AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗಾಂಡ ಶಾಲೆ ಮೇಲೆ ಬಂಡುಕೋರರ ದಾಳಿ; 37 ವಿದ್ಯಾರ್ಥಿಗಳನ್ನು ಸುಟ್ಟು ಕೊಂದು ಕ್ರೌರ್ಯ

 ಡಿಆರ್ ಕಾಂಗೋದಲ್ಲಿ ಕಲಹ ಪೀಡಿತ ಪ್ರದೇಶದಲ್ಲಿ ಸಕ್ರಿಯವಾಗಿರುವ ಉಗ್ರ ಗುಂಪುಗಳಲ್ಲಿ ಒಂದಾದ ADF ಶಾಲೆ ಮೇಲೆ ಆಕ್ರಮಣ ವಿದ್ಯಾರ್ಥಿ ನಿಲಯಗಳನ್ನು ಸುಟ್ಟು ಹಾಕಿದ್ದು ಮಾತ್ರವಲ್ಲದೆ ವಿದ್ಯಾರ್ಥಿಗಳ ಮೇಲೆ ಕತ್ತಿಯಿಂದ ದಾಳಿ ಮಾಡಲಾಗಿದೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ಉಗಾಂಡ ಶಾಲೆ ಮೇಲೆ ಬಂಡುಕೋರರ ದಾಳಿ; 37 ವಿದ್ಯಾರ್ಥಿಗಳನ್ನು ಸುಟ್ಟು ಕೊಂದು ಕ್ರೌರ್ಯ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on:Jun 17, 2023 | 5:55 PM

Share

ಕಂಪಾಲಾ: ಇಸ್ಲಾಮಿಕ್ ಸ್ಟೇಟ್ ಗುಂಪಿನೊಂದಿಗೆ (Islamic State group) ನಂಟು ಹೊಂದಿರುವ ಉಗ್ರರು ಪಶ್ಚಿಮ ಉಗಾಂಡಾದಲ್ಲಿ (Uganda) 37 ವಿದ್ಯಾರ್ಥಿಗಳನ್ನು ಸುಟ್ಟುಕೊಂದು ಕ್ರೌರ್ಯ ಮೆರೆದಿದ್ದಾರೆ. ಒಂದು ದಶಕದಲ್ಲಿ ದೇಶದಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ ಎಂದು ಸೇನೆ ಮತ್ತು ಪೊಲೀಸ್ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ಬಳಿಯ ಕಸೆಸೆ ಜಿಲ್ಲೆಯ ಎಂಪಾಂಡ್ವೆಯಲ್ಲಿರುವ ಮಾಧ್ಯಮಿಕ ಶಾಲೆಯ ಮೇಲೆ ಶುಕ್ರವಾರ ತಡರಾತ್ರಿ ನಡೆದ ಗಡಿಯಾಚೆಗಿನ ದಾಳಿಯ ನಂತರ ಮಿತ್ರರಾಷ್ಟ್ರಗಳ ಪ್ರಜಾಸತ್ತಾತ್ಮಕ ಪಡೆಗಳು(ಎಡಿಎಫ್) ಬಂಡುಕೋರರ ಪತ್ತೆ ಕಾರ್ಯಾಚರಣೆಯಲ್ಲಿ ತೊಡಗಿವೆ.

ಡಿಆರ್ ಕಾಂಗೋದಲ್ಲಿ ಕಲಹ ಪೀಡಿತ ಪ್ರದೇಶದಲ್ಲಿ ಸಕ್ರಿಯವಾಗಿರುವ ಉಗ್ರ ಗುಂಪುಗಳಲ್ಲಿ ಒಂದಾದ ADF ಶಾಲೆ ಮೇಲೆ ಆಕ್ರಮಣ ನಡೆಸಿ ವಿದ್ಯಾರ್ಥಿ ನಿಲಯಗಳನ್ನು ಸುಟ್ಟು ಹಾಕಿದ್ದು ಮಾತ್ರವಲ್ಲದೆ ವಿದ್ಯಾರ್ಥಿಗಳ ಮೇಲೆ ಕತ್ತಿಯಿಂದ ದಾಳಿ ಮಾಡಲಾಗಿದೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ಇಲ್ಲಿಯವರೆಗೆ 37 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಅವುಗಳನ್ನು ಬ್ವೆರಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ ಎಂದು ಉಗಾಂಡ ಪೀಪಲ್ಸ್ ಡಿಫೆನ್ಸ್ ಫೋರ್ಸ್ (ಯುಪಿಡಿಎಫ್) ವಕ್ತಾರ ಫೆಲಿಕ್ಸ್ ಕುಲೈಗ್ಯೆ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ದಾಳಿಯಲ್ಲಿ ಎಂಟು ಜನರಿಗೆ ಗಾಯಗಳಾಗಿವೆ. ಇತರ 6 ಮಂದಿಯನ್ನು ಅಪಹರಿಸಿದ ದಾಳಿಕೋರರು DR ಕಾಂಗೋ ಗಡಿಯನ್ನು ವ್ಯಾಪಿಸಿರುವ ವಿರುಂಗಾ ರಾಷ್ಟ್ರೀಯ ಉದ್ಯಾನವನದ ಕಡೆಗೆ ಕರೆದೊಯ್ದರು ಎಂದು ಅವರು ಹೇಳಿದರು.

ಅಪಹರಣಕ್ಕೊಳಗಾದ ವಿದ್ಯಾರ್ಥಿಗಳನ್ನು ರಕ್ಷಿಸುವುದಕ್ಕಾಗಿ ಯುಪಿಡಿಎಫ್ ದುಷ್ಕರ್ಮಿಗಳನ್ನು ಹಿಂಬಾಲಿಸಲು ಪ್ರಾರಂಭಿಸಿದೆ, ಸಾವಿಗೀಡಾದವರಲ್ಲಿ 25 ಮಂದಿ ಶಾಲೆಯ ವಿದ್ಯಾರ್ಥಿಗಳು ಎಂದು ದೃಢೀಕರಿಸಲಾಗಿದೆ ಎಂದು ಕಸೆಸೆಯ ರೆಸಿಡೆಂಟ್ ಕಮಿಷನರ್ ಜೋ ವಾಲುಸಿಂಬಿ ಹೇಳಿರುವುದಾಗಿ ಎಎಫ್​​ಪಿ ತಿಳಿಸಿದೆ.

ಇದನ್ನೂ ಓದಿ: Serbia School Shooting: ಸರ್ಬಿಯಾ ಶಾಲೆಯಲ್ಲಿ ಗುಂಡಿನ ದಾಳಿ ನಡೆಸಿದ ಬಾಲಕ; 8 ವಿದ್ಯಾರ್ಥಿಗಳು, ಭದ್ರತಾ ಸಿಬ್ಬಂದಿ ಸಾವು

2010ರಲ್ಲಿ ಕಂಪಾಲಾದಲ್ಲಿ ನಡೆದ ಅವಳಿ ಬಾಂಬ್‌ ದಾಳಿಯಲ್ಲಿ ಸೊಮಾಲಿಯಾ ಮೂಲದ ಅಲ್‌-ಶಬಾಬ್‌ ಗ್ರೂಪ್‌ ನಡೆಸಿದ ದಾಳಿಯಲ್ಲಿ 76 ಮಂದಿ ಸಾವನ್ನಪ್ಪಿದ ನಂತರ ಉಗಾಂಡಾದಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:48 pm, Sat, 17 June 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್