AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mexico: ನಯಾರಿತ್‌ನಲ್ಲಿ ಭೀಕರ ಅಪಘಾತಕ್ಕೆ 15 ಮಂದಿ ದುರ್ಮರಣ, 47 ಮಂದಿಗೆ ಗಾಯ

ಮೆಕ್ಸಿಕೊದ ನಯಾರಿತ್​​ನಲ್ಲಿ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್ ಹೆದ್ದಾರಿಯಲ್ಲಿ ಪಲ್ಟಿಯಾದ ಪರಿಣಾಮ ಹದಿನೈದು ಜನರು ಸಾವನ್ನಪ್ಪಿದ್ದಾರೆ ಮತ್ತು 47 ಮಂದಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ

Mexico: ನಯಾರಿತ್‌ನಲ್ಲಿ ಭೀಕರ ಅಪಘಾತಕ್ಕೆ 15 ಮಂದಿ ದುರ್ಮರಣ, 47 ಮಂದಿಗೆ ಗಾಯ
ಮೆಕ್ಸಿಕೊದಲ್ಲಿ ಭೀಕರ ಅಪಘಾತ; ಸ್ಥಳ ಪರಿಶೀಲನೆ ನಡೆಸುತ್ತಿರುವ ಪೊಲೀಸರು
Follow us
TV9 Web
| Updated By: Rakesh Nayak Manchi

Updated on:Jan 02, 2023 | 7:01 AM

ಮೆಕ್ಸಿಕೋ ಸಿಟಿ: ಭೀಕರ ರಸ್ತೆ ಅಪಘಾತದಲ್ಲಿ (Road Accident in Mexico) 15 ಜನರು ಸಾವನ್ನಪ್ಪಿ 47 ಮಂದಿ ಗಾಯಗೊಂಡ ಘಟನೆ ಪೆಸಿಫಿಕ್ ಕರಾವಳಿ ರಾಜ್ಯವಾದ ನಯಾರಿತ್‌ (Nayarit)ನಲ್ಲಿ ನಡೆದಿದೆ. ರಜಾ ದಿನದ ಹಿನ್ನಲೆ ಜನರು ಬಸ್ ಮೂಲಕ ಪ್ರವಾಸ ಗೈಗೊಂಡಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಬಸ್ ಪಲ್ಟಿಯಾಗಿ ಸಾವು-ನೋವು ಸಂಭವಿಸಿದೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲಾ ಪ್ರಯಾಣಿಕರು ಆ ರಾಜ್ಯದ ಅದೇ ನಗರದ ಲಿಯಾನ್‌ನಿಂದ ಬಂದವರು ಎಂದು ಗ್ವಾನಾಜುವಾಟೊದ ಅಧಿಕಾರಿಗಳು ಹೇಳಿದರು.

ಗ್ರಾಮೀಣ ರಸ್ತೆಯಲ್ಲಿ ಶುಕ್ರವಾರ ಅಪಘಾತ ಸಂಭವಿಸಿದೆ ಎಂದು ನಯರಿತ್‌ನ ಪ್ರಾಸಿಕ್ಯೂಟರ್‌ಗಳು ತಿಳಿಸಿದ್ದಾರೆ. ಸತ್ತವರಲ್ಲಿ ಕನಿಷ್ಠ ನಾಲ್ಕು ಮಕ್ಕಳು ಸೇರಿದ್ದಾರೆ ಎಂದು ಅವರು ಹೇಳಿದರು. ಪೋರ್ಟೊ ವಲ್ಲರ್ಟಾದ ಉತ್ತರದ ಬೀಚ್ ಪಟ್ಟಣವಾದ ಗುಯಾಬಿಟೋಸ್‌ನಿಂದ ಪ್ರಯಾಣಿಕರು ಹಿಂತಿರುಗುತ್ತಿದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಕಾಬೂಲ್‌ನ ಸೇನಾ ವಿಮಾನ ನಿಲ್ದಾಣದ ಹೊರಗೆ ಸ್ಫೋಟ: 10 ಸಾವು

ಅಪಘಾತದ ಏನು ಕಾರಣ ಎಂದು ತನಿಖೆ ನಡೆಸಲಾಗುತ್ತಿದೆ. ಗಾಯಗೊಂಡವರಲ್ಲಿ 45 ಮಂದಿ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಾಯಾಳುಗಳ ಸ್ಥಿತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಬಾಡಿಗೆ ಬಸ್‌ಗಳ ಕಳಪೆ ನಿರ್ವಹಣೆ, ಕೆಟ್ಟ ಹವಾಮಾನ ಅಥವಾ ಹೆದ್ದಾರಿ ಪರಿಸ್ಥಿತಿಗಳು ಅಥವಾ ವೇಗದ ಚಾಲನೆಯಿಂದ ಇಂತಹ ಅಪಘಾತಗಳು ಈ ಹಿಂದೆಯೂ ನಡೆದಿವೆ.

ವಿದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:00 am, Mon, 2 January 23

ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ