AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mexico Bus Accident: ಬಸ್​ ಕಂದಕಕ್ಕೆ ಬಿದ್ದು ಭಾರತೀಯರು ಸೇರಿ 18 ಮಂದಿ ಸಾವು, 20 ಜನರಿಗೆ ಗಂಭೀರ ಗಾಯ

ಮೆಕ್ಸಿಕೋದಲ್ಲಿ ಬಸ್​ ಕಂದಕಕ್ಕೆ ಬಿದ್ದು ಭಾರತೀಯರು ಸೇರಿದಂತೆ 18 ಮಂದಿ ಮೃತಪಟ್ಟಿದ್ದಾರೆ, 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್‌ನಲ್ಲಿ 42 ಪ್ರಯಾಣಿಕರಿದ್ದು, ಹೆಚ್ಚಿನವರು ವಿದೇಶಿಗರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Mexico Bus Accident: ಬಸ್​ ಕಂದಕಕ್ಕೆ ಬಿದ್ದು ಭಾರತೀಯರು ಸೇರಿ 18 ಮಂದಿ ಸಾವು, 20 ಜನರಿಗೆ ಗಂಭೀರ ಗಾಯ
ಬಸ್ ಅಪಘಾತ
ನಯನಾ ರಾಜೀವ್
|

Updated on: Aug 04, 2023 | 12:33 PM

Share

ಮೆಕ್ಸಿಕೋದಲ್ಲಿ ಬಸ್​ ಕಂದಕಕ್ಕೆ ಬಿದ್ದು ಭಾರತೀಯರು ಸೇರಿದಂತೆ 18 ಮಂದಿ ಮೃತಪಟ್ಟಿದ್ದಾರೆ, 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್‌ನಲ್ಲಿ 42 ಪ್ರಯಾಣಿಕರಿದ್ದು, ಹೆಚ್ಚಿನವರು ವಿದೇಶಿಗರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಸ್ ಹತ್ತಿದ ವಿದೇಶಿ ಪ್ರಯಾಣಿಕರಲ್ಲಿ ಭಾರತ, ಡೊಮಿನಿಕನ್ ರಿಪಬ್ಲಿಕ್ ಮತ್ತು ಆಫ್ರಿಕನ್ ದೇಶಗಳ ನಾಗರಿಕರು ಇದ್ದರು. ಅವರಲ್ಲಿ ಕೆಲವರು ಅಮೆರಿಕದ ಗಡಿಯ ಕಡೆಗೆ ಹೋಗುತ್ತಿದ್ದರು.

ಅಪಘಾತಕ್ಕೀಡಾದ ಬಸ್‌ನಿಂದ ಜನರನ್ನು ಹೊರತೆಗೆಯಲು ಹರಸಾಹಸಪಡಲಾಗುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ರಾಜ್ಯ ಸಾರ್ವಜನಿಕ ಭದ್ರತಾ ಸಂಸ್ಥೆ ತಿಳಿಸಿದೆ.

ಘಟನೆಯಲ್ಲಿ ಸುಮಾರು 21 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಸಂಸ್ಥೆ ತನ್ನ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್ ಮಾಡಲಾಗಿದೆ. ಗಾಯಗೊಂಡವರಲ್ಲಿ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: Shivamogga News: ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ, 34ಕ್ಕೂ ಹೆಚ್ಚು ಪ್ರಯಾಣಿಕರಿಗೆ ಕರೆಂಟ್​ ಶಾಕ್

ರಾಜ್ಯ ರಾಜಧಾನಿ ಟೆಪಿಕ್ ಬಳಿ ಅಪಘಾತ ಸಂಭವಿಸಿದೆ. ಬಸ್ ಮೆಕ್ಸಿಕೋ ಸಿಟಿಯಿಂದ ಹೊರಟು ಗಡಿ ನಗರವಾದ ಟಿಜುವಾನಾಗೆ ಹೋಗುತ್ತಿತ್ತು ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.

ಬಸ್ ಚಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ನಯರಿತ್ ರಾಜ್ಯ ಸರ್ಕಾರ ತಿಳಿಸಿದೆ. ರಸ್ತೆಯ ತಿರುವಿನಲ್ಲಿ ಅತಿವೇಗದಲ್ಲಿ ವಾಹನ ಚಲಾಯಿಸಿದ್ದು ಅಪಘಾತಕ್ಕೆ ಕಾರಣ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್