AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾದ ISWA ಅನಿವಾಸಿ ಭಾರತೀಯರನ್ನು ಭೇಟಿಯಾದ ಸಚಿವ ಪ್ರಲ್ಹಾದ್ ಜೋಶಿ ನಿಯೋಗ

ಇಂಡಿಯನ್ ಸೊಸೈಟಿ ಆಫ್ ವೆಸ್ಟರ್ನ್ ಆಸ್ಟ್ರೇಲಿಯಾ (ISWA) ಆಯೋಜಿಸಿದ್ದ ಸಭೆಯಲ್ಲಿ ಇದೆ ಮೊದಲ ಬಾರಿಗೆ ಭಾರತ ಸರ್ಕಾರದ ಸಚಿವರಾದ ಪ್ರಲ್ಹಾದ್ ಜೋಶಿಯವರ ನೇತೃತ್ವದಲ್ಲಿ ಸಚಿವರ ನಿಯೋಗ ಅನಿವಾಸಿ ಭಾರತೀಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ.

ಆಸ್ಟ್ರೇಲಿಯಾದ ISWA ಅನಿವಾಸಿ ಭಾರತೀಯರನ್ನು ಭೇಟಿಯಾದ ಸಚಿವ ಪ್ರಲ್ಹಾದ್ ಜೋಶಿ ನಿಯೋಗ
ಆಸ್ಟ್ರೇಲಿಯಾದ ಅನಿವಾಸಿ ಭಾರತೀಯರನ್ನು ಭೇಟಿ ಮಾಡಿದ ಸಚಿವರ ನಿಯೋಗ
TV9 Web
| Edited By: |

Updated on:Jul 03, 2022 | 9:24 PM

Share

ಆಸ್ಟ್ರೇಲಿಯಾ: ಇಂಡಿಯನ್ ಸೊಸೈಟಿ ಆಫ್ ವೆಸ್ಟರ್ನ್ ಆಸ್ಟ್ರೇಲಿಯಾ (ISWA) ಆಯೋಜಿಸಿದ್ದ ಸಭೆಯಲ್ಲಿ ಇದೆ ಮೊದಲ ಬಾರಿಗೆ ಭಾರತ ಸರ್ಕಾರದ (Indian Government) ಸಚಿವರಾದ ಪ್ರಲ್ಹಾದ್ ಜೋಶಿಯವರ (Pralhad Joshi) ನೇತೃತ್ವದ ಸಚಿವರ ನಿಯೋಗ ಅನಿವಾಸಿ ಭಾರತೀಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ. ISWA ಕಮ್ಯೂನಿಟಿ ಸೆಂಟರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಸ್ಟ್ರೇಲಿಯಾದ (Australia) ಪ್ರಮುಖ ಜನಪ್ರತಿನಿಧಿಗಳೊಂದಿಗೆ ಅನಿವಾಸಿ ಭಾರತೀಯರು ಹಾಜರಿದ್ದರು.

ಆಸ್ಟ್ರೇಲಿಯಾದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ಕೇಂದ್ರ ಸಚಿವರ ನೇತೃತ್ವದಲ್ಲಿ ನಿಯೋಗವೊಂದು ಭೇಟಿ ಮಾಡಿದ್ದು, ಅನಿವಾಸಿ ಭಾರತೀಯರೊಂದಿಗಿನ ಸಭೆ ಅತ್ಯಂತ ಫಲಪ್ರದ ಮತ್ತು ಸಂಬಂಧ ವೃದ್ಧಿ ದೃಷ್ಟಿಯಲ್ಲಿ ಚೇತೋಹಾರಿಯಾಗಿತ್ತು ಎಂದು ಸಚಿವ ಜೋಶಿಯವರು ಟ್ವೀಟ್ ಮಾಡಿದ್ದಾರೆ.

ನಿಯೋಗ ಭೇಟಿ ವೇಳೆ ಪ್ರಸ್ತುತಪಡಿಸಿದ ಅದ್ಭುತ ಸಾಂಸ್ಕೃತಿಕ ಕಾರ್ಯಕ್ರಮಗಳು, ಸ್ವಾದಿಷ್ಟ ಆಹಾರ ಹಾಗೂ ಆತ್ಮೀಯ ಸ್ವಾಗತ ತುಂಬಾ ಸಂತೋಷ ನೀಡಿದೆ. ಭವಿಷ್ಯದಲ್ಲಿ ಇಂತಹ ಇನ್ನಷ್ಟು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಾನು ಕಾತುರದಿಂದ ಕಾಯುತ್ತಿದ್ದೇನೆ ಎಂದು ಜೋಶಿ ಟ್ವೀಟ್ ನಲ್ಲಿ ಹೇಳಿದ್ದಾರೆ.

ವೆಸ್ಟರ್ನ್ ಆಸ್ಟ್ರೇಲಿಯಾದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಅನಿವಾಸಿ ಭಾರತೀಯರಿದ್ದು ISWA ಒಂದು ಪ್ರಬಲ ಸಂಘಟನೆಯಾಗಿ ಬೆಳೆದಿದೆ. ಈ ನಿಟ್ಟಿನಲ್ಲಿ ಇಲ್ಲಿನ ಭೇಟಿ ನಮ್ಮ ಸಹೋದರ ಸಹೋದರಿಯರನ್ನು ನಮ್ಮದೇ ಮನೆಯಲ್ಲಿ ಭೇಟಿ ಮಾಡಿ, ನಮ್ಮದೇ ಮನೆಗೆ ಬಂದ ರೀತಿ ಭಾಸವಾಗುತ್ತಿದೆ ಎಂದು ಜೋಶಿ ಅವರು ಹೇಳಿದ್ದಾರೆ.

ISWA ಸಭೆಯಲ್ಲಿ ಪಶ್ಚಿಮ ಆಸ್ಟ್ರೇಲಿಯಾದ ಉಪ ಪ್ರಧಾನಿ ರೋಜರ್ ಕುಕ್, ಶಾಸಕರಾದ ಯಾಜ್ ಮುಬಾರಕೈ, ಡಾ. ಜಗದೀಶ್ ಕೃಷ್ಣನ್ ಮತ್ತು ಸ್ಯಾಮ್ ಲಿಮ್ ಉಪಸ್ಥಿತರಿದ್ದರು.

Published On - 9:19 pm, Sun, 3 July 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?