AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬೀರಿಯಾ ಬಳಿ ನಾಪತ್ತೆಯಾಗಿದ್ದ ರಷ್ಯಾದ ವಿಮಾನ ಪತ್ತೆ; 18 ಪ್ರಯಾಣಿಕರೂ ಸೇಫ್

28 ಜನರು ಪ್ರಯಾಣಿಸಬಹುದಾದ ವಿಮಾನವೊಂದು ಸೈಬೀರಿಯಾದ ಟಾಮ್ಸ್ಕ್ ಎಂಬಲ್ಲಿ ನಾಪತ್ತೆಯಾಗಿತ್ತು. ರಷ್ಯಾದ ಆ ವಿಮಾನ ಈಗ ಪತ್ತೆಯಾಗಿದೆ.

ಸೈಬೀರಿಯಾ ಬಳಿ ನಾಪತ್ತೆಯಾಗಿದ್ದ ರಷ್ಯಾದ ವಿಮಾನ ಪತ್ತೆ; 18 ಪ್ರಯಾಣಿಕರೂ ಸೇಫ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 16, 2021 | 7:49 PM

Share

ಮಾಸ್ಕೋ: ಸೈಬೀರಿಯಾ ಬಳಿ ಇಂದು ಮಧ್ಯಾಹ್ನದ ವೇಳೆ ನಾಪತ್ತೆಯಾಗಿದ್ದ ರಷ್ಯಾದ ವಿಮಾನ ಪತ್ತೆಯಾಗಿದ್ದು, ವಿಮಾನದಲ್ಲಿದ್ದ 15 ಪ್ರಯಾಣಿಕರು ಹಾಗೂ ಮೂವರು ವಿಮಾನದ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ರಷ್ಯಾದ ವಿಮಾನಯಾನ ಏಜೆನ್ಸಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ. ತಾಂತ್ರಿಕ ಸಮಸ್ಯೆಯಿಂದಾಗಿ ವಿಮಾನವನ್ನು ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

28 ಜನರು ಪ್ರಯಾಣಿಸಬಹುದಾದ ವಿಮಾನವೊಂದು ಸೈಬೀರಿಯಾದ ಟಾಮ್ಸ್ಕ್ ಎಂಬಲ್ಲಿ ನಾಪತ್ತೆಯಾಗಿತ್ತು. ಆ ವಿಮಾನ ಎಲ್ಲಿ ಹೋಯಿತು, ಏನಾಯಿತೆಂಬ ಬಗ್ಗೆ ಯಾವುದೇ ಮಾಹಿತಿಯೂ ಸಿಕ್ಕಿರಲಿಲ್ಲ. ಆಂಟೊನೊವ್ An-28 ರಷ್ಯಾದ ಈ ವಿಮಾನದಲ್ಲಿ ಒಟ್ಟು 18 ಜನರು ಪ್ರಯಾಣಿಸುತ್ತಿದ್ದರು. ಆ ವಿಮಾನ ಸೈಬೀರಿಯಾ ದಾಟುತ್ತಿದ್ದಂತೆ ರಡಾರ್ ವ್ಯಾಪ್ತಿಯಿಂದ ಹೊರಹೋಗಿತ್ತು. ಹೀಗಾಗಿ, ಆ ವಿಮಾನ ಅಪಘಾತಕ್ಕೀಡಾಗಿರಬಹುದು ಎಂದು ಊಹಿಸಲಾಗಿತ್ತು.

ಆದರೀಗ ಆ ವಿಮಾನ ಪತ್ತೆಯಾಗಿದ್ದು, ಪ್ರಯಾಣಿಕರೆಲ್ಲರೂ ಜೀವಂತವಾಗಿದ್ದಾರೆ ಎಂದು ತಿಳಿದುಬಂದಿದೆ. ವಿಮಾನದಲ್ಲಿ 15 ಪ್ರಯಾಣಿಕರು ಸೇರಿದಂತೆ ಮೂವರು ವಿಮಾನದ ಸಿಬ್ಬಂದಿಗಳಿದ್ದರು. ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಗಿತ್ತು. ಆ ವಿಮಾನದಲ್ಲಿದ್ದವರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗುತ್ತಿದೆ…

ಇದನ್ನೂ ಓದಿ: 13 ಪ್ರಯಾಣಿಕರಿದ್ದ ರಷ್ಯಾದ ವಿಮಾನ ಸೈಬೀರಿಯಾ ಸಮೀಪ ನಾಪತ್ತೆ

ಇದನ್ನೂ ಓದಿ: ವಿಮಾನದ ಬಾಲ ನೋಡಿ ಫಟಾಫಟ್ ಅಂತ ಒಂದೇ ನಿಮಿಷದಲ್ಲಿ ಅತೀ ಹೆಚ್ಚು ವಿಮಾನಗಳನ್ನು ಗುರುತಿಸಿ ವಿಶ್ವದಾಖಲೆ ಬರೆದ ಪೋರಿ

(Missing Russian Plane In Siberia Found all 18 On Board Alive)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ