AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾರ್ಟ್​​ಮೆಂಟ್​​ನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಮಿಸ್​ ಯುಎಸ್​ಎ ವಿನ್ನರ್​; ಸಾವಿಗೂ ಮೊದಲು ಇನ್​ಸ್ಟಾ ಪೋಸ್ಟ್​ !

ಚೆಸ್ಲಿ ಸಾವಿನ ಬಗ್ಗೆ ಅವರ ಕುಟುಂಬ ದೃಢಪಡಿಸಿದೆ. ನಮ್ಮ ಪ್ರೀತಿಯ ಚೆಸ್ಲಿ ಕ್ರಿಸ್ಟ್​ ನಮ್ಮ ಪಾಲಿಗೆ ಬಹುದೊಡ್ಡ ಬೆಳಕಾಗಿದ್ದಳು. ಎಲ್ಲರನ್ನೂ ಕಾಳಜಿ ಮಾಡುತ್ತಿದ್ದಳು, ಎಲ್ಲರನ್ನೂ ಪ್ರೀತಿಸುತ್ತಿದ್ದಳು. ಅವಳನ್ನು ಕಳೆದುಕೊಂಡಿದ್ದು ತುಂಬ ನೋವು ತಂದಿದೆ ಎಂದಿದ್ದಾರೆ.

ಅಪಾರ್ಟ್​​ಮೆಂಟ್​​ನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಮಿಸ್​ ಯುಎಸ್​ಎ ವಿನ್ನರ್​; ಸಾವಿಗೂ ಮೊದಲು ಇನ್​ಸ್ಟಾ ಪೋಸ್ಟ್​ !
ಮೃತ ಯುವತಿ
TV9 Web
| Edited By: |

Updated on: Jan 31, 2022 | 2:30 PM

Share

ಮಾಜಿ ಮಿಸ್​ ಯುಎಸ್​ಎ ಬಿರುದು ಪಡೆದಿದ್ದ ಚೆಸ್ಲಿ ಕ್ರಿಸ್ಟ್ (30)ಚೆ ತಮ್ಮ ಮನೆ ಇರುವ ಎತ್ತರದ ಅಪಾರ್ಟ್​ಮೆಂಟ್​​ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2019ರ ಮಿಸ್​ ಯುಎಸ್​ಎ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದ ಇವರು, ಮ್ಯಾನ್​ಹಟ್ಟನ್​​ನ 60 ಅಂತಸ್ತಿನ ಅಪಾರ್ಟ್​ಮೆಂಟ್​​ನಲ್ಲಿನ 9ನೇ ಫ್ಲೋರ್​​ನಲ್ಲಿ ವಾಸವಾಗಿದ್ದರು. ಭಾನುವಾರ ಮುಂಜಾನೆ ಅಪಾರ್ಟ್​ಮೆಂಟ್​​​ನ ಎದುರಿನ ರಸ್ತೆಯಲ್ಲಿ ಅವರ ಶವ ಪತ್ತೆಯಾಗಿದೆ.  ಭಾನುವಾರ ಮುಂಜಾನೆ 7ಗಂಟೆ ಹೊತ್ತಿಗೆ ಚೆಸ್ಲಿ ಕ್ರಿಸ್ಟ್​ 29ನೇ ಫ್ಲೋರ್​​ನಲ್ಲಿ ಕಾಣಿಸಿಕೊಂಡಿದ್ದರು ಎಂದು ಹೇಳಲಾಗಿದೆ.

ಚೆಸ್ಲಿ ಸಾವಿನ ಬಗ್ಗೆ ಅವರ ಕುಟುಂಬ ದೃಢಪಡಿಸಿದೆ. ನಮ್ಮ ಪ್ರೀತಿಯ ಚೆಸ್ಲಿ ಕ್ರಿಸ್ಟ್​ ನಮ್ಮ ಪಾಲಿಗೆ ಬಹುದೊಡ್ಡ ಬೆಳಕಾಗಿದ್ದಳು. ಎಲ್ಲರನ್ನೂ ಕಾಳಜಿ ಮಾಡುತ್ತಿದ್ದಳು, ಎಲ್ಲರನ್ನೂ ಪ್ರೀತಿಸುತ್ತಿದ್ದಳು. ಅವಳನ್ನು ಕಳೆದುಕೊಂಡಿದ್ದು ತುಂಬ ನೋವು ತಂದಿದೆ. ಆಕೆ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುತ್ತಿದ್ದಳು. ಎಲ್ಲರನ್ನೂ ಪ್ರೀತಿಸುತ್ತಿದ್ದಳು. ಬಡವರ ಸೇವೆ ಮಾಡುತ್ತಿದ್ದಳು. ನಮ್ಮ ಮನೆಯ ಮಗಳಾಗಿ, ಸಹೋದರಿಯಾಗಿ, ಸ್ನೇಹಿತೆ, ಮಾರ್ಗದರ್ಶಿಯಾಗಿ ಇದ್ದಳು ಎಂದು ಚೆಸ್ಲಿ ಕುಟುಂಬದವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಸಾವಿಗೂ ಕೆಲವೇ ಗಂಟೆ ಮೊದಲು ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ ಕ್ರಿಸ್ಟ್​, ಈ ದಿನ ನಿಮಗೆ ಶಾಂತಿ ಮತ್ತು  ವಿಶ್ರಾಂತಿಯನ್ನು ತರಲಿ ಎಂದು ಪೋಸ್ಟ್ ಹಾಕಿದ್ದರು. ಕ್ರಿಸ್ಟ್ ಸಾವಿಗೆ ನಿಜವಾದ ಕಾರಣವೇನು ಎಂಬ ಬಗ್ಗೆ ತನಿಖೆ ಶುರುವಾಗಿದೆ. ಆದರೆ ಸದ್ಯಕ್ಕೆ ಯಾವುದೇ ಮಾಹಿತಿಯನ್ನೂ ನೀಡಿಲ್ಲ. ಇನ್ನು ಮಾನಸಿಕ ಆರೋಗ್ಯ ಸ್ಥಿರವಾಗಿಲ್ಲದಿರುವುದೇ ಸಾವಿಗೆ ಕಾರಣವಾ ಎಂಬುದೊಂದು ಅನುಮಾನವೂ ಮೂಡಿದೆ. ಈ ಹಿಂದೆ 2019ರಲ್ಲಿ ಮಾನಸಿಕ ಆರೋಗ್ಯ, ಒತ್ತಡ ನಿಭಾಯಿಸುವ ಬಗ್ಗೆ ಮಾತನಾಡುತ್ತ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ತಾವು ಅನುಸರಿಸುವ ಕ್ರಮಗಳ ಬಗ್ಗೆ ಕ್ರಿಸ್ಟ್ ಮಾತನಾಡಿದ್ದರು. ನಾನು ನನ್ನ ಮನಸಿನ ಸುಸ್ಥಿರ ಆರೋಗ್ಯಕ್ಕಾಗಿ ಆಗಾಗ ಕೌನ್ಸೆಲರ್​ ಬಳಿ ಕೂಡ ಮಾತನಾಡುತ್ತೇನೆ. ಇದು ನನಗೆ ಬಹುದೊಡ್ಡ ಸಮಾಧಾನ ಕೊಡುತ್ತದೆ ಎಂದು ಹೇಳಿದ್ದರು. ಹಾಗೇ, ಜನರು ಮಾನಸಿಕ ಒತ್ತಡ ನಿಭಾಯಿಸಿಕೊಳ್ಳಲು ಏನೆಲ್ಲ ಮಾಡಬಹುದು ಎಂಬ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದರು.

ಇದನ್ನೂ ಓದಿ: ‘ಮತ್ತು ಬರಿಸಿ ಅತ್ಯಾಚಾರ ಮಾಡಿದರು’; ಖ್ಯಾತ ಗಾಯಕನ ವಿರುದ್ಧ ಮಾಡೆಲ್​ ಆರೋಪ: 150 ಕೋಟಿ ಕೊಡಲು ಆಗ್ರಹ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್