AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬೀರಿಯಾ ಬಳಿ ನಾಪತ್ತೆಯಾಗಿದ್ದ ರಷ್ಯಾದ ವಿಮಾನ ಪತ್ತೆ; 18 ಪ್ರಯಾಣಿಕರೂ ಸೇಫ್

28 ಜನರು ಪ್ರಯಾಣಿಸಬಹುದಾದ ವಿಮಾನವೊಂದು ಸೈಬೀರಿಯಾದ ಟಾಮ್ಸ್ಕ್ ಎಂಬಲ್ಲಿ ನಾಪತ್ತೆಯಾಗಿತ್ತು. ರಷ್ಯಾದ ಆ ವಿಮಾನ ಈಗ ಪತ್ತೆಯಾಗಿದೆ.

ಸೈಬೀರಿಯಾ ಬಳಿ ನಾಪತ್ತೆಯಾಗಿದ್ದ ರಷ್ಯಾದ ವಿಮಾನ ಪತ್ತೆ; 18 ಪ್ರಯಾಣಿಕರೂ ಸೇಫ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 16, 2021 | 7:49 PM

Share

ಮಾಸ್ಕೋ: ಸೈಬೀರಿಯಾ ಬಳಿ ಇಂದು ಮಧ್ಯಾಹ್ನದ ವೇಳೆ ನಾಪತ್ತೆಯಾಗಿದ್ದ ರಷ್ಯಾದ ವಿಮಾನ ಪತ್ತೆಯಾಗಿದ್ದು, ವಿಮಾನದಲ್ಲಿದ್ದ 15 ಪ್ರಯಾಣಿಕರು ಹಾಗೂ ಮೂವರು ವಿಮಾನದ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ರಷ್ಯಾದ ವಿಮಾನಯಾನ ಏಜೆನ್ಸಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ. ತಾಂತ್ರಿಕ ಸಮಸ್ಯೆಯಿಂದಾಗಿ ವಿಮಾನವನ್ನು ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

28 ಜನರು ಪ್ರಯಾಣಿಸಬಹುದಾದ ವಿಮಾನವೊಂದು ಸೈಬೀರಿಯಾದ ಟಾಮ್ಸ್ಕ್ ಎಂಬಲ್ಲಿ ನಾಪತ್ತೆಯಾಗಿತ್ತು. ಆ ವಿಮಾನ ಎಲ್ಲಿ ಹೋಯಿತು, ಏನಾಯಿತೆಂಬ ಬಗ್ಗೆ ಯಾವುದೇ ಮಾಹಿತಿಯೂ ಸಿಕ್ಕಿರಲಿಲ್ಲ. ಆಂಟೊನೊವ್ An-28 ರಷ್ಯಾದ ಈ ವಿಮಾನದಲ್ಲಿ ಒಟ್ಟು 18 ಜನರು ಪ್ರಯಾಣಿಸುತ್ತಿದ್ದರು. ಆ ವಿಮಾನ ಸೈಬೀರಿಯಾ ದಾಟುತ್ತಿದ್ದಂತೆ ರಡಾರ್ ವ್ಯಾಪ್ತಿಯಿಂದ ಹೊರಹೋಗಿತ್ತು. ಹೀಗಾಗಿ, ಆ ವಿಮಾನ ಅಪಘಾತಕ್ಕೀಡಾಗಿರಬಹುದು ಎಂದು ಊಹಿಸಲಾಗಿತ್ತು.

ಆದರೀಗ ಆ ವಿಮಾನ ಪತ್ತೆಯಾಗಿದ್ದು, ಪ್ರಯಾಣಿಕರೆಲ್ಲರೂ ಜೀವಂತವಾಗಿದ್ದಾರೆ ಎಂದು ತಿಳಿದುಬಂದಿದೆ. ವಿಮಾನದಲ್ಲಿ 15 ಪ್ರಯಾಣಿಕರು ಸೇರಿದಂತೆ ಮೂವರು ವಿಮಾನದ ಸಿಬ್ಬಂದಿಗಳಿದ್ದರು. ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಗಿತ್ತು. ಆ ವಿಮಾನದಲ್ಲಿದ್ದವರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗುತ್ತಿದೆ…

ಇದನ್ನೂ ಓದಿ: 13 ಪ್ರಯಾಣಿಕರಿದ್ದ ರಷ್ಯಾದ ವಿಮಾನ ಸೈಬೀರಿಯಾ ಸಮೀಪ ನಾಪತ್ತೆ

ಇದನ್ನೂ ಓದಿ: ವಿಮಾನದ ಬಾಲ ನೋಡಿ ಫಟಾಫಟ್ ಅಂತ ಒಂದೇ ನಿಮಿಷದಲ್ಲಿ ಅತೀ ಹೆಚ್ಚು ವಿಮಾನಗಳನ್ನು ಗುರುತಿಸಿ ವಿಶ್ವದಾಖಲೆ ಬರೆದ ಪೋರಿ

(Missing Russian Plane In Siberia Found all 18 On Board Alive)

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!