AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾರ್ಟ್​​ಮೆಂಟ್​​ನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಮಿಸ್​ ಯುಎಸ್​ಎ ವಿನ್ನರ್​; ಸಾವಿಗೂ ಮೊದಲು ಇನ್​ಸ್ಟಾ ಪೋಸ್ಟ್​ !

ಚೆಸ್ಲಿ ಸಾವಿನ ಬಗ್ಗೆ ಅವರ ಕುಟುಂಬ ದೃಢಪಡಿಸಿದೆ. ನಮ್ಮ ಪ್ರೀತಿಯ ಚೆಸ್ಲಿ ಕ್ರಿಸ್ಟ್​ ನಮ್ಮ ಪಾಲಿಗೆ ಬಹುದೊಡ್ಡ ಬೆಳಕಾಗಿದ್ದಳು. ಎಲ್ಲರನ್ನೂ ಕಾಳಜಿ ಮಾಡುತ್ತಿದ್ದಳು, ಎಲ್ಲರನ್ನೂ ಪ್ರೀತಿಸುತ್ತಿದ್ದಳು. ಅವಳನ್ನು ಕಳೆದುಕೊಂಡಿದ್ದು ತುಂಬ ನೋವು ತಂದಿದೆ ಎಂದಿದ್ದಾರೆ.

ಅಪಾರ್ಟ್​​ಮೆಂಟ್​​ನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಮಿಸ್​ ಯುಎಸ್​ಎ ವಿನ್ನರ್​; ಸಾವಿಗೂ ಮೊದಲು ಇನ್​ಸ್ಟಾ ಪೋಸ್ಟ್​ !
ಮೃತ ಯುವತಿ
TV9 Web
| Edited By: |

Updated on: Jan 31, 2022 | 2:30 PM

Share

ಮಾಜಿ ಮಿಸ್​ ಯುಎಸ್​ಎ ಬಿರುದು ಪಡೆದಿದ್ದ ಚೆಸ್ಲಿ ಕ್ರಿಸ್ಟ್ (30)ಚೆ ತಮ್ಮ ಮನೆ ಇರುವ ಎತ್ತರದ ಅಪಾರ್ಟ್​ಮೆಂಟ್​​ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2019ರ ಮಿಸ್​ ಯುಎಸ್​ಎ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದ ಇವರು, ಮ್ಯಾನ್​ಹಟ್ಟನ್​​ನ 60 ಅಂತಸ್ತಿನ ಅಪಾರ್ಟ್​ಮೆಂಟ್​​ನಲ್ಲಿನ 9ನೇ ಫ್ಲೋರ್​​ನಲ್ಲಿ ವಾಸವಾಗಿದ್ದರು. ಭಾನುವಾರ ಮುಂಜಾನೆ ಅಪಾರ್ಟ್​ಮೆಂಟ್​​​ನ ಎದುರಿನ ರಸ್ತೆಯಲ್ಲಿ ಅವರ ಶವ ಪತ್ತೆಯಾಗಿದೆ.  ಭಾನುವಾರ ಮುಂಜಾನೆ 7ಗಂಟೆ ಹೊತ್ತಿಗೆ ಚೆಸ್ಲಿ ಕ್ರಿಸ್ಟ್​ 29ನೇ ಫ್ಲೋರ್​​ನಲ್ಲಿ ಕಾಣಿಸಿಕೊಂಡಿದ್ದರು ಎಂದು ಹೇಳಲಾಗಿದೆ.

ಚೆಸ್ಲಿ ಸಾವಿನ ಬಗ್ಗೆ ಅವರ ಕುಟುಂಬ ದೃಢಪಡಿಸಿದೆ. ನಮ್ಮ ಪ್ರೀತಿಯ ಚೆಸ್ಲಿ ಕ್ರಿಸ್ಟ್​ ನಮ್ಮ ಪಾಲಿಗೆ ಬಹುದೊಡ್ಡ ಬೆಳಕಾಗಿದ್ದಳು. ಎಲ್ಲರನ್ನೂ ಕಾಳಜಿ ಮಾಡುತ್ತಿದ್ದಳು, ಎಲ್ಲರನ್ನೂ ಪ್ರೀತಿಸುತ್ತಿದ್ದಳು. ಅವಳನ್ನು ಕಳೆದುಕೊಂಡಿದ್ದು ತುಂಬ ನೋವು ತಂದಿದೆ. ಆಕೆ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುತ್ತಿದ್ದಳು. ಎಲ್ಲರನ್ನೂ ಪ್ರೀತಿಸುತ್ತಿದ್ದಳು. ಬಡವರ ಸೇವೆ ಮಾಡುತ್ತಿದ್ದಳು. ನಮ್ಮ ಮನೆಯ ಮಗಳಾಗಿ, ಸಹೋದರಿಯಾಗಿ, ಸ್ನೇಹಿತೆ, ಮಾರ್ಗದರ್ಶಿಯಾಗಿ ಇದ್ದಳು ಎಂದು ಚೆಸ್ಲಿ ಕುಟುಂಬದವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಸಾವಿಗೂ ಕೆಲವೇ ಗಂಟೆ ಮೊದಲು ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ ಕ್ರಿಸ್ಟ್​, ಈ ದಿನ ನಿಮಗೆ ಶಾಂತಿ ಮತ್ತು  ವಿಶ್ರಾಂತಿಯನ್ನು ತರಲಿ ಎಂದು ಪೋಸ್ಟ್ ಹಾಕಿದ್ದರು. ಕ್ರಿಸ್ಟ್ ಸಾವಿಗೆ ನಿಜವಾದ ಕಾರಣವೇನು ಎಂಬ ಬಗ್ಗೆ ತನಿಖೆ ಶುರುವಾಗಿದೆ. ಆದರೆ ಸದ್ಯಕ್ಕೆ ಯಾವುದೇ ಮಾಹಿತಿಯನ್ನೂ ನೀಡಿಲ್ಲ. ಇನ್ನು ಮಾನಸಿಕ ಆರೋಗ್ಯ ಸ್ಥಿರವಾಗಿಲ್ಲದಿರುವುದೇ ಸಾವಿಗೆ ಕಾರಣವಾ ಎಂಬುದೊಂದು ಅನುಮಾನವೂ ಮೂಡಿದೆ. ಈ ಹಿಂದೆ 2019ರಲ್ಲಿ ಮಾನಸಿಕ ಆರೋಗ್ಯ, ಒತ್ತಡ ನಿಭಾಯಿಸುವ ಬಗ್ಗೆ ಮಾತನಾಡುತ್ತ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ತಾವು ಅನುಸರಿಸುವ ಕ್ರಮಗಳ ಬಗ್ಗೆ ಕ್ರಿಸ್ಟ್ ಮಾತನಾಡಿದ್ದರು. ನಾನು ನನ್ನ ಮನಸಿನ ಸುಸ್ಥಿರ ಆರೋಗ್ಯಕ್ಕಾಗಿ ಆಗಾಗ ಕೌನ್ಸೆಲರ್​ ಬಳಿ ಕೂಡ ಮಾತನಾಡುತ್ತೇನೆ. ಇದು ನನಗೆ ಬಹುದೊಡ್ಡ ಸಮಾಧಾನ ಕೊಡುತ್ತದೆ ಎಂದು ಹೇಳಿದ್ದರು. ಹಾಗೇ, ಜನರು ಮಾನಸಿಕ ಒತ್ತಡ ನಿಭಾಯಿಸಿಕೊಳ್ಳಲು ಏನೆಲ್ಲ ಮಾಡಬಹುದು ಎಂಬ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದರು.

ಇದನ್ನೂ ಓದಿ: ‘ಮತ್ತು ಬರಿಸಿ ಅತ್ಯಾಚಾರ ಮಾಡಿದರು’; ಖ್ಯಾತ ಗಾಯಕನ ವಿರುದ್ಧ ಮಾಡೆಲ್​ ಆರೋಪ: 150 ಕೋಟಿ ಕೊಡಲು ಆಗ್ರಹ

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್