AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾದ ISWA ಅನಿವಾಸಿ ಭಾರತೀಯರನ್ನು ಭೇಟಿಯಾದ ಸಚಿವ ಪ್ರಲ್ಹಾದ್ ಜೋಶಿ ನಿಯೋಗ

ಇಂಡಿಯನ್ ಸೊಸೈಟಿ ಆಫ್ ವೆಸ್ಟರ್ನ್ ಆಸ್ಟ್ರೇಲಿಯಾ (ISWA) ಆಯೋಜಿಸಿದ್ದ ಸಭೆಯಲ್ಲಿ ಇದೆ ಮೊದಲ ಬಾರಿಗೆ ಭಾರತ ಸರ್ಕಾರದ ಸಚಿವರಾದ ಪ್ರಲ್ಹಾದ್ ಜೋಶಿಯವರ ನೇತೃತ್ವದಲ್ಲಿ ಸಚಿವರ ನಿಯೋಗ ಅನಿವಾಸಿ ಭಾರತೀಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ.

ಆಸ್ಟ್ರೇಲಿಯಾದ ISWA ಅನಿವಾಸಿ ಭಾರತೀಯರನ್ನು ಭೇಟಿಯಾದ ಸಚಿವ ಪ್ರಲ್ಹಾದ್ ಜೋಶಿ ನಿಯೋಗ
ಆಸ್ಟ್ರೇಲಿಯಾದ ಅನಿವಾಸಿ ಭಾರತೀಯರನ್ನು ಭೇಟಿ ಮಾಡಿದ ಸಚಿವರ ನಿಯೋಗ
TV9 Web
| Updated By: ವಿವೇಕ ಬಿರಾದಾರ|

Updated on:Jul 03, 2022 | 9:24 PM

Share

ಆಸ್ಟ್ರೇಲಿಯಾ: ಇಂಡಿಯನ್ ಸೊಸೈಟಿ ಆಫ್ ವೆಸ್ಟರ್ನ್ ಆಸ್ಟ್ರೇಲಿಯಾ (ISWA) ಆಯೋಜಿಸಿದ್ದ ಸಭೆಯಲ್ಲಿ ಇದೆ ಮೊದಲ ಬಾರಿಗೆ ಭಾರತ ಸರ್ಕಾರದ (Indian Government) ಸಚಿವರಾದ ಪ್ರಲ್ಹಾದ್ ಜೋಶಿಯವರ (Pralhad Joshi) ನೇತೃತ್ವದ ಸಚಿವರ ನಿಯೋಗ ಅನಿವಾಸಿ ಭಾರತೀಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ. ISWA ಕಮ್ಯೂನಿಟಿ ಸೆಂಟರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಸ್ಟ್ರೇಲಿಯಾದ (Australia) ಪ್ರಮುಖ ಜನಪ್ರತಿನಿಧಿಗಳೊಂದಿಗೆ ಅನಿವಾಸಿ ಭಾರತೀಯರು ಹಾಜರಿದ್ದರು.

ಆಸ್ಟ್ರೇಲಿಯಾದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ಕೇಂದ್ರ ಸಚಿವರ ನೇತೃತ್ವದಲ್ಲಿ ನಿಯೋಗವೊಂದು ಭೇಟಿ ಮಾಡಿದ್ದು, ಅನಿವಾಸಿ ಭಾರತೀಯರೊಂದಿಗಿನ ಸಭೆ ಅತ್ಯಂತ ಫಲಪ್ರದ ಮತ್ತು ಸಂಬಂಧ ವೃದ್ಧಿ ದೃಷ್ಟಿಯಲ್ಲಿ ಚೇತೋಹಾರಿಯಾಗಿತ್ತು ಎಂದು ಸಚಿವ ಜೋಶಿಯವರು ಟ್ವೀಟ್ ಮಾಡಿದ್ದಾರೆ.

ನಿಯೋಗ ಭೇಟಿ ವೇಳೆ ಪ್ರಸ್ತುತಪಡಿಸಿದ ಅದ್ಭುತ ಸಾಂಸ್ಕೃತಿಕ ಕಾರ್ಯಕ್ರಮಗಳು, ಸ್ವಾದಿಷ್ಟ ಆಹಾರ ಹಾಗೂ ಆತ್ಮೀಯ ಸ್ವಾಗತ ತುಂಬಾ ಸಂತೋಷ ನೀಡಿದೆ. ಭವಿಷ್ಯದಲ್ಲಿ ಇಂತಹ ಇನ್ನಷ್ಟು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಾನು ಕಾತುರದಿಂದ ಕಾಯುತ್ತಿದ್ದೇನೆ ಎಂದು ಜೋಶಿ ಟ್ವೀಟ್ ನಲ್ಲಿ ಹೇಳಿದ್ದಾರೆ.

ವೆಸ್ಟರ್ನ್ ಆಸ್ಟ್ರೇಲಿಯಾದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಅನಿವಾಸಿ ಭಾರತೀಯರಿದ್ದು ISWA ಒಂದು ಪ್ರಬಲ ಸಂಘಟನೆಯಾಗಿ ಬೆಳೆದಿದೆ. ಈ ನಿಟ್ಟಿನಲ್ಲಿ ಇಲ್ಲಿನ ಭೇಟಿ ನಮ್ಮ ಸಹೋದರ ಸಹೋದರಿಯರನ್ನು ನಮ್ಮದೇ ಮನೆಯಲ್ಲಿ ಭೇಟಿ ಮಾಡಿ, ನಮ್ಮದೇ ಮನೆಗೆ ಬಂದ ರೀತಿ ಭಾಸವಾಗುತ್ತಿದೆ ಎಂದು ಜೋಶಿ ಅವರು ಹೇಳಿದ್ದಾರೆ.

ISWA ಸಭೆಯಲ್ಲಿ ಪಶ್ಚಿಮ ಆಸ್ಟ್ರೇಲಿಯಾದ ಉಪ ಪ್ರಧಾನಿ ರೋಜರ್ ಕುಕ್, ಶಾಸಕರಾದ ಯಾಜ್ ಮುಬಾರಕೈ, ಡಾ. ಜಗದೀಶ್ ಕೃಷ್ಣನ್ ಮತ್ತು ಸ್ಯಾಮ್ ಲಿಮ್ ಉಪಸ್ಥಿತರಿದ್ದರು.

Published On - 9:19 pm, Sun, 3 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ