AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿದ್ದ ಸಿದ್ಧಿವಿನಾಯಕ ದೇಗುಲ ಧ್ವಂಸ; ವಿಗ್ರಹವನ್ನು ತೆಗೆದು, ಸುಟ್ಟ ಗುಂಪು

Hindu Temple: ಪಂಜಾಬ್​ ಪ್ರಾಂತ್ಯದ ರಹೀಮ್​ ಖಾನ್ ಯಾರ್​ ಖಾನ್​ ಜಿಲ್ಲೆಯಲ್ಲಿರುವ, ಭೋಂಗ್​ ನಗರದಲ್ಲಿ ಈ ಸಿದ್ಧಿವಿನಾಯಕ ದೇವಸ್ಥಾನ ಇತ್ತು.

ಪಾಕಿಸ್ತಾನದಲ್ಲಿದ್ದ ಸಿದ್ಧಿವಿನಾಯಕ ದೇಗುಲ ಧ್ವಂಸ; ವಿಗ್ರಹವನ್ನು ತೆಗೆದು, ಸುಟ್ಟ ಗುಂಪು
ದೇಗುಲ ಧ್ವಂಸ
TV9 Web
| Edited By: |

Updated on:Aug 05, 2021 | 3:29 PM

Share

ದೆಹಲಿ: ಪಾಕಿಸ್ತಾನ (Pakistan) ದಲ್ಲಿ ಹಿಂದೂ ದೇವಾಲಯ (Hindu Temple) ಗಳನ್ನು ನಾಶಗೊಳಿಸುವುದು ಹೊಸದಲ್ಲ. ಇದೀಗ ಮತ್ತೊಂದು ಸಿದ್ಧಿವಿನಾಯಕ ದೇವಸ್ಥಾನವನ್ನು ಮುಸ್ಲಿಮರ ಗುಂಪೊಂದು ಧ್ವಂಸಗೊಳಿಸಿದ ವಿಡಿಯೋ ಸಿಕ್ಕಾಪಟೆ ವೈರಲ್​ ಆಗಿದೆ. ಪಾಕಿಸ್ತಾನದ ಪಂಜಾಬ್​ ಪ್ರಾಂತ್ಯದಲ್ಲಿರುವ ದೇಗುಲ ಇದಾಗಿದ್ದು, ಇಲ್ಲಿದ್ದ ದೇವರ ವಿಗ್ರಹವನ್ನು ಅಪವಿತ್ರಗೊಳಿಸಿದ್ದಲ್ಲೆ, ಅದನ್ನು ಭಾಗಶಃ ಸುಟ್ಟುಹಾಕಲಾಗಿದೆ.

ರಹೀಮ್​ ಖಾನ್ ಯಾರ್​ ಖಾನ್​ ಜಿಲ್ಲೆಯಲ್ಲಿರುವ, ಭೋಂಗ್​ ನಗರದಲ್ಲಿ ಈ ಸಿದ್ಧಿವಿನಾಯಕ ದೇವಸ್ಥಾನ ಇತ್ತು. ಲಾಹೋರ್​​​ನಲ್ಲಿರುವ ಮುಸ್ಲಿಮರಿಗೆ ಸಂಬಂಧಪಟ್ಟ ಸಂಸ್ಥೆಯನ್ನೊಂದು ನಾಶಗೊಳಿಸಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯೆಯಾಗಿ ಹೀಗೆ ಸಿದ್ಧಿವಿನಾಯಕ ದೇಗುಲ ನಾಶಗೊಳಿಸಿದ್ದಾಗಿ ಆ ಗುಂಪು ಹೇಳಿಕೊಂಡಿದೆ. ಈ ಸಂಸ್ಥೆಯನ್ನು ಧ್ವಂಸ ಮಾಡಿದ ವಿಡಿಯೋ ವೈರಲ್​ ಆದ ಬೆನ್ನಲ್ಲೇ, ಭೋಂಗ್​ ​​ನಗರದ ಜನರು ರೊಚ್ಚಿಗೆದ್ದಿದ್ದಾರೆ. ಕೈಯಲ್ಲಿ ಕಬ್ಬಿಣದ ರಾಡ್​, ಕೋಲು, ಕಲ್ಲುಗಳನ್ನು ಹಿಡಿದುಕೊಂಡು ಸಿದ್ಧಿವಿನಾಯಕ ದೇಗುಲಕ್ಕೆ ನುಗ್ಗಿ, ಎಲ್ಲವನ್ನೂ ಹಾಳುಗೆಡವಿದ್ದಾರೆ.

ಇನ್ನು ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಅಲ್ಲಿ ಪಾಕಿಸ್ತಾನ ರೇಂಜರ್ಸ್​​ನ್ನು ರಕ್ಷಣೆಗೆ ನಿಯೋಜಿಸಲಾಗಿದೆ. ದೇಗುಲ ಇರುವ ಸುತ್ತಮುತ್ತ 100 ಹಿಂದೂ ಕುಟುಂಬಗಳು ಇದ್ದು, ಅವರೀಗ ಅಪಾಯದಲ್ಲಿದ್ದಾರೆ. ಎಲ್ಲ ರೀತಿಯ ಭದ್ರತಾ ಕ್ರಮಗಳನ್ನೂ ವಹಿಸಲಾಗಿದೆ ಎಂದೂ ಸ್ಥಳೀಯ ಸರ್ಕಾರ ತಿಳಿಸಿದೆ. ಇನ್ನು ವಿಡಿಯೋ ಶೇರ್​ ಮಾಡಿಕೊಂಡಿರುವ ಪಾಕಿಸ್ತಾನ ತೆಹ್ರೀಕ್​ ಐ ಇನ್​ಸಾಫ್​ ಪಕ್ಷದ ಸಂಸದ ಡಾ. ರಮೇಶ್​ ಕುಮಾರ್ ವಂಕ್ವಾನಿ, ದಯವಿಟ್ಟು ದೇಗುಲ ಧ್ವಂಸಗೊಳಿಸುತ್ತಿರುವುದನ್ನು ತಡೆಯಿರಿ. ಕಾನೂನು ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Tokyo Olympics: ಇದು ಐತಿಹಾಸಿಕ ಕ್ಷಣ ಪ್ರತಿಯೊಬ್ಬ ಭಾರತೀಯನ ನೆನಪಲ್ಲಿ ಉಳಿಯುವಂತಹ ದಿನ: ಪ್ರಧಾನಿ ಮೋದಿ

‘ಮೆಂತ್ಯೆ ಸೊಪ್ಪಿನ ಸ್ಪೆಷಲ್​ ಬಜ್ಜಿ‘ ಒಮ್ಮೆ ಮನೆಯಲ್ಲಿ ಟ್ರೈ ಮಾಡಿ ರುಚಿ ಸವಿಯಿರಿ

Published On - 9:44 am, Thu, 5 August 21

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ