ಆಸ್ಟ್ರೇಲಿಯಾದ ನ್ಯೂ ಸೌತ್​ವೇಲ್ಸ್​ನಲ್ಲಿ ಕಾಡ್ಗಿಚ್ಚು

ಆಸ್ಟ್ರೇಲಿಯಾದ ನ್ಯೂ ಸೌತ್​ವೇಲ್ಸ್​ನಲ್ಲಿ ಹೊತ್ತಿರುವ ಕಾಡ್ಗಿಚ್ಚು ಮತ್ತಷ್ಟು ಪ್ರದೇಶಗಳಿಗೆ ಹಬ್ಬಿದೆ. ಬೆಂಕಿ ನಿಯಂತ್ರಣಕ್ಕೆ ಆಸ್ಟ್ರೇಲಿಯಾ ಸರ್ಕಾರ ಹರಸಾಹಸಪಡುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ನೂರಾರು ಜನರನ್ನ ರಕ್ಷಿಸಿರುವ ಅಗ್ನಿಶಾಮಕ ಸಿಬ್ಬಂದಿ, ಸೂಕ್ಷ್ಮ ಪ್ರದೇಶದಲ್ಲಿರುವ ಜನರಿಗೆ ಊರು ತೊರೆಯುವಂತೆ ಸೂಚನೆ ನೀಡಿದ್ದಾರೆ. ಟ್ರಂಪ್ ಅಧ್ಯಕ್ಷ ಪಟ್ಟಕ್ಕೆ ಕುತ್ತು! ಅಮೆರಿಕ ಅಧ್ಯಕ್ಷರ ವಿರುದ್ಧ ವಾಗ್ದಂಡನೆ ಪ್ರಕ್ರಿಯೆ ನಡೀತಿದೆ. ಅಧಿಕಾರ ದುರುಪಯೋಗ ಮತ್ತು ಶಾಸಕಾಂಗ ಸಭೆಗೆ ತಡೆಯೊಡ್ಡಿರುವ ಆರೋಪದಡಿ ಟ್ರಂಪ್ ವಿರುದ್ಧ ಡೆಮಾಕ್ರಟಿಕ್‌ ಸದಸ್ಯರು ವಾಗ್ದಂಡನೆ ನಿರ್ಣಯ ಮಂಡಿಸಿದ್ದಾರೆ. ವಾಗ್ದಂಡನೆ ಪ್ರಕ್ರಿಯೆ ಮೇಲೆ ಇಂದು […]

ಆಸ್ಟ್ರೇಲಿಯಾದ ನ್ಯೂ ಸೌತ್​ವೇಲ್ಸ್​ನಲ್ಲಿ ಕಾಡ್ಗಿಚ್ಚು
ಸಾಧು ಶ್ರೀನಾಥ್​

Updated on: Dec 18, 2019 | 7:36 AM

ಆಸ್ಟ್ರೇಲಿಯಾದ ನ್ಯೂ ಸೌತ್​ವೇಲ್ಸ್​ನಲ್ಲಿ ಹೊತ್ತಿರುವ ಕಾಡ್ಗಿಚ್ಚು ಮತ್ತಷ್ಟು ಪ್ರದೇಶಗಳಿಗೆ ಹಬ್ಬಿದೆ. ಬೆಂಕಿ ನಿಯಂತ್ರಣಕ್ಕೆ ಆಸ್ಟ್ರೇಲಿಯಾ ಸರ್ಕಾರ ಹರಸಾಹಸಪಡುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ನೂರಾರು ಜನರನ್ನ ರಕ್ಷಿಸಿರುವ ಅಗ್ನಿಶಾಮಕ ಸಿಬ್ಬಂದಿ, ಸೂಕ್ಷ್ಮ ಪ್ರದೇಶದಲ್ಲಿರುವ ಜನರಿಗೆ ಊರು ತೊರೆಯುವಂತೆ ಸೂಚನೆ ನೀಡಿದ್ದಾರೆ.

ಟ್ರಂಪ್ ಅಧ್ಯಕ್ಷ ಪಟ್ಟಕ್ಕೆ ಕುತ್ತು!
ಅಮೆರಿಕ ಅಧ್ಯಕ್ಷರ ವಿರುದ್ಧ ವಾಗ್ದಂಡನೆ ಪ್ರಕ್ರಿಯೆ ನಡೀತಿದೆ. ಅಧಿಕಾರ ದುರುಪಯೋಗ ಮತ್ತು ಶಾಸಕಾಂಗ ಸಭೆಗೆ ತಡೆಯೊಡ್ಡಿರುವ ಆರೋಪದಡಿ ಟ್ರಂಪ್ ವಿರುದ್ಧ ಡೆಮಾಕ್ರಟಿಕ್‌ ಸದಸ್ಯರು ವಾಗ್ದಂಡನೆ ನಿರ್ಣಯ ಮಂಡಿಸಿದ್ದಾರೆ. ವಾಗ್ದಂಡನೆ ಪ್ರಕ್ರಿಯೆ ಮೇಲೆ ಇಂದು ಅಮೆರಿಕದ ಹೌಸ್ ರೆಪ್ರೆಸೆಂಟೇಟಿವ್ ವೋಟಿಂಗ್ ನಡೆಸೋ ಸಾಧ್ಯತೆ ಇದೆ.

ಸಿಡ್ನಿಯಲ್ಲಿ ಉಸಿರಾಟ ನಿಷಿದ್ಧ!
ಮತ್ತೊಂದ್ಕಡೆ ಆಸ್ಟ್ರೇಲಿಯಾದ ಪ್ರಮುಖ ನಗರಗಳಲ್ಲಿ ಒಂದಾಗಿರುವ ಸಿಡ್ನಿಯಲ್ಲಿ, ಕಾಡ್ಗಿಚ್ಚಿನ ಪ್ರಭಾವದಿಂದ ಜನರು ನರಳುವಂತಾಗಿದೆ. ಸಿಡ್ನಿ ಸಿಟಿ ಪೂರ್ತಿ ಹೊಗೆ ಆವರಿಸಿದ್ದು, ಜನರು ನಾನಾ ಕಾಯಿಲೆಗಳಿಂದ ನರಳುವಂತಾಗಿದೆ. ಈ ಹಿನ್ನೆಲೆಯಲ್ಲಿ ಮೆಡಿಕಲ್ ಎಮರ್ಜೆನ್ಸಿ ಘೋಷಿಸಲಾಗಿದ್ದು, ಸಿಡ್ನಿ ಜನರಿಗೆ ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us