AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗಾಂಡ ಶಾಲೆ ಮೇಲೆ ಬಂಡುಕೋರರ ದಾಳಿ; 37 ವಿದ್ಯಾರ್ಥಿಗಳನ್ನು ಸುಟ್ಟು ಕೊಂದು ಕ್ರೌರ್ಯ

 ಡಿಆರ್ ಕಾಂಗೋದಲ್ಲಿ ಕಲಹ ಪೀಡಿತ ಪ್ರದೇಶದಲ್ಲಿ ಸಕ್ರಿಯವಾಗಿರುವ ಉಗ್ರ ಗುಂಪುಗಳಲ್ಲಿ ಒಂದಾದ ADF ಶಾಲೆ ಮೇಲೆ ಆಕ್ರಮಣ ವಿದ್ಯಾರ್ಥಿ ನಿಲಯಗಳನ್ನು ಸುಟ್ಟು ಹಾಕಿದ್ದು ಮಾತ್ರವಲ್ಲದೆ ವಿದ್ಯಾರ್ಥಿಗಳ ಮೇಲೆ ಕತ್ತಿಯಿಂದ ದಾಳಿ ಮಾಡಲಾಗಿದೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ಉಗಾಂಡ ಶಾಲೆ ಮೇಲೆ ಬಂಡುಕೋರರ ದಾಳಿ; 37 ವಿದ್ಯಾರ್ಥಿಗಳನ್ನು ಸುಟ್ಟು ಕೊಂದು ಕ್ರೌರ್ಯ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on:Jun 17, 2023 | 5:55 PM

Share

ಕಂಪಾಲಾ: ಇಸ್ಲಾಮಿಕ್ ಸ್ಟೇಟ್ ಗುಂಪಿನೊಂದಿಗೆ (Islamic State group) ನಂಟು ಹೊಂದಿರುವ ಉಗ್ರರು ಪಶ್ಚಿಮ ಉಗಾಂಡಾದಲ್ಲಿ (Uganda) 37 ವಿದ್ಯಾರ್ಥಿಗಳನ್ನು ಸುಟ್ಟುಕೊಂದು ಕ್ರೌರ್ಯ ಮೆರೆದಿದ್ದಾರೆ. ಒಂದು ದಶಕದಲ್ಲಿ ದೇಶದಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ ಎಂದು ಸೇನೆ ಮತ್ತು ಪೊಲೀಸ್ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ಬಳಿಯ ಕಸೆಸೆ ಜಿಲ್ಲೆಯ ಎಂಪಾಂಡ್ವೆಯಲ್ಲಿರುವ ಮಾಧ್ಯಮಿಕ ಶಾಲೆಯ ಮೇಲೆ ಶುಕ್ರವಾರ ತಡರಾತ್ರಿ ನಡೆದ ಗಡಿಯಾಚೆಗಿನ ದಾಳಿಯ ನಂತರ ಮಿತ್ರರಾಷ್ಟ್ರಗಳ ಪ್ರಜಾಸತ್ತಾತ್ಮಕ ಪಡೆಗಳು(ಎಡಿಎಫ್) ಬಂಡುಕೋರರ ಪತ್ತೆ ಕಾರ್ಯಾಚರಣೆಯಲ್ಲಿ ತೊಡಗಿವೆ.

ಡಿಆರ್ ಕಾಂಗೋದಲ್ಲಿ ಕಲಹ ಪೀಡಿತ ಪ್ರದೇಶದಲ್ಲಿ ಸಕ್ರಿಯವಾಗಿರುವ ಉಗ್ರ ಗುಂಪುಗಳಲ್ಲಿ ಒಂದಾದ ADF ಶಾಲೆ ಮೇಲೆ ಆಕ್ರಮಣ ನಡೆಸಿ ವಿದ್ಯಾರ್ಥಿ ನಿಲಯಗಳನ್ನು ಸುಟ್ಟು ಹಾಕಿದ್ದು ಮಾತ್ರವಲ್ಲದೆ ವಿದ್ಯಾರ್ಥಿಗಳ ಮೇಲೆ ಕತ್ತಿಯಿಂದ ದಾಳಿ ಮಾಡಲಾಗಿದೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ಇಲ್ಲಿಯವರೆಗೆ 37 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಅವುಗಳನ್ನು ಬ್ವೆರಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ ಎಂದು ಉಗಾಂಡ ಪೀಪಲ್ಸ್ ಡಿಫೆನ್ಸ್ ಫೋರ್ಸ್ (ಯುಪಿಡಿಎಫ್) ವಕ್ತಾರ ಫೆಲಿಕ್ಸ್ ಕುಲೈಗ್ಯೆ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ದಾಳಿಯಲ್ಲಿ ಎಂಟು ಜನರಿಗೆ ಗಾಯಗಳಾಗಿವೆ. ಇತರ 6 ಮಂದಿಯನ್ನು ಅಪಹರಿಸಿದ ದಾಳಿಕೋರರು DR ಕಾಂಗೋ ಗಡಿಯನ್ನು ವ್ಯಾಪಿಸಿರುವ ವಿರುಂಗಾ ರಾಷ್ಟ್ರೀಯ ಉದ್ಯಾನವನದ ಕಡೆಗೆ ಕರೆದೊಯ್ದರು ಎಂದು ಅವರು ಹೇಳಿದರು.

ಅಪಹರಣಕ್ಕೊಳಗಾದ ವಿದ್ಯಾರ್ಥಿಗಳನ್ನು ರಕ್ಷಿಸುವುದಕ್ಕಾಗಿ ಯುಪಿಡಿಎಫ್ ದುಷ್ಕರ್ಮಿಗಳನ್ನು ಹಿಂಬಾಲಿಸಲು ಪ್ರಾರಂಭಿಸಿದೆ, ಸಾವಿಗೀಡಾದವರಲ್ಲಿ 25 ಮಂದಿ ಶಾಲೆಯ ವಿದ್ಯಾರ್ಥಿಗಳು ಎಂದು ದೃಢೀಕರಿಸಲಾಗಿದೆ ಎಂದು ಕಸೆಸೆಯ ರೆಸಿಡೆಂಟ್ ಕಮಿಷನರ್ ಜೋ ವಾಲುಸಿಂಬಿ ಹೇಳಿರುವುದಾಗಿ ಎಎಫ್​​ಪಿ ತಿಳಿಸಿದೆ.

ಇದನ್ನೂ ಓದಿ: Serbia School Shooting: ಸರ್ಬಿಯಾ ಶಾಲೆಯಲ್ಲಿ ಗುಂಡಿನ ದಾಳಿ ನಡೆಸಿದ ಬಾಲಕ; 8 ವಿದ್ಯಾರ್ಥಿಗಳು, ಭದ್ರತಾ ಸಿಬ್ಬಂದಿ ಸಾವು

2010ರಲ್ಲಿ ಕಂಪಾಲಾದಲ್ಲಿ ನಡೆದ ಅವಳಿ ಬಾಂಬ್‌ ದಾಳಿಯಲ್ಲಿ ಸೊಮಾಲಿಯಾ ಮೂಲದ ಅಲ್‌-ಶಬಾಬ್‌ ಗ್ರೂಪ್‌ ನಡೆಸಿದ ದಾಳಿಯಲ್ಲಿ 76 ಮಂದಿ ಸಾವನ್ನಪ್ಪಿದ ನಂತರ ಉಗಾಂಡಾದಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:48 pm, Sat, 17 June 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ