವಾಗಿಡುವ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಅಮೆರಿಕದ ಅಲಾಸ್ಕಾದಲ್ಲಿ ಸಭೆ ನಡೆಯಿತು. ಈ ಸಭೆ ಇಡೀ ಪ್ರಪಂಚದ ಗಮನ ಸೆಳೆಯಿತು. ಈ ಸಭೆಯಿಂದ ಸಕಾರಾತ್ಮ ಫಲಿತಾಂಶಗಳು ಗೋಚರಿಸದಿದ್ದರೂ ಟ್ರಂಪ್ ಇದೊಂದು ಉತ್ತಮ ಭೇಟಿ ಎಂದು ಕರೆದಿದ್ದಾರೆ.ಈ ಭೇಟಿ ಬಳಿಕ ಮೆಲಾನಿಯಾ ಟ್ರಂಪ್ ಪುಟಿನ್​ಗೆ ಶಾಂತಿ ಪತ್ರವನ್ನು ಬರೆದಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವ ಮಾರ್ಗಗಳನ್ನು ಕಂಡುಕೊಳ್ಳುವುದು ಈ ಸಭೆಯ ಉದ್ದೇಶವಾಗಿತ್ತು.

ಈ ಪತ್ರವನ್ನು ಮೊದಲು ಫಾಕ್ಸ್ ನ್ಯೂಸ್ ಡಿಜಿಟಲ್ ವರದಿ ಮಾಡಿದೆ. ಟ್ರಂಪ್ ಈ ಪತ್ರವನ್ನು ಪುಟಿನ್ ಅವರಿಗೆ ಹಸ್ತಾಂತರಿಸಿದಾಗ, ಅವರು ತಕ್ಷಣ ಅದನ್ನು ಓದಿದರು ಮತ್ತು ಸಭೆಯಲ್ಲಿದ್ದ ಎಲ್ಲಾ ನಿಯೋಗಗಳು ಈ ಕ್ಷಣಕ್ಕೆ ಸಾಕ್ಷಿಯಾದವು.

ಮತ್ತಷ್ಟು ಓದಿ:ಪುಟಿನ್, ಝೆಲೆನ್ಸ್ಕಿ ಜತೆ ತ್ರಿಪಕ್ಷೀಯ ಸಭೆ ನಡೆಸಲು ಮುಂದಾದ ಟ್ರಂಪ್

ಈ ಹಿಂದೆ ಯುದ್ಧಭೂಮಿಯಲ್ಲಿ ದುರ್ಬಲ ಮಕ್ಕಳನ್ನು ರಕ್ಷಿಸುವುದಾಗಿ ಮಾಸ್ಕೊ ತಿಳಿಸಿತ್ತು. ಉಕ್ರೇನ್​ ಮೇಲೆ ರಷ್ಯಾದ ಆಕ್ರಮಣ ಪ್ರಾರಂಭವಾದಾಗಿಂದಲೂ ಲಕ್ಷಾಂತರ ಉಕ್ರೇನಿನ ಮಕ್ಕಳು ಸಂಕಷ್ಟ ಎದುರಿಸುತ್ತಿದ್ದಾರೆ ಹಾಗೂ ಅವರ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿ ತಿಳಿಸಿದೆ. ಅಲಸ್ಕಾದಲ್ಲಿ ಟ್ರಂಪ್​ ಮತ್ತು ಪುಟಿನ್​ ನಡುವೆ ಸುಮಾರು ಮೂರು ಗಂಟೆಗಳ ಕಾಲ ಸಭೆ ನಡೆದರೂ,ಕೂಡಾ ಉಕ್ರೇನ್​ ನಡುವಿನ ಕದನ ವಿರಾಮ ಒಪ್ಪಂದದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್(Vladimir Putin) ಅವರೊಂದಿಗಿನ ಭೇಟಿ ಬಳಿಕ ಇದೀಗ ಆಗಸ್ಟ್​ 22ರಂದು ಪುಟಿನ್ ಹಾಗೂ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜತೆ ತ್ರಿಪಕ್ಷೀಯ ಮಾತುಕತೆ ನಡೆಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಸಿದ್ಧರಾಗಿದ್ದಾರೆ. ಉಕ್ರೇನ್‌-ರಷ್ಯಾ ಸಂಘರ್ಷಕ್ಕೆ ಅಂತ್ಯ ಹಾಡಿ, ಶಾಂತಿ ಸ್ಥಾಪಿಸುವ ಉದ್ದೇಶದಿಂದ ಶನಿವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ನಡುವೆ ಅಮೆರಿಕದ ಅಲಾಸ್ಕಾದಲ್ಲಿ ನಡೆದ ದ್ವಿಪಕ್ಷೀಯ ಮಾತುಕತೆ ಯಾವುದೇ ಸಕಾರಾತ್ಮಕ ಫಲಿತಾಂಶವಿಲ್ಲದೇ ಅಂತ್ಯವಾಗಿದೆ ಎಂದು ಹೇಳಲಾಗಿದೆ.

ಶನಿವಾರ ಎಕ್ಸ್ ಪೋಸ್ಟ್‌ನಲ್ಲಿ ಝೆಲೆನ್ಸ್ಕಿ ಅವರು ಸೋಮವಾರ ವಾಷಿಂಗ್ಟನ್‌ನಲ್ಲಿ ಟ್ರಂಪ್ ಅವರನ್ನು ಭೇಟಿಯಾಗುವುದಾಗಿ ಹೇಳಿದ್ದಾರೆ. ಸೋಮವಾರದ ಶ್ವೇತಭವನದ ಸಭೆಯಲ್ಲಿ ಭಾಗವಹಿಸಲು ಟ್ರಂಪ್ ಯುರೋಪಿಯನ್ ನಾಯಕರನ್ನು ಆಹ್ವಾನಿಸಿದ್ದಾರೆ ಎಂದು ಅಮೆರಿಕದ ಆನ್‌ಲೈನ್ ಮಾಧ್ಯಮ ಸಂಸ್ಥೆ ಆಕ್ಸಿಯೋಸ್ ವರದಿ ಮಾಡಿದೆ.

1945ರ ನಂತರದ ಯುರೋಪಿನ ಅತಿದೊಡ್ಡ ಭೂ ಯುದ್ಧವಾದ ರಷ್ಯಾ ಮತ್ತು ಉಕ್ರೇನ್ ನಡುವಿನ ಕ್ರೂರ ಸಂಘರ್ಷವನ್ನು ಕೊನೆಗೊಳಿಸಲು ಅಥವಾ ವಿರಾಮಗೊಳಿಸಲು ಸೇರಿದ್ದ ಅಲಸ್ಕಾ ಶೃಂಗಸಭೆ ಯಾವುದೇ ಒಪ್ಪಂದವಿಲ್ಲದೆ ಅಂತ್ಯಗೊಂಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು