AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mexico Bus Accident: ಬಸ್​ ಕಂದಕಕ್ಕೆ ಬಿದ್ದು ಭಾರತೀಯರು ಸೇರಿ 18 ಮಂದಿ ಸಾವು, 20 ಜನರಿಗೆ ಗಂಭೀರ ಗಾಯ

ಮೆಕ್ಸಿಕೋದಲ್ಲಿ ಬಸ್​ ಕಂದಕಕ್ಕೆ ಬಿದ್ದು ಭಾರತೀಯರು ಸೇರಿದಂತೆ 18 ಮಂದಿ ಮೃತಪಟ್ಟಿದ್ದಾರೆ, 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್‌ನಲ್ಲಿ 42 ಪ್ರಯಾಣಿಕರಿದ್ದು, ಹೆಚ್ಚಿನವರು ವಿದೇಶಿಗರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Mexico Bus Accident: ಬಸ್​ ಕಂದಕಕ್ಕೆ ಬಿದ್ದು ಭಾರತೀಯರು ಸೇರಿ 18 ಮಂದಿ ಸಾವು, 20 ಜನರಿಗೆ ಗಂಭೀರ ಗಾಯ
ಬಸ್ ಅಪಘಾತ
ನಯನಾ ರಾಜೀವ್
|

Updated on: Aug 04, 2023 | 12:33 PM

Share

ಮೆಕ್ಸಿಕೋದಲ್ಲಿ ಬಸ್​ ಕಂದಕಕ್ಕೆ ಬಿದ್ದು ಭಾರತೀಯರು ಸೇರಿದಂತೆ 18 ಮಂದಿ ಮೃತಪಟ್ಟಿದ್ದಾರೆ, 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್‌ನಲ್ಲಿ 42 ಪ್ರಯಾಣಿಕರಿದ್ದು, ಹೆಚ್ಚಿನವರು ವಿದೇಶಿಗರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಸ್ ಹತ್ತಿದ ವಿದೇಶಿ ಪ್ರಯಾಣಿಕರಲ್ಲಿ ಭಾರತ, ಡೊಮಿನಿಕನ್ ರಿಪಬ್ಲಿಕ್ ಮತ್ತು ಆಫ್ರಿಕನ್ ದೇಶಗಳ ನಾಗರಿಕರು ಇದ್ದರು. ಅವರಲ್ಲಿ ಕೆಲವರು ಅಮೆರಿಕದ ಗಡಿಯ ಕಡೆಗೆ ಹೋಗುತ್ತಿದ್ದರು.

ಅಪಘಾತಕ್ಕೀಡಾದ ಬಸ್‌ನಿಂದ ಜನರನ್ನು ಹೊರತೆಗೆಯಲು ಹರಸಾಹಸಪಡಲಾಗುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ರಾಜ್ಯ ಸಾರ್ವಜನಿಕ ಭದ್ರತಾ ಸಂಸ್ಥೆ ತಿಳಿಸಿದೆ.

ಘಟನೆಯಲ್ಲಿ ಸುಮಾರು 21 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಸಂಸ್ಥೆ ತನ್ನ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್ ಮಾಡಲಾಗಿದೆ. ಗಾಯಗೊಂಡವರಲ್ಲಿ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: Shivamogga News: ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ, 34ಕ್ಕೂ ಹೆಚ್ಚು ಪ್ರಯಾಣಿಕರಿಗೆ ಕರೆಂಟ್​ ಶಾಕ್

ರಾಜ್ಯ ರಾಜಧಾನಿ ಟೆಪಿಕ್ ಬಳಿ ಅಪಘಾತ ಸಂಭವಿಸಿದೆ. ಬಸ್ ಮೆಕ್ಸಿಕೋ ಸಿಟಿಯಿಂದ ಹೊರಟು ಗಡಿ ನಗರವಾದ ಟಿಜುವಾನಾಗೆ ಹೋಗುತ್ತಿತ್ತು ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.

ಬಸ್ ಚಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ನಯರಿತ್ ರಾಜ್ಯ ಸರ್ಕಾರ ತಿಳಿಸಿದೆ. ರಸ್ತೆಯ ತಿರುವಿನಲ್ಲಿ ಅತಿವೇಗದಲ್ಲಿ ವಾಹನ ಚಲಾಯಿಸಿದ್ದು ಅಪಘಾತಕ್ಕೆ ಕಾರಣ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್