AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಜಾಂಬಿಕ್ ಸಮುದ್ರದಲ್ಲಿ ದೋಣಿ ಮುಳುಗಿ 90 ಜನ ಜಲಸಮಾಧಿ

ದಕ್ಷಿಣ ಆಫ್ರಿಕಾದ ದ್ವೀಪ ರಾಷ್ಟ್ರ ಮೊಜಾಂಬಿಕ್ ಕರಾವಳಿ ತೀರದ ಬಳಿ ದುರಂತ ಸಂಭವಿಸಿದ್ದು, 130 ಮಂದಿ ಪ್ರಯಾಣಿಸುತ್ತಿದ್ದ ಮೀನುಗಾರಿಕಾ ದೋಣಿ ಮುಳುಗಿ 90 ಮಂದಿ ಜಲ ಸಮಾಧಿಯಾಗಿರುವ ಮಾಹಿತಿ ಲಭ್ಯವಾಗಿದೆ. ಮೊಜಾಂಬಿಕ್ ದ್ವೀಪದಿಂದ ನಂಪುಲಾ ದ್ವೀಪಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದೆ. ದೋಣಿಯಲ್ಲಿ ನಿಗದಿಗಿಂತ ಹೆಚ್ಚು ಜನರನ್ನು ತುಂಬಿದ್ದೇ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಮೊಜಾಂಬಿಕ್ ಸಮುದ್ರದಲ್ಲಿ ದೋಣಿ ಮುಳುಗಿ 90 ಜನ ಜಲಸಮಾಧಿ
Image Credit source: News24
ನಯನಾ ರಾಜೀವ್
|

Updated on: Apr 08, 2024 | 9:06 AM

Share

ದಕ್ಷಿಣ ಆಫ್ರಿಕಾದ ದ್ವೀಪ ರಾಷ್ಟ್ರ ಮೊಜಾಂಬಿಕ್ ಕರಾವಳಿ ತೀರದ ಬಳಿ ದುರಂತ ಸಂಭವಿಸಿದ್ದು, 130 ಮಂದಿ ಪ್ರಯಾಣಿಸುತ್ತಿದ್ದ ಮೀನುಗಾರಿಕಾ ದೋಣಿ ಮುಳುಗಿ 90 ಮಂದಿ ಜಲ ಸಮಾಧಿಯಾಗಿರುವ ಮಾಹಿತಿ ಲಭ್ಯವಾಗಿದೆ. ಮೊಜಾಂಬಿಕ್ ದ್ವೀಪದಿಂದ ನಂಪುಲಾ ದ್ವೀಪಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದೆ. ದೋಣಿಯಲ್ಲಿ ನಿಗದಿಗಿಂತ ಹೆಚ್ಚು ಜನರನ್ನು ತುಂಬಿದ್ದೇ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಈ ದೋಣಿ ದೋಣಿ ಪ್ರಯಾಣಿಕರ ಸಾಗಣೆಗೆ ಯೋಗ್ಯವಾಗಿಲ್ಲ, ಸತ್ತವರಲ್ಲಿ ಅನೇಕ ಮಕ್ಕಳೂ ಸೇರಿದ್ದಾರೆ. ನಾಪತ್ತೆಯಾದವರಿಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸಮುದ್ರದ ಪರಿಸ್ಥಿತಿಯು ಈ ಕಾರ್ಯಕ್ಕೆ ತೊಂದರೆಯನ್ನುಂಟುಮಾಡುತ್ತಿದೆ. ಮೊಜಾಂಬಿಕ್​ನಲ್ಲಿ ಕಾಲರಾ ಪ್ರಕರಣಗಳು ಕೂಡ ಹೆಚ್ಚಿದೆ. ಅಕ್ಟೋಬರ್ 2023 ರಿಂದ ಸುಮಾರು 15,000 ಪ್ರಕರಣಗಳನ್ನು ವರದಿ ಮಾಡಿದೆ, 32 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಇದರಿಂದಾಗಿ ಜನರು ಮೊಜಾಂಬಿಕ್​ನಿಂದ ವಲಸೆ ಹೋಗುತ್ತಿದ್ದಾರೆ, ಇದಲ್ಲದೇ ನೆರೆಯ ಕಾಬೋ ಡೆಲ್ಗಾಡೊದಲ್ಲಿ ಜಿಹಾದಿ ದಾಳಿಯಿಂದ ತಪ್ಪಿಸಿಕೊಳ್ಳಲು ಪಲಾಯನ ಮಾಡುವವರ ಸಂಖ್ಯೆಯೂ ಹೆಚ್ಚಿದೆ.

ಮತ್ತಷ್ಟು ಓದಿ: ಉತ್ತರ ಪ್ರದೇಶ: ಗಂಗಾ ನದಿಯಲ್ಲಿ ದೋಣಿ ಮುಳುಗಿ 3 ಮಂದಿ ಸಾವು

ಬದುಕುಳಿದ 5 ಜನರಲ್ಲಿ 2 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ದೋಣಿ ಮೊಜಾಂಬಿಕ್ ದ್ವೀಪದ ಕಡೆಗೆ ಹೋಗುತ್ತಿತ್ತು. ಈ ದ್ವೀಪವನ್ನು ವಾಸ್ಕೋ ಡ ಗಾಮಾ ಕಂಡುಹಿಡಿದಿದ್ದ ಎಂದು ಹೇಳಲಾಗಿದೆ. ಮೊಜಾಂಬಿಕ್​ನಲ್ಲಿ ಹಲವು ಬಾರಿ ವಿನಾಶಕಾರಿ ಚಂಡಮಾರುತಗಳು ಎದುರಾಗುತ್ತವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!