AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿದ್ದ ಸಿದ್ಧಿವಿನಾಯಕ ದೇಗುಲ ಧ್ವಂಸ; ವಿಗ್ರಹವನ್ನು ತೆಗೆದು, ಸುಟ್ಟ ಗುಂಪು

Hindu Temple: ಪಂಜಾಬ್​ ಪ್ರಾಂತ್ಯದ ರಹೀಮ್​ ಖಾನ್ ಯಾರ್​ ಖಾನ್​ ಜಿಲ್ಲೆಯಲ್ಲಿರುವ, ಭೋಂಗ್​ ನಗರದಲ್ಲಿ ಈ ಸಿದ್ಧಿವಿನಾಯಕ ದೇವಸ್ಥಾನ ಇತ್ತು.

ಪಾಕಿಸ್ತಾನದಲ್ಲಿದ್ದ ಸಿದ್ಧಿವಿನಾಯಕ ದೇಗುಲ ಧ್ವಂಸ; ವಿಗ್ರಹವನ್ನು ತೆಗೆದು, ಸುಟ್ಟ ಗುಂಪು
ದೇಗುಲ ಧ್ವಂಸ
TV9 Web
| Updated By: Lakshmi Hegde|

Updated on:Aug 05, 2021 | 3:29 PM

Share

ದೆಹಲಿ: ಪಾಕಿಸ್ತಾನ (Pakistan) ದಲ್ಲಿ ಹಿಂದೂ ದೇವಾಲಯ (Hindu Temple) ಗಳನ್ನು ನಾಶಗೊಳಿಸುವುದು ಹೊಸದಲ್ಲ. ಇದೀಗ ಮತ್ತೊಂದು ಸಿದ್ಧಿವಿನಾಯಕ ದೇವಸ್ಥಾನವನ್ನು ಮುಸ್ಲಿಮರ ಗುಂಪೊಂದು ಧ್ವಂಸಗೊಳಿಸಿದ ವಿಡಿಯೋ ಸಿಕ್ಕಾಪಟೆ ವೈರಲ್​ ಆಗಿದೆ. ಪಾಕಿಸ್ತಾನದ ಪಂಜಾಬ್​ ಪ್ರಾಂತ್ಯದಲ್ಲಿರುವ ದೇಗುಲ ಇದಾಗಿದ್ದು, ಇಲ್ಲಿದ್ದ ದೇವರ ವಿಗ್ರಹವನ್ನು ಅಪವಿತ್ರಗೊಳಿಸಿದ್ದಲ್ಲೆ, ಅದನ್ನು ಭಾಗಶಃ ಸುಟ್ಟುಹಾಕಲಾಗಿದೆ.

ರಹೀಮ್​ ಖಾನ್ ಯಾರ್​ ಖಾನ್​ ಜಿಲ್ಲೆಯಲ್ಲಿರುವ, ಭೋಂಗ್​ ನಗರದಲ್ಲಿ ಈ ಸಿದ್ಧಿವಿನಾಯಕ ದೇವಸ್ಥಾನ ಇತ್ತು. ಲಾಹೋರ್​​​ನಲ್ಲಿರುವ ಮುಸ್ಲಿಮರಿಗೆ ಸಂಬಂಧಪಟ್ಟ ಸಂಸ್ಥೆಯನ್ನೊಂದು ನಾಶಗೊಳಿಸಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯೆಯಾಗಿ ಹೀಗೆ ಸಿದ್ಧಿವಿನಾಯಕ ದೇಗುಲ ನಾಶಗೊಳಿಸಿದ್ದಾಗಿ ಆ ಗುಂಪು ಹೇಳಿಕೊಂಡಿದೆ. ಈ ಸಂಸ್ಥೆಯನ್ನು ಧ್ವಂಸ ಮಾಡಿದ ವಿಡಿಯೋ ವೈರಲ್​ ಆದ ಬೆನ್ನಲ್ಲೇ, ಭೋಂಗ್​ ​​ನಗರದ ಜನರು ರೊಚ್ಚಿಗೆದ್ದಿದ್ದಾರೆ. ಕೈಯಲ್ಲಿ ಕಬ್ಬಿಣದ ರಾಡ್​, ಕೋಲು, ಕಲ್ಲುಗಳನ್ನು ಹಿಡಿದುಕೊಂಡು ಸಿದ್ಧಿವಿನಾಯಕ ದೇಗುಲಕ್ಕೆ ನುಗ್ಗಿ, ಎಲ್ಲವನ್ನೂ ಹಾಳುಗೆಡವಿದ್ದಾರೆ.

ಇನ್ನು ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಅಲ್ಲಿ ಪಾಕಿಸ್ತಾನ ರೇಂಜರ್ಸ್​​ನ್ನು ರಕ್ಷಣೆಗೆ ನಿಯೋಜಿಸಲಾಗಿದೆ. ದೇಗುಲ ಇರುವ ಸುತ್ತಮುತ್ತ 100 ಹಿಂದೂ ಕುಟುಂಬಗಳು ಇದ್ದು, ಅವರೀಗ ಅಪಾಯದಲ್ಲಿದ್ದಾರೆ. ಎಲ್ಲ ರೀತಿಯ ಭದ್ರತಾ ಕ್ರಮಗಳನ್ನೂ ವಹಿಸಲಾಗಿದೆ ಎಂದೂ ಸ್ಥಳೀಯ ಸರ್ಕಾರ ತಿಳಿಸಿದೆ. ಇನ್ನು ವಿಡಿಯೋ ಶೇರ್​ ಮಾಡಿಕೊಂಡಿರುವ ಪಾಕಿಸ್ತಾನ ತೆಹ್ರೀಕ್​ ಐ ಇನ್​ಸಾಫ್​ ಪಕ್ಷದ ಸಂಸದ ಡಾ. ರಮೇಶ್​ ಕುಮಾರ್ ವಂಕ್ವಾನಿ, ದಯವಿಟ್ಟು ದೇಗುಲ ಧ್ವಂಸಗೊಳಿಸುತ್ತಿರುವುದನ್ನು ತಡೆಯಿರಿ. ಕಾನೂನು ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Tokyo Olympics: ಇದು ಐತಿಹಾಸಿಕ ಕ್ಷಣ ಪ್ರತಿಯೊಬ್ಬ ಭಾರತೀಯನ ನೆನಪಲ್ಲಿ ಉಳಿಯುವಂತಹ ದಿನ: ಪ್ರಧಾನಿ ಮೋದಿ

‘ಮೆಂತ್ಯೆ ಸೊಪ್ಪಿನ ಸ್ಪೆಷಲ್​ ಬಜ್ಜಿ‘ ಒಮ್ಮೆ ಮನೆಯಲ್ಲಿ ಟ್ರೈ ಮಾಡಿ ರುಚಿ ಸವಿಯಿರಿ

Published On - 9:44 am, Thu, 5 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ