AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Australia Earthquake: ಆಸ್ಟ್ರೇಲಿಯಾದ ಮೆಲ್ಬರ್ನ್​ನಲ್ಲಿ 6.0 ತೀವ್ರತೆಯ ಭೂಕಂಪ

Melbourne earthquake | ಅಮೆರಿಕದ ಜಿಯಾಲಾಜಿಕಲ್ ಸರ್ವೆ ಕಂಪನಿಯ ಮಾಹಿತಿ ಪ್ರಕಾರ, ಮೆಲ್ಬರ್ನ್​ನಲ್ಲಿ ರಿಕ್ಟರ್​ ಮಾಪಕದಲ್ಲಿ 6.0 ಮ್ಯಾಗ್ನಿಟ್ಯೂಡ್​ತೀವ್ರತೆಯ ಭೂಕಂಪ ದಾಖಲಾಗಿದೆ.

Australia Earthquake: ಆಸ್ಟ್ರೇಲಿಯಾದ ಮೆಲ್ಬರ್ನ್​ನಲ್ಲಿ 6.0 ತೀವ್ರತೆಯ ಭೂಕಂಪ
ಮೆಲ್ಬರ್ನ್​ನಲ್ಲಿ ಭೂಕಂಪ
TV9 Web
| Edited By: |

Updated on:Sep 22, 2021 | 2:03 PM

Share

ಸಿಡ್ನಿ: ಆಸ್ಟ್ರೇಲಿಯಾದ ಮೆಲ್ಬರ್ನ್​ನಲ್ಲಿ (Melbourne Earthquake) ಇಂದು ಬೆಳಗ್ಗೆ ಭೂಕಂಪ ಉಂಟಾಗಿದ್ದು, ಕಟ್ಟಡದ ಗೋಡೆಗಳು ಮುರಿದು ಬಿದ್ದಿವೆ. ಜನರು ಗಾಬರಿಯಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಸಾಕಷ್ಟು ದೂರದವರೆಗೆ ಭೂಕಂಪದ ಪರಿಣಾಮ ಉಂಟಾಗಿದೆ. ಆಸ್ಟ್ರೇಲಿಯದ ಎರಡನೇ ಅತಿ ದೊಡ್ಡ ನಗರವಾದ ಮೆಲ್ಬರ್ನ್​ನಲ್ಲಿ ಈ ಭೂಕಂಪ ಸಂಭವಿಸಿದ್ದು, ನೂರಾರು ಕಿ.ಮೀ. ದೂರದವರೆಗೂ ಈ ಭೂಕಂಪದ ಅನುಭವವಾಗಿದೆ.

ಅಮೆರಿಕದ ಜಿಯಾಲಾಜಿಕಲ್ ಸರ್ವೆ ಕಂಪನಿಯ ಮಾಹಿತಿ ಪ್ರಕಾರ, ಮೆಲ್ಬರ್ನ್​ನಲ್ಲಿ ರಿಕ್ಟರ್​ ಮಾಪಕದಲ್ಲಿ 6.0 ಮ್ಯಾಗ್ನಿಟ್ಯೂಡ್​ತೀವ್ರತೆಯ ಭೂಕಂಪ ದಾಖಲಾಗಿದೆ. ಸುಮಾರು 10 ಕಿ.ಮೀ. ಆಳದಲ್ಲಿ ಭೂಕಂಪ ಅಪ್ಪಳಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾನ್ಸ್​ಫೀಲ್ಡ್ ಮೇಯರ್ ಮಾರ್ಕ್ ಹೋಲ್ಕೊಂಬೆ, ಈ ಭೂಕಂಪದಿಂದ ಯಾವುದೇ ಹಾನಿಯಾದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದಿದ್ದಾರೆ.

ಪ್ರಧಾನಮಂತ್ರಿ ಸ್ಕಾಟ್ ಮಾರಿಸನ್ ಕೂಡ ಭೂಕಂಪದಿಂದ ಯಾವುದೇ ಗಂಭೀರ ಅಪಾಯಗಳು ಸಂಭವಿಸಿಲ್ಲ ಎಂದು ಖಚಿತಪಡಿಸಿದ್ದಾರೆ. ಭೂಕಂಪದಿಂದ ಕಟ್ಟಡಗಳು ಅಲುಗಾಡಿದ್ದು, ಮನೆಗಳ ಕಿಟಕಿಗಳ ಗಾಜುಗಳು ಚೂರಾಗಿವೆ. ಈ ಭೂಕಂಪದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇದನ್ನೂ ಓದಿ: Narendra Modi: ದೆಹಲಿಯಿಂದ ವಿಶೇಷ ವಿಮಾನದಲ್ಲಿ ಅಮೆರಿಕ ಪ್ರವಾಸಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿ

Narendra Modi Birthday: ಬಾಳೆ ಎಲೆ ಮೇಲೆ ಪ್ರಧಾನಿ ಮೋದಿ ಚಿತ್ರ ಬಿಡಿಸಿ ಬರ್ತ್​​ಡೆ ವಿಶ್ ಮಾಡಿದ ಧಾರವಾಡದ ಕಲಾವಿದ

(Melbourne earthquake Magnitude 6.0 Rare earthquake causes some damage in Australia)

Published On - 1:33 pm, Wed, 22 September 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?