AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾನ್ಮಾರ್‌ನ ಕಯಾಹ್​​ನಲ್ಲಿ 30ಕ್ಕೂ ಹೆಚ್ಚು ಜನರಿಗೆ ಗುಂಡಿಕ್ಕಿ ಮೃತದೇಹ ಸುಟ್ಟುಹಾಕಿದ ಸ್ಥಿತಿಯಲ್ಲಿ ಪತ್ತೆ; ಹತ್ಯೆಯಲ್ಲಿ ಮಿಲಿಟರಿ ಕೈವಾಡ?

ಮ್ಯಾನ್ಮಾರ್ ಅನ್ನು ಆಳುವ ಮಿಲಿಟರಿಯಿಂದ ಹತ್ಯೆಗೀಡಾದ ಹಿರಿಯರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಆಂತರಿಕವಾಗಿ ಸ್ಥಳಾಂತರಗೊಂಡ ಜನರ ಸುಟ್ಟ ಶವ ಶನಿವಾರ ಎಚ್‌ಪ್ರುಸೊ ಪಟ್ಟಣದ ಮೊ ಸೊ ಗ್ರಾಮದ ಬಳಿ ಕಾಣಿಸಿದೆ ಎಂದು ಕರೆನ್ನಿ ಮಾನವ ಹಕ್ಕುಗಳ ಗುಂಪು ಹೇಳಿದೆ.

ಮ್ಯಾನ್ಮಾರ್‌ನ ಕಯಾಹ್​​ನಲ್ಲಿ 30ಕ್ಕೂ ಹೆಚ್ಚು ಜನರಿಗೆ ಗುಂಡಿಕ್ಕಿ ಮೃತದೇಹ ಸುಟ್ಟುಹಾಕಿದ ಸ್ಥಿತಿಯಲ್ಲಿ ಪತ್ತೆ; ಹತ್ಯೆಯಲ್ಲಿ ಮಿಲಿಟರಿ ಕೈವಾಡ?
ಮ್ಯಾನ್ಮಾರ್​​ನಲ್ಲಿ ಜನರನ್ನು ಹತ್ಯೆ ಮಾಡಿ ಸುಟ್ಟು ಹಾಕಿರುವುದು (ಟ್ವಿಟರ್ ಚಿತ್ರ)
TV9 Web
| Edited By: |

Updated on: Dec 26, 2021 | 2:04 PM

Share

ಕಯಾಹ್: ಶುಕ್ರವಾರದಂದು ಮ್ಯಾನ್ಮಾರ್‌ನ ( Myanmar) ಸಂಘರ್ಷ ಪೀಡಿತ ಕಯಾಹ್ ರಾಜ್ಯದಲ್ಲಿ(Kayah state) ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 30 ಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಿ ಅವರ ಮೃತದೇಹಗಳನ್ನು ಸುಟ್ಟುಹಾಕಲಾಗಿದೆ ಎಂದು ಸ್ಥಳೀಯ ನಿವಾಸಿ, ಮಾಧ್ಯಮ ವರದಿಗಳು ಮತ್ತು ಸ್ಥಳೀಯ ಮಾನವ ಹಕ್ಕುಗಳ ಗುಂಪು ತಿಳಿಸಿದೆ. ಮ್ಯಾನ್ಮಾರ್ ಅನ್ನು ಆಳುವ ಮಿಲಿಟರಿಯಿಂದ ಹತ್ಯೆಗೀಡಾದ ಹಿರಿಯರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಆಂತರಿಕವಾಗಿ ಸ್ಥಳಾಂತರಗೊಂಡ ಜನರ ಸುಟ್ಟ ಶವ ಶನಿವಾರ ಎಚ್‌ಪ್ರುಸೊ ಪಟ್ಟಣದ ಮೊ ಸೊ ಗ್ರಾಮದ ಬಳಿ ಕಾಣಿಸಿದೆ ಎಂದು ಕರೆನ್ನಿ ಮಾನವ ಹಕ್ಕುಗಳ ಗುಂಪು ಹೇಳಿದೆ. “ಮಾನವ ಹಕ್ಕುಗಳನ್ನು ಉಲ್ಲಂಘಿಸುವ ಅಮಾನವೀಯ ಮತ್ತು ಕ್ರೂರ ಹತ್ಯೆಯನ್ನು ನಾವು ಬಲವಾಗಿ ಖಂಡಿಸುತ್ತೇವೆ” ಎಂದು ಗುಂಪು ಫೇಸ್‌ಬುಕ್ ಪೋಸ್ಟ್‌ನಲ್ಲಿ ಹೇಳಿದೆ. ಮ್ಯಾನ್ಮಾರ್‌ ಸೇನೆಯು ಗ್ರಾಮದಲ್ಲಿ ಪ್ರತಿಪಕ್ಷದ ಸಶಸ್ತ್ರ ಪಡೆಗಳಿಂದ ಅನಿರ್ದಿಷ್ಟ ಸಂಖ್ಯೆಯ “ಆಯುಧಗಳೊಂದಿಗೆ ಭಯೋತ್ಪಾದಕರನ್ನು” ಗುಂಡಿಕ್ಕಿ ಕೊಂದಿದೆ ಎಂದು ರಾಜ್ಯ ಮಾಧ್ಯಮ ತಿಳಿಸಿದೆ. ಜನರು ಏಳು ವಾಹನಗಳಲ್ಲಿದ್ದರು ಮತ್ತು ಮಿಲಿಟರಿಯವರು ನಿಲ್ಲಿಸಲು ಹೇಳಿದಾಗ ನಿಲ್ಲಲಿಲ್ಲ ಎಂದು ಅದು ಹೇಳಿದೆ.

ಮ್ಯಾನ್ಮಾರ್ ಮಿಲಿಟರಿ ಈ ಬಗ್ಗೆ ಪ್ರತಿಕ್ರಿಯಿಸಿಲ್ಲ ಎಂದು ರಾಯಿಟರ್ಸ್ ವರದಿ ಮಾಡಿದೆ. ಮಾನವ ಹಕ್ಕುಗಳ ಗುಂಪು ಮತ್ತು ಸ್ಥಳೀಯ ಮಾಧ್ಯಮಗಳು ಹಂಚಿಕೊಂಡ ಫೋಟೋಗಳು ಸುಟ್ಟ ಟ್ರಕ್‌ಬೆಡ್‌ಗಳ ಮೇಲೆ ದೇಹಗಳ ಸುಟ್ಟ ಅವಶೇಷಗಳನ್ನು ತೋರಿಸಿದೆ.

ಕರೇನ್ನಿ ರಾಷ್ಟ್ರೀಯ ರಕ್ಷಣಾ ಪಡೆ, ಫೆಬ್ರುವರಿ 1 ದಂಗೆಯ ನೇತೃತ್ವದ ಜುಂಟಾವನ್ನು ವಿರೋಧಿಸುವ ಹಲವಾರು ನಾಗರಿಕ ಸೇನಾಪಡೆಗಳಲ್ಲಿ ಅತಿ ದೊಡ್ಡದಾಗಿದೆ.ಸತ್ತವರು ತಮ್ಮ ಸದಸ್ಯರಲ್ಲ ಆದರೆ ಸಂಘರ್ಷದಿಂದ ಆಶ್ರಯ ಪಡೆಯುವ ನಾಗರಿಕರು ಎಂದು ಅದು ಹೇಳಿದೆ.  ಎಲ್ಲಾ ಮೃತ ದೇಹಗಳು ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಸೇರಿದಂತೆ ವಿವಿಧ ಗಾತ್ರಗಳಲ್ಲಿದ್ದುದನ್ನು ನೋಡಿ ನಾವು ತುಂಬಾ ಆಘಾತಕ್ಕೊಳಗಾಗಿದ್ದೇವೆ ಎಂದು ಗುಂಪಿನ ಕಮಾಂಡರ್ ರಾಯಿಟರ್ಸ್‌ಗೆ ತಿಳಿಸಿದರು.

ಶುಕ್ರವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಲಿ ಗುಂಡು ಹಾರಾಟ ನಡೆದಿದ್ದರಿಂದ ಸ್ಥಳಕ್ಕೆ ಹೋಗಲು ಸಾಧ್ಯವಾಗಲಿಲ್ಲ ಗ್ರಾಮಸ್ಥರೊಬ್ಬರು ಹೇಳಿದ್ದಾರೆ. “ನಾನು ಇಂದು ಬೆಳಿಗ್ಗೆ ನೋಡಲು ಹೋಗಿದ್ದೆ. ನಾನು ಸುಟ್ಟ ಶವಗಳನ್ನು ನೋಡಿದೆ, ಮತ್ತು ಮಕ್ಕಳು ಮತ್ತು ಮಹಿಳೆಯರ ಬಟ್ಟೆಗಳು ಸುತ್ತಲೂ ಹರಡಿವೆ” ಎಂದು ಅವರು ಫೋನ್ ಮೂಲಕ ರಾಯಿಟರ್ಸ್ ಗೆ ತಿಳಿಸಿದರು.

ಏತನ್ಮಧ್ಯೆ ದೇಶದ ಇನ್ನೊಂದು ಭಾಗದಲ್ಲಿ, ಥಾಯ್ ಗಡಿಯ ಸಮೀಪದಲ್ಲಿ ಮ್ಯಾನ್ಮಾರ್ ಮಿಲಿಟರಿ ಬಂಡುಕೋರರ ಗುಂಪಿನೊಂದಿಗೆ ಘರ್ಷಣೆಯನ್ನು ಮುಂದುವರೆಸಿದೆ. ಇದರ ಪರಿಣಾಮವಾಗಿ ದಾರಿ ತಪ್ಪಿದ ರಾಕೆಟ್ ಚಾಲಿತ ಗ್ರೆನೇಡ್ ಥೈಲ್ಯಾಂಡ್ ಭಾಗದಲ್ಲಿ ಮನೆಯನ್ನು ಹಾನಿಗೊಳಿಸಿತು. ಯಾವುದೇ ಸಾವು ನೋವು ವರದಿಯಾಗಿಲ್ಲ ಎಂದು ಥಾಯ್ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.  ಕಳೆದ ವಾರ ಭುಗಿಲೆದ್ದ ಹೋರಾಟದ ಉಲ್ಬಣದಲ್ಲಿ ಗಡಿಯ ಸಮೀಪವಿರುವ ಕರೆನ್ ನ್ಯಾಷನಲ್ ಯೂನಿಯನ್ (ಕೆಎನ್‌ಯು) ನಿಯಂತ್ರಿತ ಪ್ರದೇಶದ ಮೇಲೆ ಮ್ಯಾನ್ಮಾರ್ ಮಿಲಿಟರಿ ಒಂದು ದಿನದ ಹಿಂದೆ ವೈಮಾನಿಕ ದಾಳಿಗಳನ್ನು ನಡೆಸಿತು.

ಸುಮಾರು 11 ತಿಂಗಳ ಹಿಂದೆ ನೊಬೆಲ್ ಪ್ರಶಸ್ತಿ ಪುರಸ್ಕೃತೆ ಆಂಗ್ ಸಾನ್ ಸೂಕಿ ಅವರ ಚುನಾಯಿತ ಸರ್ಕಾರವನ್ನು ಮಿಲಿಟರಿಯು ಉರುಳಿಸಿದಾಗಿನಿಂದ ಮ್ಯಾನ್ಮಾರ್ ಪ್ರಕ್ಷುಬ್ಧವಾಗಿದೆ.

ಇದನ್ನೂ ಓದಿ:  Archbishop Desmond Tutu ದಕ್ಷಿಣ ಆಫ್ರಿಕಾದ ಆರ್ಚ್‌ಬಿಷಪ್ ಡೆಸ್ಮಂಡ್ ಟುಟು ನಿಧನ

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?