AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬೀರಿಯಾ ಬಳಿ ನಾಪತ್ತೆಯಾಗಿದ್ದ ರಷ್ಯಾದ ವಿಮಾನ ಪತ್ತೆ; 18 ಪ್ರಯಾಣಿಕರೂ ಸೇಫ್

28 ಜನರು ಪ್ರಯಾಣಿಸಬಹುದಾದ ವಿಮಾನವೊಂದು ಸೈಬೀರಿಯಾದ ಟಾಮ್ಸ್ಕ್ ಎಂಬಲ್ಲಿ ನಾಪತ್ತೆಯಾಗಿತ್ತು. ರಷ್ಯಾದ ಆ ವಿಮಾನ ಈಗ ಪತ್ತೆಯಾಗಿದೆ.

ಸೈಬೀರಿಯಾ ಬಳಿ ನಾಪತ್ತೆಯಾಗಿದ್ದ ರಷ್ಯಾದ ವಿಮಾನ ಪತ್ತೆ; 18 ಪ್ರಯಾಣಿಕರೂ ಸೇಫ್
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Jul 16, 2021 | 7:49 PM

Share

ಮಾಸ್ಕೋ: ಸೈಬೀರಿಯಾ ಬಳಿ ಇಂದು ಮಧ್ಯಾಹ್ನದ ವೇಳೆ ನಾಪತ್ತೆಯಾಗಿದ್ದ ರಷ್ಯಾದ ವಿಮಾನ ಪತ್ತೆಯಾಗಿದ್ದು, ವಿಮಾನದಲ್ಲಿದ್ದ 15 ಪ್ರಯಾಣಿಕರು ಹಾಗೂ ಮೂವರು ವಿಮಾನದ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ರಷ್ಯಾದ ವಿಮಾನಯಾನ ಏಜೆನ್ಸಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ. ತಾಂತ್ರಿಕ ಸಮಸ್ಯೆಯಿಂದಾಗಿ ವಿಮಾನವನ್ನು ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

28 ಜನರು ಪ್ರಯಾಣಿಸಬಹುದಾದ ವಿಮಾನವೊಂದು ಸೈಬೀರಿಯಾದ ಟಾಮ್ಸ್ಕ್ ಎಂಬಲ್ಲಿ ನಾಪತ್ತೆಯಾಗಿತ್ತು. ಆ ವಿಮಾನ ಎಲ್ಲಿ ಹೋಯಿತು, ಏನಾಯಿತೆಂಬ ಬಗ್ಗೆ ಯಾವುದೇ ಮಾಹಿತಿಯೂ ಸಿಕ್ಕಿರಲಿಲ್ಲ. ಆಂಟೊನೊವ್ An-28 ರಷ್ಯಾದ ಈ ವಿಮಾನದಲ್ಲಿ ಒಟ್ಟು 18 ಜನರು ಪ್ರಯಾಣಿಸುತ್ತಿದ್ದರು. ಆ ವಿಮಾನ ಸೈಬೀರಿಯಾ ದಾಟುತ್ತಿದ್ದಂತೆ ರಡಾರ್ ವ್ಯಾಪ್ತಿಯಿಂದ ಹೊರಹೋಗಿತ್ತು. ಹೀಗಾಗಿ, ಆ ವಿಮಾನ ಅಪಘಾತಕ್ಕೀಡಾಗಿರಬಹುದು ಎಂದು ಊಹಿಸಲಾಗಿತ್ತು.

ಆದರೀಗ ಆ ವಿಮಾನ ಪತ್ತೆಯಾಗಿದ್ದು, ಪ್ರಯಾಣಿಕರೆಲ್ಲರೂ ಜೀವಂತವಾಗಿದ್ದಾರೆ ಎಂದು ತಿಳಿದುಬಂದಿದೆ. ವಿಮಾನದಲ್ಲಿ 15 ಪ್ರಯಾಣಿಕರು ಸೇರಿದಂತೆ ಮೂವರು ವಿಮಾನದ ಸಿಬ್ಬಂದಿಗಳಿದ್ದರು. ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಗಿತ್ತು. ಆ ವಿಮಾನದಲ್ಲಿದ್ದವರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗುತ್ತಿದೆ…

ಇದನ್ನೂ ಓದಿ: 13 ಪ್ರಯಾಣಿಕರಿದ್ದ ರಷ್ಯಾದ ವಿಮಾನ ಸೈಬೀರಿಯಾ ಸಮೀಪ ನಾಪತ್ತೆ

ಇದನ್ನೂ ಓದಿ: ವಿಮಾನದ ಬಾಲ ನೋಡಿ ಫಟಾಫಟ್ ಅಂತ ಒಂದೇ ನಿಮಿಷದಲ್ಲಿ ಅತೀ ಹೆಚ್ಚು ವಿಮಾನಗಳನ್ನು ಗುರುತಿಸಿ ವಿಶ್ವದಾಖಲೆ ಬರೆದ ಪೋರಿ

(Missing Russian Plane In Siberia Found all 18 On Board Alive)

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು