AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ನೀಡಿದ ವಿಮಾನಗಳನ್ನು ನಿರ್ವಹಿಸುವ ಸಾಮರ್ಥ್ಯವಿರುವ ಪೈಲಟ್‌ಗಳು ಸೇನೆಯಲ್ಲಿ ಇಲ್ಲ: ಮಾಲ್ಡೀವ್ಸ್ ಸಚಿವ

"ಇದು ವಿವಿಧ ಹಂತಗಳಲ್ಲಿ ಹಾದುಹೋಗುವ ಅಗತ್ಯವಿರುವ ತರಬೇತಿಯಾಗಿದ್ದರಿಂದ, ವಿವಿಧ ಕಾರಣಗಳಿಂದ ನಮ್ಮ ಸೈನಿಕರು ಪೂರ್ಣಗೊಳ್ಳಲಿಲ್ಲ. ಆದ್ದರಿಂದ, ಎರಡು ಹೆಲಿಕಾಪ್ಟರ್​​ಗಳು ಮತ್ತು ಡೋರ್ನಿಯರ್ ಅನ್ನು ಹಾರಿಸಲು ಪರವಾನಗಿ ಪಡೆದ ಅಥವಾ ಸಂಪೂರ್ಣವಾಗಿ ಕಾರ್ಯನಿರ್ವಹಿಸುವ ಯಾವುದೇ ಸಿಬ್ಬಂದಿ ಸದ್ಯಕ್ಕೆ ನಮ್ಮ ಪಡೆಯಲ್ಲಿ ಇಲ್ಲ ಎಂದ ಮಾಲ್ಡೀವ್ಸ್

ಭಾರತ ನೀಡಿದ ವಿಮಾನಗಳನ್ನು ನಿರ್ವಹಿಸುವ ಸಾಮರ್ಥ್ಯವಿರುವ ಪೈಲಟ್‌ಗಳು ಸೇನೆಯಲ್ಲಿ ಇಲ್ಲ: ಮಾಲ್ಡೀವ್ಸ್ ಸಚಿವ
ಘಾಸನ್ ಮೌಮೂನ್
ರಶ್ಮಿ ಕಲ್ಲಕಟ್ಟ
|

Updated on:May 13, 2024 | 2:01 PM

Share

ಮಾಲೆ ಮೇ 13: ಭಾರತ ನೀಡಿದ ಮೂರು ವಿಮಾನಗಳನ್ನು ನಿರ್ವಹಿಸುವ ಸಾಮರ್ಥ್ಯವಿರುವ ಪೈಲಟ್‌ಗಳು ಮಾಲ್ಡೀವ್ಸ್(Maldives) ಸೇನೆಯಲ್ಲಿ  ಇಲ್ಲ ಎಂದು ಮಾಲ್ಡೀವ್ಸ್ ರಕ್ಷಣಾ ಸಚಿವ ಘಾಸನ್ ಮೌಮೂನ್ (Ghassan Maumoon) ಹೇಳಿದ್ದಾರೆ. ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು (Mohamed Muizzu) ಅವರ ನಿರ್ಧಾರದಿಂದಾಗಿ 76 ಭಾರತೀಯ ರಕ್ಷಣಾ ಸಿಬ್ಬಂದಿ ದ್ವೀಪ ರಾಷ್ಟ್ರವನ್ನು ತೊರೆದ ಕೆಲವೇ ದಿನಗಳ ನಂತರ ಮೌಮೂನ್ ಅವರ ಈ ಹೇಳಿಕೆ ಬಂದಿದೆ. ಎರಡು ಹೆಲಿಕಾಪ್ಟರ್‌ಗಳು ಮತ್ತು ಡೋರ್ನಿಯರ್ ವಿಮಾನಗಳನ್ನು ನಿರ್ವಹಿಸಲು ಮಾಲ್ಡೀವ್ಸ್‌ನಲ್ಲಿದ್ದ  ಭಾರತೀಯ ಸೈನಿಕರನ್ನು ಹಿಂದಕ್ಕೆ ಕರೆಸಿ ಭಾರತದಿಂದ ನಾಗರಿಕರನ್ನು ನೇಮಿಸುವ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಲು ಶನಿವಾರ ಇಲ್ಲಿನ ಅಧ್ಯಕ್ಷರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಘಾಸನ್ ಮೌಮೂನ್ ಈ ವಿಷಯ ತಿಳಿಸಿದ್ದಾರೆ.

ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಘಾಸನ್ ಮೌಮೂನ್, ಹಿಂದಿನ ಸರ್ಕಾರ ರಚಿಸಿದ ಒಪ್ಪಂದಗಳ ಅಡಿಯಲ್ಲಿ ಕೆಲವು ಸೈನಿಕರು ಹಾರಾಟ ಮಾಡಲು ತರಬೇತಿ ಪಡೆದಿದ್ದಾರೆಯೇ ಹೊರತು ಭಾರತ ನೀಡಿದ ಮೂರು ವಿಮಾನಗಳನ್ನು ಹಾರಿಸಲು ಸಾಮರ್ಥ್ಯವಿರುವ ಮಾಲ್ಡೀವ್ಸ್ ಸೈನಿಕರು ಮಾಲ್ಡೀವ್ಸ್ ರಾಷ್ಟ್ರೀಯ ರಕ್ಷಣಾ ಪಡೆ (ಎಂಎನ್‌ಡಿಎಫ್) ಬಳಿ ಇಲ್ಲ ಎಂದಿದ್ದಾರೆ.

“ಇದು ವಿವಿಧ ಹಂತಗಳಲ್ಲಿ ಹಾದುಹೋಗುವ ಅಗತ್ಯವಿರುವ ತರಬೇತಿಯಾಗಿದ್ದರಿಂದ, ವಿವಿಧ ಕಾರಣಗಳಿಂದ ನಮ್ಮ ಸೈನಿಕರು ಪೂರ್ಣಗೊಳ್ಳಲಿಲ್ಲ. ಆದ್ದರಿಂದ, ಎರಡು ಹೆಲಿಕಾಪ್ಟರ್​​ಗಳು ಮತ್ತು ಡೋರ್ನಿಯರ್ ಅನ್ನು ಹಾರಿಸಲು ಪರವಾನಗಿ ಪಡೆದ ಅಥವಾ ಸಂಪೂರ್ಣವಾಗಿ ಕಾರ್ಯನಿರ್ವಹಿಸುವ ಯಾವುದೇ ಸಿಬ್ಬಂದಿ ಸದ್ಯಕ್ಕೆ ನಮ್ಮ ಪಡೆಯಲ್ಲಿ ಇಲ್ಲ,” ಎಂದು ಘಾಸನ್ ಮೌಮೂನ್ ಹೇಳಿರುವುದಾಗಿ ಅಧಾಧು ಡಾಟ್ ಕಾಮ್ ನ್ಯೂಸ್ ಪೋರ್ಟಲ್ ಉಲ್ಲೇಖಿಸಿದೆ.

ಮೇ 10 ರೊಳಗೆ ದ್ವೀಪ ರಾಷ್ಟ್ರದಲ್ಲಿ ಮೂರು ವಾಯುಯಾನ ವೇದಿಕೆಗಳನ್ನು ನಿರ್ವಹಿಸುತ್ತಿರುವ ಎಲ್ಲಾ ಭಾರತೀಯ ಸೇನಾ ಸಿಬ್ಬಂದಿಯನ್ನು ಹಿಂತೆಗೆದುಕೊಳ್ಳುವಂತೆ ಚೀನಾ ಪರ ನಾಯಕ ಮುಯಿಝು ಒತ್ತಾಯಿಸಿದ ನಂತರ ಉಭಯ ದೇಶಗಳ ನಡುವಿನ ಸಂಬಂಧಗಳು ಹದಗೆಟ್ಟಿವೆ. ಭಾರತವು ಈಗಾಗಲೇ 76 ಸೇನಾ ಸಿಬ್ಬಂದಿಯನ್ನು ಹಿಂಪಡೆದಿದೆ.

ಆದಾಗ್ಯೂ, ಸೆನಾಹಿಯಾ ಮಿಲಿಟರಿ ಆಸ್ಪತ್ರೆಯಲ್ಲಿನ ವೈದ್ಯರನ್ನು ಭಾರತದಿಂದ ತೆಗೆದುಹಾಕುವ ಯಾವುದೇ ಉದ್ದೇಶವನ್ನು ಮಾಲ್ಡೀವ್ಸ್ ಸರ್ಕಾರ ಹೊಂದಿಲ್ಲ ಎಂದು ಮಾಲ್ಡೀವ್ಸ್ ಮಾಧ್ಯಮ ವರದಿ ತಿಳಿಸಿದೆ.

ಇದನ್ನೂ ಓದಿ: ಜಾಗತಿಕ ಪರಿಶೀಲನೆಗೂ ಮುನ್ನವೇ ಅಮೆರಿಕದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ

ಘಾಸನ್ ಮೌಮೂನ್ ಅವರ ಹೇಳಿಕೆಗಳಿಗೆ ವ್ಯತಿರಿಕ್ತವಾಗಿ, ಪ್ರಸ್ತುತ ಆಡಳಿತದ ಹಿರಿಯ ಅಧಿಕಾರಿಗಳು ಕಳೆದ ಐದು ವರ್ಷಗಳಲ್ಲಿ ವಿರೋಧ ಪಕ್ಷದಲ್ಲಿದ್ದಾಗ, ಅವರು ಹಿಂದಿನ ಸರ್ಕಾರವನ್ನು ಟೀಕಿಸಿದ್ದು MNDF ನಲ್ಲಿ ಸಮರ್ಥ ಪೈಲಟ್‌ಗಳಿದ್ದಾರೆ ಎಂದು ಹೇಳಿದ್ದರು ಎಂದು ಅಧಾಧು ಡಾಟ್ ಕಾಮ್ ವರದಿ ಉಲ್ಲೇಖಿಸಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:51 pm, Mon, 13 May 24

ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್