Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡೀ ಶ್ರೀಲಂಕಾವನ್ನು ಒಂದು ದಿನ ಕತ್ತಲೆಯಲ್ಲಿರಿಸಿದ ಕಲಿಯುಗದ ಹನುಮಂತ

ಮಂಗಗಳ ಚಟುವಟಿಕೆಯು ನಗು ತರಿಸುವುದಷ್ಟೇ ಅಲ್ಲದೆ ಕೆಲವೊಮ್ಮೆ ನಮ್ಮನ್ನು ಸಂಕಟಕ್ಕೆ ಸಿಲುಕಿಸಿಬಿಡುತ್ತವೆ. ಈ ಬಾರಿ ಒಂದು ಕೋತಿ ಇಡೀ ಶ್ರೀಲಂಕಾದಲ್ಲಿ ವಿದ್ಯುತ್ ಅಸ್ತವ್ಯಸ್ತತೆಯನ್ನುಂಟುಮಾಡಿತು. ಒಂದು ಕೋತಿಯ ಕೆಲಸದಿಂದ ಇಡೀ ಶ್ರೀಲಂಕಾ ಕತ್ತಲೆಯಲ್ಲಿ ಮುಳುಗಿತು. ಒಂದು ಕೋತಿ ಮುಖ್ಯ ಗ್ರಿಡ್‌ಗೆ ತಲುಪಿ ಅಲ್ಲಿನ ಟ್ರಾನ್ಸ್‌ಫಾರ್ಮರ್‌ನಲ್ಲಿ ಸ್ವಲ್ಪ ತೊಂದರೆ ಉಂಟುಮಾಡಿತು. ಇದರಿಂದಾಗಿ ಶ್ರೀಲಂಕಾದಾದ್ಯಂತ ಹೆಚ್ಚಿನ ಸ್ಥಳಗಳಲ್ಲಿ ವಿದ್ಯುತ್ ಕಡಿತಗೊಂಡಿತು. ವಿದ್ಯುತ್ ಕಡಿತವು ಹಲವು ಪ್ರದೇಶಗಳ ಮೇಲೆ ಪರಿಣಾಮ ಬೀರಿತು.

ಇಡೀ ಶ್ರೀಲಂಕಾವನ್ನು ಒಂದು ದಿನ ಕತ್ತಲೆಯಲ್ಲಿರಿಸಿದ ಕಲಿಯುಗದ ಹನುಮಂತ
ಕೋತಿImage Credit source: The daily beast
Follow us
ನಯನಾ ರಾಜೀವ್
|

Updated on: Feb 11, 2025 | 2:44 PM

ರಾಮಾಯಣದಲ್ಲಿ ಹನುಮಂತ ಇಡೀ ರಾವಣನ ಲಂಕೆಯನ್ನು ಬೆಂಕಿಯಿಂದ ಧಗಧಗಿಸುವಂತೆ ಮಾಡಿದಂತೆ, ಈಗ ಕಲಿಯುಗದ ಹನುಮಂತ ಕೂಡ ಶ್ರೀಲಂಕಾವನ್ನು ಒಂದು ದಿನ ಕತ್ತಲೆಯಲ್ಲಿ ಇರಿಸಿತ್ತು. ಭಾನುವಾರ ಇಡೀ ಶ್ರೀಲಂಕದಾದ್ಯಂತ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಆದರೆ ಇದರ ಹಿಂದೆ ಒಂದು ವಿಚಿತ್ರ ಕಾರಣವಿತ್ತು. ಅದರ ಹಿಂದೆ ಕೋತಿಯ ಕೈವಾಡವಿತ್ತು.

ಶ್ರೀಲಂಕಾದ ವಿದ್ಯುತ್ ಗ್ರಿಡ್ ಉಪ ಕೇಂದ್ರಕ್ಕೆ ಕೋತಿ ಬೆಳಗ್ಗೆ 11.30ರ ಸುಮಾರಿಗೆ ನುಗ್ಗಿತ್ತು. ಆಗ ರಾಷ್ಟ್ರವ್ಯಾಪಿ ವಿದ್ಯುತ್ ವ್ಯತ್ಯಯನ್ನುಂಟು ಮಾಡಿತು. ಅದಾದ ಬಳಿಕ ಕೆಲವು ಗಂಟೆಗಳ ಕಾಲ ಕೋತಿ ಒಳಗೆ ಇದ್ದ ಕಾರಣ ವಿದ್ಯುತ್ ಸಂಪೂರ್ಣವಾಗಿ ಮರುಸ್ಥಾಪಿಸಲು ಸಾಧ್ಯವಾಗಲಿಲ್ಲ. ಈ ಘಟನೆ ಕೊಲಂಬೋದ ಉಪನಗರದಲ್ಲಿ ನಡೆದಿದೆ. ಶ್ರೀಲಂಕಾದಲ್ಲಿ ವಿದ್ಯುತ್ ಕಡಿತಕ್ಕೆ ಸರಿಯಾದ ಕಾರಣವನ್ನು ಸಿಇಬಿ ಬಹಿರಂಗಪಡಿಸಿಲ್ಲ.

ವಿದ್ಯುತ್ ಕಡಿತಗೊಂಡ ತಕ್ಷಣ, ಅನೇಕ ನಾಗರಿಕರು ಏನಾಗುತ್ತಿದೆ ಎಂದು ತಿಳಿಯಲು ಕರೆ ಮಾಡಿದ್ದರು. ಕೊಲಂಬೊ, ಗ್ಯಾಲೆ ಮತ್ತು ಇತರ ಹಲವು ಪ್ರದೇಶಗಳಲ್ಲಿ ವಿದ್ಯುತ್ ಇಲ್ಲ ಎಂದು ಜನರು ದೃಢಪಡಿಸಿದರು. ಹೆಚ್ಚಿನ ತಾಪಮಾನದ ಸಮಯದಲ್ಲಿ ಹಲವಾರು ಗಂಟೆಗಳ ಕಾಲ ವಿದ್ಯುತ್ ಕಡಿತಗೊಳ್ಳುವ ಬಗ್ಗೆ ಅನೇಕ ಜನರು ದೂರಿದರು.

ಮತ್ತಷ್ಟು ಓದಿ: ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?

ಶ್ರೀಲಂಕಾದ ಹೆಚ್ಚಿನ ನಗರ ಕೇಂದ್ರಗಳಲ್ಲಿ ತಾಪಮಾನವು 30°C ಗಿಂತ ಹೆಚ್ಚಾಗಿದೆ. ಅಕ್ಯೂವೆದರ್ ಪ್ರಕಾರ, ರತ್ನಾಪುರದಂತಹ ಕೆಲವು ಸ್ಥಳಗಳಲ್ಲಿ, ಹೆಚ್ಚಿನ ಆರ್ದ್ರತೆಯಿಂದಾಗಿ ತಾಪಮಾನವು ವಾಸ್ತವವಾಗಿ 36°C ವರೆಗೆ ಇತ್ತು.

ಕೇವಲ ಮನೆಗಳು ಮಾತ್ರವಲ್ಲ, ಹೋಟೆಲ್​, ಆಸ್ಪತ್ರೆ ಸೇರಿದಂತೆ ಎಲ್ಲಿಯೂ ಇರಲಿಲ್ಲ. ಆಗಸ್ಟ್ 2022 ರಲ್ಲಿ ದೇಶವು ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿ ಇಂಧನ ಮತ್ತು ವಿದ್ಯುತ್ ಸೇರಿದಂತೆ ಅಗತ್ಯ ವಸ್ತುಗಳ ಕೊರತೆಗೆ ಕಾರಣವಾದ ನಂತರ ಮೊದಲ ಬಾರಿಗೆ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ