AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲಿಯಲ್ಲಿ ಒಂದೇ ದಿನ ಎರಡು ಕಡೆ ಉಗ್ರ ದಾಳಿ; ಯುಎನ್​ ಕಾರ್ಯಕರ್ತ ಸೇರಿ 32 ಜನರ ಭೀಕರ ಹತ್ಯೆ

ಶುಕ್ರವಾರ ಮಾಲಿಯ ಉತ್ತರ ಭಾಗದಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಮಿಷನ್​ಗೆ ಸೇರಿದ ಬೆಂಗಾವಲು ವಾಹನದ ಮೇಲೆಯೂ ಉಗ್ರರು ದಾಳಿ ನಡೆಸಿದ್ದು, ಈ ಅಟ್ಯಾಕ್​​ನಲ್ಲಿ ನಾಗರಿಕ ಕಾರ್ಯಕರ್ತರೊಬ್ಬರು ಸಾವನ್ನಪ್ಪಿದ್ದಾರೆ.

ಮಾಲಿಯಲ್ಲಿ ಒಂದೇ ದಿನ ಎರಡು ಕಡೆ ಉಗ್ರ ದಾಳಿ; ಯುಎನ್​ ಕಾರ್ಯಕರ್ತ ಸೇರಿ 32 ಜನರ ಭೀಕರ ಹತ್ಯೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 04, 2021 | 3:46 PM

Share

ಆಫ್ರಿಕಾದ ದಕ್ಷಿಣ ಭಾಗದಲ್ಲಿರುವ ಮಾಲಿ ದೇಶದಲ್ಲಿ ಭಯೋತ್ಪಾದಕ ದಾಳಿಗೆ 31 ಮಂದಿ ಮೃತಪಟ್ಟಿದ್ದಾರೆ. ಈ ಘಟನೆ ನಡೆದದ್ದು ಮಾಲಿ ದೇಶದ ಕೇಂದ್ರ ಭಾಗದಲ್ಲಿ. ಸ್ಥಳೀಯ ಮಾರುಕಟ್ಟೆಗೆ ಜನರನ್ನು ಸಾಗಿಸುತ್ತಿದ್ದ ಬಸ್​ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ 31 ಮಂದಿ ಮೃತಪಟ್ಟಿದ್ದಾರೆ. ಶುಕ್ರವಾರ ಈ ಘಟನೆ ನಡೆದಿದೆ..ಅಷ್ಟೇ ಅಲ್ಲ, ಇದೇ ದಿನ ಮಾಲಿ ದೇಶದ ಉತ್ತರ ಭಾಗದಲ್ಲಿ ವಿಶ್ವಸಂಸ್ಥೆಗೆ ಸೇರಿದ ಬೆಂಗಾವಲು ವಾಹನದ ಮೇಲೆಯೂ ಉಗ್ರರು ದಾಳಿ ಮಾಡಿದ್ದಾರೆ. ಇದರಲ್ಲಿ ಯುಎನ್​ ಕಾರ್ಯಕರ್ತನೊಬ್ಬ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.  

ಈ ಬಸ್​ ಸಾಮಾನ್ಯವಾಗಿ ವಾರದಲ್ಲಿ ಎರಡು ದಿನ ಸೊಂಘೋ ಎಂಬ ಹಳ್ಳಿಯಿಂದ ಆರು ಮೈಲುಗಳಷ್ಟು ದೂರದಲ್ಲಿರುವ ಬಂಡಿಯಾಗರಾ ಎಂಬಲ್ಲಿಗೆ ಸಂಚಾರ ಮಾಡುತ್ತದೆ. ಈ ಬಸ್​ ಮೂಲಕ ಸೋಂಘೋ ಮತ್ತು ಸುತ್ತಲಿನ ಜನರು ಮಾರುಕಟ್ಟೆಗೆ ಹೋಗುತ್ತಾರೆ. ಆದರೆ ಶುಕ್ರವಾರ ಬಸ್​ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಬಂಕಾಸ್​ ಎಂಬ ಪಟ್ಟಣದ ಮೇಯರ್ ಮೌಲೇ ಗಿಂಡೋ ತಿಳಿಸಿದ್ದಾರೆ. ಸಶಸ್ತ್ರ ಸಹಿತರಾಗಿ ಬಂದ ಜನರು ಬಸ್​​ ಮೇಲೆ ಒಂದೇ ಸಮನೆ ಗುಂಡಿನ ದಾಳಿ ನಡೆಸಿದ್ದಾರೆ, ಜನರಿಗೆ ಗುರಿಯಿಟ್ಟು ಫೈರಿಂಗ್ ಮಾಡಿದ್ದಾರೆ. ಈ ದುರ್ಘಟನೆಯಲ್ಲಿ 31 ಮಂದಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೂ ಒಂದಷ್ಟು ಮಂದಿ ಕಾಣೆಯಾಗಿದ್ದಾರೆ ಎಂದು ಗಿಂಡೋ ಹೇಳಿದ್ದಾರೆ. ಇನ್ನು ಬಸ್​ ಮೇಲೆ ನಡೆದ ಭಯೋತ್ಪಾದಕ ದಾಳಿಯ ಕ್ರೂರತೆಯನ್ನು ಬಿಂಬಿಸುವ ಚಿತ್ರಗಳೂ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

ಹಾಗೇ, ಶುಕ್ರವಾರ ಮಾಲಿಯ ಉತ್ತರ ಭಾಗದಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಮಿಷನ್​ಗೆ ಸೇರಿದ ಬೆಂಗಾವಲು ವಾಹನದ ಮೇಲೆಯೂ ಉಗ್ರರು ದಾಳಿ ನಡೆಸಿದ್ದು, ಈ ಅಟ್ಯಾಕ್​​ನಲ್ಲಿ ನಾಗರಿಕ ಕಾರ್ಯಕರ್ತರೊಬ್ಬರು ಸಾವನ್ನಪ್ಪಿದ್ದಾರೆ. ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಬೆಂಗಾವಲು ಪಡೆ ಉತ್ತರದ ನಗರವಾದ ಕಿಡಾಲ್‌ನಿಂದ ಗಾವೊಗೆ ಪ್ರಯಾಣಿಸುತ್ತಿತ್ತು. ಬೌರೆಮ್ ಪಟ್ಟಣದ ಈಶಾನ್ಯಕ್ಕೆ 62 ಮೈಲುಗಳಷ್ಟು ದೂರದಲ್ಲಿ ಗುಂಡಿನ ದಾಳಿ ಆಯಿತು ಎಂದೂ ಮಿಷನ್​ ತಿಳಿಸಿದೆ. ಅಂದಹಾಗೆ, ಮಾಲಿಯ ಈ ಭಾಗಗಳಲ್ಲಿ ಅಲ್​-ಖೈದಾ ಮತ್ತು ಐಸಿಸ್​ ಉಗ್ರಸಂಘಟನೆಗಳ ಉಗ್ರರು ಆಗಾಗ ದಾಳಿ ನಡೆಸುತ್ತಾರೆ. ಸದ್ಯಕ್ಕೆ ಯಾರೂ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಆದರೆ ಇಲ್ಲಿ ಯಾವಾಗಲೂ ಹಿಂಸಾಚಾರ, ಧಂಗೆಗಳು ನಡೆಯುತ್ತಲೇ ಇರುತ್ತವೆ.

ಇದನ್ನೂ ಓದಿ: Jio Cashback Offer: ಬೆಲೆ ಏರಿಕೆ ಬೆನ್ನಲ್ಲೇ ಆಫರ್​ಗಳ ಸುರಿಮಳೆ: ಏರ್ಟೆಲ್ ಬಳಿಕ ಜಿಯೋದಿಂದ ಬಂಪರ್ ಆಫರ್ ಘೋಷಣೆ

Follow Us
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ