AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗಾಂಡ ಶಾಲೆ ಮೇಲೆ ಬಂಡುಕೋರರ ದಾಳಿ; 37 ವಿದ್ಯಾರ್ಥಿಗಳನ್ನು ಸುಟ್ಟು ಕೊಂದು ಕ್ರೌರ್ಯ

 ಡಿಆರ್ ಕಾಂಗೋದಲ್ಲಿ ಕಲಹ ಪೀಡಿತ ಪ್ರದೇಶದಲ್ಲಿ ಸಕ್ರಿಯವಾಗಿರುವ ಉಗ್ರ ಗುಂಪುಗಳಲ್ಲಿ ಒಂದಾದ ADF ಶಾಲೆ ಮೇಲೆ ಆಕ್ರಮಣ ವಿದ್ಯಾರ್ಥಿ ನಿಲಯಗಳನ್ನು ಸುಟ್ಟು ಹಾಕಿದ್ದು ಮಾತ್ರವಲ್ಲದೆ ವಿದ್ಯಾರ್ಥಿಗಳ ಮೇಲೆ ಕತ್ತಿಯಿಂದ ದಾಳಿ ಮಾಡಲಾಗಿದೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ಉಗಾಂಡ ಶಾಲೆ ಮೇಲೆ ಬಂಡುಕೋರರ ದಾಳಿ; 37 ವಿದ್ಯಾರ್ಥಿಗಳನ್ನು ಸುಟ್ಟು ಕೊಂದು ಕ್ರೌರ್ಯ
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on:Jun 17, 2023 | 5:55 PM

ಕಂಪಾಲಾ: ಇಸ್ಲಾಮಿಕ್ ಸ್ಟೇಟ್ ಗುಂಪಿನೊಂದಿಗೆ (Islamic State group) ನಂಟು ಹೊಂದಿರುವ ಉಗ್ರರು ಪಶ್ಚಿಮ ಉಗಾಂಡಾದಲ್ಲಿ (Uganda) 37 ವಿದ್ಯಾರ್ಥಿಗಳನ್ನು ಸುಟ್ಟುಕೊಂದು ಕ್ರೌರ್ಯ ಮೆರೆದಿದ್ದಾರೆ. ಒಂದು ದಶಕದಲ್ಲಿ ದೇಶದಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ ಎಂದು ಸೇನೆ ಮತ್ತು ಪೊಲೀಸ್ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ಬಳಿಯ ಕಸೆಸೆ ಜಿಲ್ಲೆಯ ಎಂಪಾಂಡ್ವೆಯಲ್ಲಿರುವ ಮಾಧ್ಯಮಿಕ ಶಾಲೆಯ ಮೇಲೆ ಶುಕ್ರವಾರ ತಡರಾತ್ರಿ ನಡೆದ ಗಡಿಯಾಚೆಗಿನ ದಾಳಿಯ ನಂತರ ಮಿತ್ರರಾಷ್ಟ್ರಗಳ ಪ್ರಜಾಸತ್ತಾತ್ಮಕ ಪಡೆಗಳು(ಎಡಿಎಫ್) ಬಂಡುಕೋರರ ಪತ್ತೆ ಕಾರ್ಯಾಚರಣೆಯಲ್ಲಿ ತೊಡಗಿವೆ.

ಡಿಆರ್ ಕಾಂಗೋದಲ್ಲಿ ಕಲಹ ಪೀಡಿತ ಪ್ರದೇಶದಲ್ಲಿ ಸಕ್ರಿಯವಾಗಿರುವ ಉಗ್ರ ಗುಂಪುಗಳಲ್ಲಿ ಒಂದಾದ ADF ಶಾಲೆ ಮೇಲೆ ಆಕ್ರಮಣ ನಡೆಸಿ ವಿದ್ಯಾರ್ಥಿ ನಿಲಯಗಳನ್ನು ಸುಟ್ಟು ಹಾಕಿದ್ದು ಮಾತ್ರವಲ್ಲದೆ ವಿದ್ಯಾರ್ಥಿಗಳ ಮೇಲೆ ಕತ್ತಿಯಿಂದ ದಾಳಿ ಮಾಡಲಾಗಿದೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ಇಲ್ಲಿಯವರೆಗೆ 37 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಅವುಗಳನ್ನು ಬ್ವೆರಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ ಎಂದು ಉಗಾಂಡ ಪೀಪಲ್ಸ್ ಡಿಫೆನ್ಸ್ ಫೋರ್ಸ್ (ಯುಪಿಡಿಎಫ್) ವಕ್ತಾರ ಫೆಲಿಕ್ಸ್ ಕುಲೈಗ್ಯೆ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ದಾಳಿಯಲ್ಲಿ ಎಂಟು ಜನರಿಗೆ ಗಾಯಗಳಾಗಿವೆ. ಇತರ 6 ಮಂದಿಯನ್ನು ಅಪಹರಿಸಿದ ದಾಳಿಕೋರರು DR ಕಾಂಗೋ ಗಡಿಯನ್ನು ವ್ಯಾಪಿಸಿರುವ ವಿರುಂಗಾ ರಾಷ್ಟ್ರೀಯ ಉದ್ಯಾನವನದ ಕಡೆಗೆ ಕರೆದೊಯ್ದರು ಎಂದು ಅವರು ಹೇಳಿದರು.

ಅಪಹರಣಕ್ಕೊಳಗಾದ ವಿದ್ಯಾರ್ಥಿಗಳನ್ನು ರಕ್ಷಿಸುವುದಕ್ಕಾಗಿ ಯುಪಿಡಿಎಫ್ ದುಷ್ಕರ್ಮಿಗಳನ್ನು ಹಿಂಬಾಲಿಸಲು ಪ್ರಾರಂಭಿಸಿದೆ, ಸಾವಿಗೀಡಾದವರಲ್ಲಿ 25 ಮಂದಿ ಶಾಲೆಯ ವಿದ್ಯಾರ್ಥಿಗಳು ಎಂದು ದೃಢೀಕರಿಸಲಾಗಿದೆ ಎಂದು ಕಸೆಸೆಯ ರೆಸಿಡೆಂಟ್ ಕಮಿಷನರ್ ಜೋ ವಾಲುಸಿಂಬಿ ಹೇಳಿರುವುದಾಗಿ ಎಎಫ್​​ಪಿ ತಿಳಿಸಿದೆ.

ಇದನ್ನೂ ಓದಿ: Serbia School Shooting: ಸರ್ಬಿಯಾ ಶಾಲೆಯಲ್ಲಿ ಗುಂಡಿನ ದಾಳಿ ನಡೆಸಿದ ಬಾಲಕ; 8 ವಿದ್ಯಾರ್ಥಿಗಳು, ಭದ್ರತಾ ಸಿಬ್ಬಂದಿ ಸಾವು

2010ರಲ್ಲಿ ಕಂಪಾಲಾದಲ್ಲಿ ನಡೆದ ಅವಳಿ ಬಾಂಬ್‌ ದಾಳಿಯಲ್ಲಿ ಸೊಮಾಲಿಯಾ ಮೂಲದ ಅಲ್‌-ಶಬಾಬ್‌ ಗ್ರೂಪ್‌ ನಡೆಸಿದ ದಾಳಿಯಲ್ಲಿ 76 ಮಂದಿ ಸಾವನ್ನಪ್ಪಿದ ನಂತರ ಉಗಾಂಡಾದಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:48 pm, Sat, 17 June 23

ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ