AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೀಸ್​ನಲ್ಲಿ ಕಾಡ್ಗಿಚ್ಚು ನಂದಿಸುವಾಗ ಭೀಕರ ದುರಂತ, ಆಕಾಶದಲ್ಲೇ ಡಿಕ್ಕಿಯಾದ ಹೆಲಿಕಾಪ್ಟರ್​ಗಳು, ಇಬ್ಬರು ಸಿಬ್ಬಂದಿ ಸಾವು

ಕ್ ರಾಜಧಾನಿ ಅಥೆನ್ಸ್​​ನ ಪಶ್ಚಿಮಕ್ಕೆ ಹರಡಿರುವ ಅರಣ್ಯದಲ್ಲಿ ಹಬ್ಬಿದ್ದ ಕಾಡ್ಗಿಚ್ಚು                              ನಂದಿಸುವ ಕಾರ್ಯಾಚರಣೆಯಲ್ಲಿದ್ದ ಎರಡು ಅಗ್ನಿಶಾಮಕ ಹೆಲಿಕಾಪ್ಟರ್​(Helicopter)ಗಳು ಆಕಾಶದಲ್ಲೇ ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅಥೆನ್ಸ್‌ನ ಪಶ್ಚಿಮಕ್ಕೆ ಸುಮಾರು 60 ಕಿಲೋಮೀಟರ್ ದೂರದಲ್ಲಿರುವ ಪೋರ್ಟೊ ಜೆರ್ಮೆನೊ ಬಳಿಯ ಪ್ಸಾಥಾ ಅರಣ್ಯ ಪ್ರದೇಶದ ಮೇಲೆ ಈ ಭೀಕರ ಅಪಘಾತ ಸಂಭವಿಸಿದೆ. ‘ಬೆಲ್’ ಮಾದರಿಯ ಎರಡು ಹೆಲಿಕಾಪ್ಟರ್‌ಗಳು ಅತ್ಯಂತ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿ ನೀರು ಹಾಕುತ್ತಿದ್ದಾಗ, ಒಂದಕ್ಕೊಂದು ಡಿಕ್ಕಿಯಾಗಿವೆ.

ಗ್ರೀಸ್​ನಲ್ಲಿ ಕಾಡ್ಗಿಚ್ಚು ನಂದಿಸುವಾಗ ಭೀಕರ ದುರಂತ, ಆಕಾಶದಲ್ಲೇ ಡಿಕ್ಕಿಯಾದ ಹೆಲಿಕಾಪ್ಟರ್​ಗಳು, ಇಬ್ಬರು ಸಿಬ್ಬಂದಿ ಸಾವು
ಹೆಲಿಕಾಪ್ಟರ್
ನಯನಾ ರಾಜೀವ್
|

Updated on: Aug 03, 2026 | 12:00 PM

Share

ಅಥೆನ್ಸ್​, ಆಗಸ್ಟ್​ 03: ಗ್ರೀಕ್ ರಾಜಧಾನಿ ಅಥೆನ್ಸ್​​ನ ಪಶ್ಚಿಮಕ್ಕೆ ಹರಡಿರುವ ಅರಣ್ಯದಲ್ಲಿ ಹಬ್ಬಿದ್ದ ಕಾಡ್ಗಿಚ್ಚು                              ನಂದಿಸುವ ಕಾರ್ಯಾಚರಣೆಯಲ್ಲಿದ್ದ ಎರಡು ಅಗ್ನಿಶಾಮಕ ಹೆಲಿಕಾಪ್ಟರ್​(Helicopter)ಗಳು ಆಕಾಶದಲ್ಲೇ ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅಥೆನ್ಸ್‌ನ ಪಶ್ಚಿಮಕ್ಕೆ ಸುಮಾರು 60 ಕಿಲೋಮೀಟರ್ ದೂರದಲ್ಲಿರುವ ಪೋರ್ಟೊ ಜೆರ್ಮೆನೊ ಬಳಿಯ ಪ್ಸಾಥಾ ಅರಣ್ಯ ಪ್ರದೇಶದ ಮೇಲೆ ಈ ಭೀಕರ ಅಪಘಾತ ಸಂಭವಿಸಿದೆ. ‘ಬೆಲ್’ ಮಾದರಿಯ ಎರಡು ಹೆಲಿಕಾಪ್ಟರ್‌ಗಳು ಅತ್ಯಂತ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿ ನೀರು ಹಾಕುತ್ತಿದ್ದಾಗ, ಒಂದಕ್ಕೊಂದು ಡಿಕ್ಕಿಯಾಗಿವೆ. ಒಂದು ಹೆಲಿಕಾಪ್ಟರ್‌ಗೆ ಬೆಂಕಿ ಹೊತ್ತಿಕೊಂಡು ನೆಲಕ್ಕೆ ಅಪ್ಪಳಿಸಿದರೆ, ಮತ್ತೊಂದು ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡುವಲ್ಲಿ ಯಶಸ್ವಿಯಾಗಿದೆ.

ಅಪಘಾತಕ್ಕೀಡಾದ ವಿಮಾನದಲ್ಲಿದ್ದ ಗ್ರೀಕ್ ಮೂಲದ ಅಗ್ನಿಶಾಮಕ ಅಧಿಕಾರಿ ಹಾಗೂ ಡೆನ್ಮಾರ್ಕ್ ಮೂಲದ ಪೈಲಟ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎರಡನೇ ಹೆಲಿಕಾಪ್ಟರ್‌ನಲ್ಲಿದ್ದ ಬ್ರಿಟನ್ ಪೈಲಟ್ ಹಾಗೂ ಗ್ರೀಕ್ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗ್ರೀಸ್‌ನಲ್ಲಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಚಂಡಮಾರುತದ ಗಾಳಿ ಬೀಸುತ್ತಿದ್ದು, ತೀವ್ರ ಶಾಖದ ಕಾರಣದಿಂದಾಗಿ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕ್ಷಣಾರ್ಧದಲ್ಲಿ ಹರಡುತ್ತಿದೆ.

ರಸ್ತೆ ಮಾರ್ಗಗಳು ಹೊಗೆಯಿಂದ ಆವೃತವಾಗಿದ್ದರಿಂದ ಕರಾವಳಿ ಗ್ರಾಮಗಳ ನೂರಾರು ಜನರನ್ನು ನೌಕೆಗಳು ಹಾಗೂ ಬೋಟ್‌ಗಳ ಮೂಲಕ ಸ್ಥಳಾಂತರಿಸಲಾಗಿದೆ. ಘಟನೆಯ ಕುರಿತು ತೀವ್ರ ಕಂಬನಿ ಮಿಡಿದ ಗ್ರೀಸ್ ಪ್ರಧಾನಿ ಕಿರಿಯಾಕೋಸ್ ಮಿಟ್ಸೋಟಾಕಿಸ್, ಪರಿಸ್ಥಿತಿಯು ಮಾನವನ ಸಿದ್ಧತೆ ಮತ್ತು ಕಾರ್ಯಾಚರಣೆಯ ಸಾಮರ್ಥ್ಯವನ್ನೂ ಮೀರಿ ವಿಕೋಪಕ್ಕೆ ತಿರುಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಓದಿ: ಏರ್ ಇಂಡಿಯಾ ಅಪಘಾತ; ವಿಮಾನದ ಇಂಧನ ಸ್ವಿಚ್‌ನಲ್ಲಿ ಯಾವುದೇ ದೋಷ ಕಂಡುಬಂದಿಲ್ಲ ಎಂದು ಸಂಸತ್​ಗೆ ಸರ್ಕಾರ ಮಾಹಿತಿ

ಕೇವಲ ಗ್ರೀಸ್ ಮಾತ್ರವಲ್ಲದೆ ಫ್ರಾನ್ಸ್ ಹಾಗೂ ಸ್ಪೇನ್ ದೇಶಗಳಲ್ಲೂ ಬೃಹತ್ ಪ್ರಮಾಣದಲ್ಲಿ ಕಾಡ್ಗಿಚ್ಚು ಹರಡಿದ್ದು, ಲಕ್ಷಾಂತರ ಪ್ರವಾಸಿಗರು ಹಾಗೂ ಸ್ಥಳೀಯರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಗ್ರೀಸ್‌ನಲ್ಲಿ ಬೇಸಿಗೆ ಅವಧಿಯಲ್ಲಿ ಕಾಡ್ಗಿಚ್ಚು ಸಾಮಾನ್ಯವಾಗಿದ್ದು, ಐರೋಪ್ಯ ಒಕ್ಕೂಟದ (EU) ಕೌಟುಂಬಿಕ ತುರ್ತು ಒಪ್ಪಂದದಡಿ ಡೆನ್ಮಾರ್ಕ್, ಬ್ರಿಟನ್, ಫ್ರಾನ್ಸ್ ಮತ್ತು ರೊಮೇನಿಯಾದ ವೈಮಾನಿಕ ತಂಡಗಳು ಗ್ರೀಸ್‌ಗೆ ನೆರವು ನೀಡುತ್ತಿವೆ. 2018 ರ ದುರಂತದ ನೆನಪು: 2018 ರಲ್ಲಿ ಮಾತಿ ಪ್ರದೇಶದಲ್ಲಿ ಸಂಭವಿಸಿದ್ದ ಭೀಕರ ಕಾಡ್ಗಿಚ್ಚಿಗೆ 104 ಜನರು ಬಲಿಯಾಗಿದ್ದರು. ಪ್ರಸ್ತುತ ಅಥೆನ್ಸ್ ಸುತ್ತಮುತ್ತಲಿನ ಬೆಂಕಿ ಅದೇ ಪ್ರಮಾಣದ ಅನಾಹುತ ಸೃಷ್ಟಿಸುವ ಭೀತಿಯನ್ನು ಒಡ್ಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ