AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೀಸ್‌ಗೆ ಭೇಟಿ ನೀಡಿದ ಪ್ರಧಾನಿ ಮೋದಿ: ವಿಮಾನ ನಿಲ್ದಾಣದಲ್ಲಿ ಭಾರತೀಯರಿಂದ ಅದ್ಧೂರಿ ಸ್ವಾಗತ

ದಕ್ಷಿಣ ಆಫ್ರಿಕಾದಲ್ಲಿ ಬ್ರಿಕ್ಸ್ ಶೃಂಗಸಭೆ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಗ್ರೀಸ್ ಪ್ರಧಾನಿ ಕಿರಿಯಾಕೋಸ್ ಮಿಟ್ಸೊಟಾಕಿಸ್ ಅವರ ಆಹ್ವಾನದ ಮೇರೆಗೆ ಇಂದು (ಆ.25) ಗ್ರೀಸ್‌ಗೆ ಭೇಟಿ ನೀಡಿದ್ದಾರೆ. 40 ವರ್ಷಗಳ ನಂತರ ಭಾರತದ ಪ್ರಧಾನಿ ಗ್ರೀಸ್‌ಗೆ ಭೇಟಿ ನೀಡಿದ್ದು, ಗ್ರೀಸ್​ನಲ್ಲಿರುವ ಭಾರತೀಯರ ಜತೆಗೆ ಮೋದಿ ಅವರು ಸಂವಾದ ನಡೆಸಲಿದ್ದಾರೆ.

ಗ್ರೀಸ್‌ಗೆ ಭೇಟಿ ನೀಡಿದ ಪ್ರಧಾನಿ ಮೋದಿ: ವಿಮಾನ ನಿಲ್ದಾಣದಲ್ಲಿ ಭಾರತೀಯರಿಂದ ಅದ್ಧೂರಿ ಸ್ವಾಗತ
ಪ್ರಧಾನಿ ಮೋದಿ ಗ್ರೀಕ್​​ ಭೇಟಿ
ಅಕ್ಷಯ್​ ಪಲ್ಲಮಜಲು​​
|

Updated on:Aug 25, 2023 | 2:23 PM

Share

ದಕ್ಷಿಣ ಆಫ್ರಿಕಾದಲ್ಲಿ ಬ್ರಿಕ್ಸ್ ಶೃಂಗಸಭೆ ಮುಗಿಸಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಗ್ರೀಸ್ ಪ್ರಧಾನಿ ಕಿರಿಯಾಕೋಸ್ ಮಿಟ್ಸೊಟಾಕಿಸ್ (Kyriakos Mitsotakis) ಅವರ ಆಹ್ವಾನದ ಮೇರೆಗೆ ಇಂದು (ಆ.25) ಗ್ರೀಸ್‌ಗೆ ಭೇಟಿ ನೀಡಿದ್ದಾರೆ. 40 ವರ್ಷಗಳ ನಂತರ ಭಾರತದ ಪ್ರಧಾನಿ ಗ್ರೀಸ್‌ಗೆ ಭೇಟಿ ನೀಡಿದ್ದು, ಗ್ರೀಸ್​ನಲ್ಲಿರುವ ಭಾರತೀಯರ ಜತೆಗೆ ಮೋದಿ ಅವರು ಸಂವಾದ ನಡೆಸಲಿದ್ದಾರೆ. ಇನ್ನು ಪ್ರಧಾನಿ ಮೋದಿ ಅವರನ್ನು ಅದ್ಧೂರಿಯಲ್ಲಿ ಭಾರತೀಯರು ಸ್ವಾಗತಿಸಿದ್ದರು. ಪ್ರಧಾನಿ ಮೋದಿ ಅವರು ಭಾರತ ಮತ್ತು ಗ್ರೀಸ್ ನಾಗರಿಕತೆಯ ಸಂಬಂಧಗಳನ್ನು ಒಗ್ಗೂಡಿಸಲು ಮತ್ತು ಇತ್ತೀಚಿನ ವರ್ಷಗಳಲ್ಲಿ ಸಮುದ್ರ ಸಾರಿಗೆ, ರಕ್ಷಣೆ, ವ್ಯಾಪಾರ ಮತ್ತು ಹೂಡಿಕೆಗಳು ಮತ್ತು ಸಮುದಾಯಗಳ ನಡುವಿನ ಸಂಬಂಧವನ್ನು ಬಲಪಡಿಸುವ ಸಲುವಾಗಿ ಈ ಭೇಟಿಯನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ಆಫ್ರಿಕಾದಿಂದ ಗ್ರೀಸ್​​ನ ಅಥೆನ್ಸ್‌ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಗ್ರೀಕ್ ವಿದೇಶಾಂಗ ಸಚಿವ ಜಾರ್ಜ್ ಗೆರಾಪೆಟ್ರಿಟಿಸ್ ಮತ್ತು ಅಸಖ್ಯಾಂತ ಭಾರತೀಯರು ಸ್ವಾಗತಿಸಿದರು.

ಇನ್ನು ಪ್ರಧಾನಿ ಮೋದಿ ಅವರು ಅಥೆನ್ಸ್‌ ವಿಮಾನ ನಿಲ್ದಾಣದಲ್ಲಿ ಭಾರತೀಯರು ಸ್ವಾಗತಿಸಿದ ಪರಿಯನ್ನು ತಮ್ಮ ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದಾರೆ. ಭಾರತ-ಗ್ರೀಸ್ ಸ್ನೇಹವನ್ನು ಗಾಢಗೊಳಿಸುವ ಉದ್ದೇಶದಿಂದ ಗ್ರೀಸ್​​ಗೆ ಭೇಟಿ ನೀಡಿದ್ದೇನೆ. ನಾನು ಗ್ರೀಸ್ ಪ್ರಧಾನಿ ಕಿರಿಯಾಕೋಸ್ ಮಿಟ್ಸೊಟಾಕಿಸ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದೇನೆ ಮತ್ತು ಇಲ್ಲಿರುವ (ಗ್ರೀಸ್​​) ಭಾರತೀಯ ಸಮುದಾಯದೊಂದಿಗೆ ಸಂವಹನ ನಡೆಸಲಿದ್ದೇನೆ ಎಂದು ಟ್ವೀಟ್​​ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:Pಭಾರತದ ತ್ವರಿತಗತಿ ಅಭಿವೃದ್ಧಿ ಅರ್ಥಮಾಡಿಕೊಳ್ಳಲು ಇಡೀ ವಿಶ್ವ ಉತ್ಸುಕವಾಗಿದೆ: ಪ್ರಧಾನಿ ನರೇಂದ್ರ ಮೋದಿ

ಇನ್ನು ಪ್ರಧಾನಿ ಮೋದಿ ಅವರ ಗ್ರೀಸ್​​ ಭೇಟಿಯನ್ನು ಎದುರು ನೋಡುತ್ತಿದ್ದ ಭಾರತೀಯರು, ಮೋದಿ ನಿಲ್ದಾಣಕ್ಕೆ ಬರುತ್ತಿದ್ದಂತೆ, ಭಾರತ್​​ ಮಾತ ಕೀ ಜೈ ಎಂಬ ಘೋಷಣೆಯನ್ನು ಕೂಗುತ್ತಾ ಸಂತೋಷದಿಂದ ಸ್ವಾಗತಿಸಿದರು. ಇನ್ನು ಪ್ರಧಾನಿ ಮೋದಿ ಭೇಟಿ ಬಗ್ಗೆ ಅಭಿಪ್ರಾಯ ಹಂಚಿಕೊಂಡ ಭಾರತೀಯರೊಬ್ಬರು, ಮೋದಿ ಅವರು ಇಲ್ಲಿಗೆ ಬಂದಿರುವುದು ನಮಗೆ ತುಂಬಾ ಸಂತೋಷವಾಗಿದೆ. ಪ್ರಧಾನಿಯವರ ಗ್ರೀಸ್ ಭೇಟಿಯು ಈ ದೇಶದ ಹೆಸರನ್ನು ಹೆಚ್ಚಿಸಲಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್​​​

ಒಂದು ದಿನದ ಮಟ್ಟಿಗೆ ಗ್ರೀಸ್​​ಗೆ ಭೇಟಿ ನೀಡಿದ್ದ ಮೋದಿ ಅವರು ಅಥೆನ್ಸ್‌ನಲ್ಲಿರುವ ಗ್ರಾಂಡೆ ಬ್ರೆಟಾಗ್ನೆ ಹೋಟೆಲ್​​ಗೆ ಆಗಮಿಸಿ, ಭಾರತೀಯ ಸಮುದಾಯದ ಮಕ್ಕಳೊಂದಿಗೆ ಸಂವಾದ ನಡೆಸಿದ್ದಾರೆ. ಇನ್ನು ಭಾರತೀಯ ಮತ್ತು ಗ್ರೀಸ್​​​ ಉದ್ಯಮಿಗಳೊಂದಿಗೆ ಮಾತುಕತೆ ನಡೆಸಲಿದ್ದು, ಅನೇಕ ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ ಎಂದು ಹೇಳಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್  ಮಾಡಿ 

Published On - 1:32 pm, Fri, 25 August 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ