AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾರ್ಟ್​​ಮೆಂಟ್​​ನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಮಿಸ್​ ಯುಎಸ್​ಎ ವಿನ್ನರ್​; ಸಾವಿಗೂ ಮೊದಲು ಇನ್​ಸ್ಟಾ ಪೋಸ್ಟ್​ !

ಚೆಸ್ಲಿ ಸಾವಿನ ಬಗ್ಗೆ ಅವರ ಕುಟುಂಬ ದೃಢಪಡಿಸಿದೆ. ನಮ್ಮ ಪ್ರೀತಿಯ ಚೆಸ್ಲಿ ಕ್ರಿಸ್ಟ್​ ನಮ್ಮ ಪಾಲಿಗೆ ಬಹುದೊಡ್ಡ ಬೆಳಕಾಗಿದ್ದಳು. ಎಲ್ಲರನ್ನೂ ಕಾಳಜಿ ಮಾಡುತ್ತಿದ್ದಳು, ಎಲ್ಲರನ್ನೂ ಪ್ರೀತಿಸುತ್ತಿದ್ದಳು. ಅವಳನ್ನು ಕಳೆದುಕೊಂಡಿದ್ದು ತುಂಬ ನೋವು ತಂದಿದೆ ಎಂದಿದ್ದಾರೆ.

ಅಪಾರ್ಟ್​​ಮೆಂಟ್​​ನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಮಿಸ್​ ಯುಎಸ್​ಎ ವಿನ್ನರ್​; ಸಾವಿಗೂ ಮೊದಲು ಇನ್​ಸ್ಟಾ ಪೋಸ್ಟ್​ !
ಮೃತ ಯುವತಿ
TV9 Web
| Edited By: |

Updated on: Jan 31, 2022 | 2:30 PM

Share

ಮಾಜಿ ಮಿಸ್​ ಯುಎಸ್​ಎ ಬಿರುದು ಪಡೆದಿದ್ದ ಚೆಸ್ಲಿ ಕ್ರಿಸ್ಟ್ (30)ಚೆ ತಮ್ಮ ಮನೆ ಇರುವ ಎತ್ತರದ ಅಪಾರ್ಟ್​ಮೆಂಟ್​​ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2019ರ ಮಿಸ್​ ಯುಎಸ್​ಎ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದ ಇವರು, ಮ್ಯಾನ್​ಹಟ್ಟನ್​​ನ 60 ಅಂತಸ್ತಿನ ಅಪಾರ್ಟ್​ಮೆಂಟ್​​ನಲ್ಲಿನ 9ನೇ ಫ್ಲೋರ್​​ನಲ್ಲಿ ವಾಸವಾಗಿದ್ದರು. ಭಾನುವಾರ ಮುಂಜಾನೆ ಅಪಾರ್ಟ್​ಮೆಂಟ್​​​ನ ಎದುರಿನ ರಸ್ತೆಯಲ್ಲಿ ಅವರ ಶವ ಪತ್ತೆಯಾಗಿದೆ.  ಭಾನುವಾರ ಮುಂಜಾನೆ 7ಗಂಟೆ ಹೊತ್ತಿಗೆ ಚೆಸ್ಲಿ ಕ್ರಿಸ್ಟ್​ 29ನೇ ಫ್ಲೋರ್​​ನಲ್ಲಿ ಕಾಣಿಸಿಕೊಂಡಿದ್ದರು ಎಂದು ಹೇಳಲಾಗಿದೆ.

ಚೆಸ್ಲಿ ಸಾವಿನ ಬಗ್ಗೆ ಅವರ ಕುಟುಂಬ ದೃಢಪಡಿಸಿದೆ. ನಮ್ಮ ಪ್ರೀತಿಯ ಚೆಸ್ಲಿ ಕ್ರಿಸ್ಟ್​ ನಮ್ಮ ಪಾಲಿಗೆ ಬಹುದೊಡ್ಡ ಬೆಳಕಾಗಿದ್ದಳು. ಎಲ್ಲರನ್ನೂ ಕಾಳಜಿ ಮಾಡುತ್ತಿದ್ದಳು, ಎಲ್ಲರನ್ನೂ ಪ್ರೀತಿಸುತ್ತಿದ್ದಳು. ಅವಳನ್ನು ಕಳೆದುಕೊಂಡಿದ್ದು ತುಂಬ ನೋವು ತಂದಿದೆ. ಆಕೆ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುತ್ತಿದ್ದಳು. ಎಲ್ಲರನ್ನೂ ಪ್ರೀತಿಸುತ್ತಿದ್ದಳು. ಬಡವರ ಸೇವೆ ಮಾಡುತ್ತಿದ್ದಳು. ನಮ್ಮ ಮನೆಯ ಮಗಳಾಗಿ, ಸಹೋದರಿಯಾಗಿ, ಸ್ನೇಹಿತೆ, ಮಾರ್ಗದರ್ಶಿಯಾಗಿ ಇದ್ದಳು ಎಂದು ಚೆಸ್ಲಿ ಕುಟುಂಬದವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಸಾವಿಗೂ ಕೆಲವೇ ಗಂಟೆ ಮೊದಲು ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ ಕ್ರಿಸ್ಟ್​, ಈ ದಿನ ನಿಮಗೆ ಶಾಂತಿ ಮತ್ತು  ವಿಶ್ರಾಂತಿಯನ್ನು ತರಲಿ ಎಂದು ಪೋಸ್ಟ್ ಹಾಕಿದ್ದರು. ಕ್ರಿಸ್ಟ್ ಸಾವಿಗೆ ನಿಜವಾದ ಕಾರಣವೇನು ಎಂಬ ಬಗ್ಗೆ ತನಿಖೆ ಶುರುವಾಗಿದೆ. ಆದರೆ ಸದ್ಯಕ್ಕೆ ಯಾವುದೇ ಮಾಹಿತಿಯನ್ನೂ ನೀಡಿಲ್ಲ. ಇನ್ನು ಮಾನಸಿಕ ಆರೋಗ್ಯ ಸ್ಥಿರವಾಗಿಲ್ಲದಿರುವುದೇ ಸಾವಿಗೆ ಕಾರಣವಾ ಎಂಬುದೊಂದು ಅನುಮಾನವೂ ಮೂಡಿದೆ. ಈ ಹಿಂದೆ 2019ರಲ್ಲಿ ಮಾನಸಿಕ ಆರೋಗ್ಯ, ಒತ್ತಡ ನಿಭಾಯಿಸುವ ಬಗ್ಗೆ ಮಾತನಾಡುತ್ತ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ತಾವು ಅನುಸರಿಸುವ ಕ್ರಮಗಳ ಬಗ್ಗೆ ಕ್ರಿಸ್ಟ್ ಮಾತನಾಡಿದ್ದರು. ನಾನು ನನ್ನ ಮನಸಿನ ಸುಸ್ಥಿರ ಆರೋಗ್ಯಕ್ಕಾಗಿ ಆಗಾಗ ಕೌನ್ಸೆಲರ್​ ಬಳಿ ಕೂಡ ಮಾತನಾಡುತ್ತೇನೆ. ಇದು ನನಗೆ ಬಹುದೊಡ್ಡ ಸಮಾಧಾನ ಕೊಡುತ್ತದೆ ಎಂದು ಹೇಳಿದ್ದರು. ಹಾಗೇ, ಜನರು ಮಾನಸಿಕ ಒತ್ತಡ ನಿಭಾಯಿಸಿಕೊಳ್ಳಲು ಏನೆಲ್ಲ ಮಾಡಬಹುದು ಎಂಬ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದರು.

ಇದನ್ನೂ ಓದಿ: ‘ಮತ್ತು ಬರಿಸಿ ಅತ್ಯಾಚಾರ ಮಾಡಿದರು’; ಖ್ಯಾತ ಗಾಯಕನ ವಿರುದ್ಧ ಮಾಡೆಲ್​ ಆರೋಪ: 150 ಕೋಟಿ ಕೊಡಲು ಆಗ್ರಹ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು