AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ನೀಡಿದ ವಿಮಾನಗಳನ್ನು ನಿರ್ವಹಿಸುವ ಸಾಮರ್ಥ್ಯವಿರುವ ಪೈಲಟ್‌ಗಳು ಸೇನೆಯಲ್ಲಿ ಇಲ್ಲ: ಮಾಲ್ಡೀವ್ಸ್ ಸಚಿವ

"ಇದು ವಿವಿಧ ಹಂತಗಳಲ್ಲಿ ಹಾದುಹೋಗುವ ಅಗತ್ಯವಿರುವ ತರಬೇತಿಯಾಗಿದ್ದರಿಂದ, ವಿವಿಧ ಕಾರಣಗಳಿಂದ ನಮ್ಮ ಸೈನಿಕರು ಪೂರ್ಣಗೊಳ್ಳಲಿಲ್ಲ. ಆದ್ದರಿಂದ, ಎರಡು ಹೆಲಿಕಾಪ್ಟರ್​​ಗಳು ಮತ್ತು ಡೋರ್ನಿಯರ್ ಅನ್ನು ಹಾರಿಸಲು ಪರವಾನಗಿ ಪಡೆದ ಅಥವಾ ಸಂಪೂರ್ಣವಾಗಿ ಕಾರ್ಯನಿರ್ವಹಿಸುವ ಯಾವುದೇ ಸಿಬ್ಬಂದಿ ಸದ್ಯಕ್ಕೆ ನಮ್ಮ ಪಡೆಯಲ್ಲಿ ಇಲ್ಲ ಎಂದ ಮಾಲ್ಡೀವ್ಸ್

ಭಾರತ ನೀಡಿದ ವಿಮಾನಗಳನ್ನು ನಿರ್ವಹಿಸುವ ಸಾಮರ್ಥ್ಯವಿರುವ ಪೈಲಟ್‌ಗಳು ಸೇನೆಯಲ್ಲಿ ಇಲ್ಲ: ಮಾಲ್ಡೀವ್ಸ್ ಸಚಿವ
ಘಾಸನ್ ಮೌಮೂನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 13, 2024 | 2:01 PM

Share

ಮಾಲೆ ಮೇ 13: ಭಾರತ ನೀಡಿದ ಮೂರು ವಿಮಾನಗಳನ್ನು ನಿರ್ವಹಿಸುವ ಸಾಮರ್ಥ್ಯವಿರುವ ಪೈಲಟ್‌ಗಳು ಮಾಲ್ಡೀವ್ಸ್(Maldives) ಸೇನೆಯಲ್ಲಿ  ಇಲ್ಲ ಎಂದು ಮಾಲ್ಡೀವ್ಸ್ ರಕ್ಷಣಾ ಸಚಿವ ಘಾಸನ್ ಮೌಮೂನ್ (Ghassan Maumoon) ಹೇಳಿದ್ದಾರೆ. ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು (Mohamed Muizzu) ಅವರ ನಿರ್ಧಾರದಿಂದಾಗಿ 76 ಭಾರತೀಯ ರಕ್ಷಣಾ ಸಿಬ್ಬಂದಿ ದ್ವೀಪ ರಾಷ್ಟ್ರವನ್ನು ತೊರೆದ ಕೆಲವೇ ದಿನಗಳ ನಂತರ ಮೌಮೂನ್ ಅವರ ಈ ಹೇಳಿಕೆ ಬಂದಿದೆ. ಎರಡು ಹೆಲಿಕಾಪ್ಟರ್‌ಗಳು ಮತ್ತು ಡೋರ್ನಿಯರ್ ವಿಮಾನಗಳನ್ನು ನಿರ್ವಹಿಸಲು ಮಾಲ್ಡೀವ್ಸ್‌ನಲ್ಲಿದ್ದ  ಭಾರತೀಯ ಸೈನಿಕರನ್ನು ಹಿಂದಕ್ಕೆ ಕರೆಸಿ ಭಾರತದಿಂದ ನಾಗರಿಕರನ್ನು ನೇಮಿಸುವ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಲು ಶನಿವಾರ ಇಲ್ಲಿನ ಅಧ್ಯಕ್ಷರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಘಾಸನ್ ಮೌಮೂನ್ ಈ ವಿಷಯ ತಿಳಿಸಿದ್ದಾರೆ.

ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಘಾಸನ್ ಮೌಮೂನ್, ಹಿಂದಿನ ಸರ್ಕಾರ ರಚಿಸಿದ ಒಪ್ಪಂದಗಳ ಅಡಿಯಲ್ಲಿ ಕೆಲವು ಸೈನಿಕರು ಹಾರಾಟ ಮಾಡಲು ತರಬೇತಿ ಪಡೆದಿದ್ದಾರೆಯೇ ಹೊರತು ಭಾರತ ನೀಡಿದ ಮೂರು ವಿಮಾನಗಳನ್ನು ಹಾರಿಸಲು ಸಾಮರ್ಥ್ಯವಿರುವ ಮಾಲ್ಡೀವ್ಸ್ ಸೈನಿಕರು ಮಾಲ್ಡೀವ್ಸ್ ರಾಷ್ಟ್ರೀಯ ರಕ್ಷಣಾ ಪಡೆ (ಎಂಎನ್‌ಡಿಎಫ್) ಬಳಿ ಇಲ್ಲ ಎಂದಿದ್ದಾರೆ.

“ಇದು ವಿವಿಧ ಹಂತಗಳಲ್ಲಿ ಹಾದುಹೋಗುವ ಅಗತ್ಯವಿರುವ ತರಬೇತಿಯಾಗಿದ್ದರಿಂದ, ವಿವಿಧ ಕಾರಣಗಳಿಂದ ನಮ್ಮ ಸೈನಿಕರು ಪೂರ್ಣಗೊಳ್ಳಲಿಲ್ಲ. ಆದ್ದರಿಂದ, ಎರಡು ಹೆಲಿಕಾಪ್ಟರ್​​ಗಳು ಮತ್ತು ಡೋರ್ನಿಯರ್ ಅನ್ನು ಹಾರಿಸಲು ಪರವಾನಗಿ ಪಡೆದ ಅಥವಾ ಸಂಪೂರ್ಣವಾಗಿ ಕಾರ್ಯನಿರ್ವಹಿಸುವ ಯಾವುದೇ ಸಿಬ್ಬಂದಿ ಸದ್ಯಕ್ಕೆ ನಮ್ಮ ಪಡೆಯಲ್ಲಿ ಇಲ್ಲ,” ಎಂದು ಘಾಸನ್ ಮೌಮೂನ್ ಹೇಳಿರುವುದಾಗಿ ಅಧಾಧು ಡಾಟ್ ಕಾಮ್ ನ್ಯೂಸ್ ಪೋರ್ಟಲ್ ಉಲ್ಲೇಖಿಸಿದೆ.

ಮೇ 10 ರೊಳಗೆ ದ್ವೀಪ ರಾಷ್ಟ್ರದಲ್ಲಿ ಮೂರು ವಾಯುಯಾನ ವೇದಿಕೆಗಳನ್ನು ನಿರ್ವಹಿಸುತ್ತಿರುವ ಎಲ್ಲಾ ಭಾರತೀಯ ಸೇನಾ ಸಿಬ್ಬಂದಿಯನ್ನು ಹಿಂತೆಗೆದುಕೊಳ್ಳುವಂತೆ ಚೀನಾ ಪರ ನಾಯಕ ಮುಯಿಝು ಒತ್ತಾಯಿಸಿದ ನಂತರ ಉಭಯ ದೇಶಗಳ ನಡುವಿನ ಸಂಬಂಧಗಳು ಹದಗೆಟ್ಟಿವೆ. ಭಾರತವು ಈಗಾಗಲೇ 76 ಸೇನಾ ಸಿಬ್ಬಂದಿಯನ್ನು ಹಿಂಪಡೆದಿದೆ.

ಆದಾಗ್ಯೂ, ಸೆನಾಹಿಯಾ ಮಿಲಿಟರಿ ಆಸ್ಪತ್ರೆಯಲ್ಲಿನ ವೈದ್ಯರನ್ನು ಭಾರತದಿಂದ ತೆಗೆದುಹಾಕುವ ಯಾವುದೇ ಉದ್ದೇಶವನ್ನು ಮಾಲ್ಡೀವ್ಸ್ ಸರ್ಕಾರ ಹೊಂದಿಲ್ಲ ಎಂದು ಮಾಲ್ಡೀವ್ಸ್ ಮಾಧ್ಯಮ ವರದಿ ತಿಳಿಸಿದೆ.

ಇದನ್ನೂ ಓದಿ: ಜಾಗತಿಕ ಪರಿಶೀಲನೆಗೂ ಮುನ್ನವೇ ಅಮೆರಿಕದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ

ಘಾಸನ್ ಮೌಮೂನ್ ಅವರ ಹೇಳಿಕೆಗಳಿಗೆ ವ್ಯತಿರಿಕ್ತವಾಗಿ, ಪ್ರಸ್ತುತ ಆಡಳಿತದ ಹಿರಿಯ ಅಧಿಕಾರಿಗಳು ಕಳೆದ ಐದು ವರ್ಷಗಳಲ್ಲಿ ವಿರೋಧ ಪಕ್ಷದಲ್ಲಿದ್ದಾಗ, ಅವರು ಹಿಂದಿನ ಸರ್ಕಾರವನ್ನು ಟೀಕಿಸಿದ್ದು MNDF ನಲ್ಲಿ ಸಮರ್ಥ ಪೈಲಟ್‌ಗಳಿದ್ದಾರೆ ಎಂದು ಹೇಳಿದ್ದರು ಎಂದು ಅಧಾಧು ಡಾಟ್ ಕಾಮ್ ವರದಿ ಉಲ್ಲೇಖಿಸಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:51 pm, Mon, 13 May 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ