AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Australia Earthquake: ಆಸ್ಟ್ರೇಲಿಯಾದ ಮೆಲ್ಬರ್ನ್​ನಲ್ಲಿ 6.0 ತೀವ್ರತೆಯ ಭೂಕಂಪ

Melbourne earthquake | ಅಮೆರಿಕದ ಜಿಯಾಲಾಜಿಕಲ್ ಸರ್ವೆ ಕಂಪನಿಯ ಮಾಹಿತಿ ಪ್ರಕಾರ, ಮೆಲ್ಬರ್ನ್​ನಲ್ಲಿ ರಿಕ್ಟರ್​ ಮಾಪಕದಲ್ಲಿ 6.0 ಮ್ಯಾಗ್ನಿಟ್ಯೂಡ್​ತೀವ್ರತೆಯ ಭೂಕಂಪ ದಾಖಲಾಗಿದೆ.

Australia Earthquake: ಆಸ್ಟ್ರೇಲಿಯಾದ ಮೆಲ್ಬರ್ನ್​ನಲ್ಲಿ 6.0 ತೀವ್ರತೆಯ ಭೂಕಂಪ
ಮೆಲ್ಬರ್ನ್​ನಲ್ಲಿ ಭೂಕಂಪ
TV9 Web
| Edited By: |

Updated on:Sep 22, 2021 | 2:03 PM

Share

ಸಿಡ್ನಿ: ಆಸ್ಟ್ರೇಲಿಯಾದ ಮೆಲ್ಬರ್ನ್​ನಲ್ಲಿ (Melbourne Earthquake) ಇಂದು ಬೆಳಗ್ಗೆ ಭೂಕಂಪ ಉಂಟಾಗಿದ್ದು, ಕಟ್ಟಡದ ಗೋಡೆಗಳು ಮುರಿದು ಬಿದ್ದಿವೆ. ಜನರು ಗಾಬರಿಯಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಸಾಕಷ್ಟು ದೂರದವರೆಗೆ ಭೂಕಂಪದ ಪರಿಣಾಮ ಉಂಟಾಗಿದೆ. ಆಸ್ಟ್ರೇಲಿಯದ ಎರಡನೇ ಅತಿ ದೊಡ್ಡ ನಗರವಾದ ಮೆಲ್ಬರ್ನ್​ನಲ್ಲಿ ಈ ಭೂಕಂಪ ಸಂಭವಿಸಿದ್ದು, ನೂರಾರು ಕಿ.ಮೀ. ದೂರದವರೆಗೂ ಈ ಭೂಕಂಪದ ಅನುಭವವಾಗಿದೆ.

ಅಮೆರಿಕದ ಜಿಯಾಲಾಜಿಕಲ್ ಸರ್ವೆ ಕಂಪನಿಯ ಮಾಹಿತಿ ಪ್ರಕಾರ, ಮೆಲ್ಬರ್ನ್​ನಲ್ಲಿ ರಿಕ್ಟರ್​ ಮಾಪಕದಲ್ಲಿ 6.0 ಮ್ಯಾಗ್ನಿಟ್ಯೂಡ್​ತೀವ್ರತೆಯ ಭೂಕಂಪ ದಾಖಲಾಗಿದೆ. ಸುಮಾರು 10 ಕಿ.ಮೀ. ಆಳದಲ್ಲಿ ಭೂಕಂಪ ಅಪ್ಪಳಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾನ್ಸ್​ಫೀಲ್ಡ್ ಮೇಯರ್ ಮಾರ್ಕ್ ಹೋಲ್ಕೊಂಬೆ, ಈ ಭೂಕಂಪದಿಂದ ಯಾವುದೇ ಹಾನಿಯಾದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದಿದ್ದಾರೆ.

ಪ್ರಧಾನಮಂತ್ರಿ ಸ್ಕಾಟ್ ಮಾರಿಸನ್ ಕೂಡ ಭೂಕಂಪದಿಂದ ಯಾವುದೇ ಗಂಭೀರ ಅಪಾಯಗಳು ಸಂಭವಿಸಿಲ್ಲ ಎಂದು ಖಚಿತಪಡಿಸಿದ್ದಾರೆ. ಭೂಕಂಪದಿಂದ ಕಟ್ಟಡಗಳು ಅಲುಗಾಡಿದ್ದು, ಮನೆಗಳ ಕಿಟಕಿಗಳ ಗಾಜುಗಳು ಚೂರಾಗಿವೆ. ಈ ಭೂಕಂಪದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇದನ್ನೂ ಓದಿ: Narendra Modi: ದೆಹಲಿಯಿಂದ ವಿಶೇಷ ವಿಮಾನದಲ್ಲಿ ಅಮೆರಿಕ ಪ್ರವಾಸಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿ

Narendra Modi Birthday: ಬಾಳೆ ಎಲೆ ಮೇಲೆ ಪ್ರಧಾನಿ ಮೋದಿ ಚಿತ್ರ ಬಿಡಿಸಿ ಬರ್ತ್​​ಡೆ ವಿಶ್ ಮಾಡಿದ ಧಾರವಾಡದ ಕಲಾವಿದ

(Melbourne earthquake Magnitude 6.0 Rare earthquake causes some damage in Australia)

Published On - 1:33 pm, Wed, 22 September 21

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ