AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಗಳು ಉತ್ಪ್ರೇಕ್ಷಿತ’: ಮಹಮ್ಮದ್ ಯೂನಸ್

“ನಾನು ಇದನ್ನು (ಪ್ರಧಾನಿ ನರೇಂದ್ರ) ಮೋದಿಯವರಿಗೂ ಹೇಳಿದ್ದೇನೆ, ಇದು ಉತ್ಪ್ರೇಕ್ಷೆಯಾಗಿದೆ. ಈ ಸಮಸ್ಯೆಯು ಹಲವಾರು ಆಯಾಮಗಳನ್ನು ಹೊಂದಿದೆ. ಶೇಖ್ ಹಸೀನಾ ಮತ್ತು ಅವಾಮಿ ಲೀಗ್‌ನ ದುಷ್ಕೃತ್ಯಗಳ ನಂತರ ದೇಶವು ಕ್ರಾಂತಿಯ ಮೂಲಕ ಹೋದಾಗ, ಅವರೊಂದಿಗೆ ಇದ್ದವರು ಸಹ ದಾಳಿಗಳನ್ನು ಎದುರಿಸಿದರು, ”ಎಂದು ನೊಬೆಲ್ ಪ್ರಶಸ್ತಿ ವಿಜೇತರು ಹೇಳಿದ್ದಾರೆ.

‘ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಗಳು ಉತ್ಪ್ರೇಕ್ಷಿತ’: ಮಹಮ್ಮದ್ ಯೂನಸ್
ಮಹಮ್ಮದ್ ಯೂನಸ್
ರಶ್ಮಿ ಕಲ್ಲಕಟ್ಟ
|

Updated on: Sep 05, 2024 | 6:38 PM

Share

ಢಾಕಾ ಸೆಪ್ಟೆಂಬರ್ 05: ಬಾಂಗ್ಲಾದೇಶದ (Bangladesh) ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ (Muhammad Yunus) ಅವರು ದೇಶದಲ್ಲಿ ಹಿಂದೂಗಳ (Attack On Hindus) ಮೇಲಿನ ಹಿಂಸಾತ್ಮಕ ದಾಳಿಗಳ ಬಗ್ಗೆ ಭಾರತದ ಕಳವಳವನ್ನು ಪ್ರಶ್ನಿಸಿದ್ದು, ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿಯ ವಿಷಯವನ್ನು “ಉತ್ಪ್ರೇಕ್ಷೆಗೊಳಿಸಲಾಗಿದೆ” ಎಂದು ಹೇಳಿದರು. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿಯು ಕೋಮುವಾದಕ್ಕಿಂತ ಹೆಚ್ಚು ರಾಜಕೀಯವಾಗಿದೆ ಎಂದು ಅವರು ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಯೂನಸ್,, ಅಲ್ಪಸಂಖ್ಯಾತರ ಮೇಲಿನ ದಾಳಿಗಳು ರಾಜಕೀಯ ಪತನದ ಒಂದು ಭಾಗವಾಗಿದೆ, ಏಕೆಂದರೆ ಹೆಚ್ಚಿನ ಹಿಂದೂಗಳು ಶೇಖ್ ಹಸೀನಾ ನೇತೃತ್ವದ ಈಗ ಪದಚ್ಯುತ ಅವಾಮಿ ಲೀಗ್ ಸರ್ಕಾರವನ್ನು ಬೆಂಬಲಿಸುತ್ತಾರೆ ಎಂಬ ಅಭಿಪ್ರಾಯವಿದೆ.

“ನಾನು ಇದನ್ನು (ಪ್ರಧಾನಿ ನರೇಂದ್ರ) ಮೋದಿಯವರಿಗೂ ಹೇಳಿದ್ದೇನೆ, ಇದು ಉತ್ಪ್ರೇಕ್ಷೆಯಾಗಿದೆ. ಈ ಸಮಸ್ಯೆಯು ಹಲವಾರು ಆಯಾಮಗಳನ್ನು ಹೊಂದಿದೆ. ಶೇಖ್ ಹಸೀನಾ ಮತ್ತು ಅವಾಮಿ ಲೀಗ್‌ನ ದುಷ್ಕೃತ್ಯಗಳ ನಂತರ ದೇಶವು ಕ್ರಾಂತಿಯ ಮೂಲಕ ಹೋದಾಗ, ಅವರೊಂದಿಗೆ ಇದ್ದವರು ಸಹ ದಾಳಿಗಳನ್ನು ಎದುರಿಸಿದರು, ”ಎಂದು ನೊಬೆಲ್ ಪ್ರಶಸ್ತಿ ವಿಜೇತರು ಹೇಳಿದ್ದಾರೆ.

ಆಗಸ್ಟ್ 5 ರಂದು ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಬಾಂಗ್ಲಾದೇಶದಿಂದ ಹಿಂದೂಗಳ ವಿರುದ್ಧದ ಹಿಂಸಾಚಾರ ಮತ್ತು ದಾಳಿಗಳ ಅನೇಕ ವರದಿಗಳ ನಂತರ ಈ ಹೇಳಿಕೆ ಬಂದಿದೆ. ಹಿಂದೂ ದೇವಾಲಯಗಳು ಮತ್ತು ಕಟ್ಟಡಗಳನ್ನು ಧ್ವಂಸಗೊಳಿಸಲಾಯಿತು. ಸ್ಥಳೀಯ ಮಾಧ್ಯಮಗಳ ಪ್ರಕಾರ ಅವಾಮಿ ಲೀಗ್‌ನ ಇಬ್ಬರು ಹಿಂದೂ ನಾಯಕರ ಹತ್ಯೆಯೂ ಆಗಿದೆ.

ಈಗ, ಅವಾಮಿ ಲೀಗ್ ಕಾರ್ಯಕರ್ತರನ್ನು ಹೊಡೆಯುವಾಗ, ಬಾಂಗ್ಲಾದೇಶದಲ್ಲಿ ಹಿಂದೂಗಳು ಎಂದರೆ ಅವಾಮಿ ಲೀಗ್ ಬೆಂಬಲಿಗರು ಎಂಬ ಗ್ರಹಿಕೆ ಇರುವುದರಿಂದ ಅವರು ಹಿಂದೂಗಳನ್ನು ಥಳಿಸಿದ್ದಾರೆ. ನಡೆದಿರುವುದು ಸರಿ ಎಂದು ನಾನು ಹೇಳುತ್ತಿಲ್ಲ ಆದರೆ ಕೆಲವರು ಇದನ್ನೇ ನೆಪವಾಗಿಟ್ಟುಕೊಂಡು ಆಸ್ತಿಯನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಆದ್ದರಿಂದ, ಅವಾಮಿ ಲೀಗ್ ಬೆಂಬಲಿಗರು ಮತ್ತು ಹಿಂದೂಗಳ ನಡುವೆ ಸ್ಪಷ್ಟವಾದ ವ್ಯತ್ಯಾಸವಿಲ್ಲ ಎಂದು ಯೂನಸ್ ಹೇಳಿದರು.

ಮಧ್ಯಂತರ ಸರ್ಕಾರ ರಚನೆಯಾದ ನಂತರ ಭಾರತದೊಂದಿಗಿನ ತನ್ನ ಮೊದಲ ನೇರ ಸಂವಾದದಲ್ಲಿ ಯೂನಸ್, ಬಾಂಗ್ಲಾದೇಶವು ಹಿಂದೂಗಳು ಮತ್ತು ಇತರ ಎಲ್ಲಾ ಅಲ್ಪಸಂಖ್ಯಾತ ಗುಂಪುಗಳ ರಕ್ಷಣೆ ಮತ್ತು ಸುರಕ್ಷತೆಗೆ ಆದ್ಯತೆ ನೀಡಲಿದೆ ಎಂದು ಪ್ರಧಾನಿ ಮೋದಿಯವರಿಗೆ ತಿಳಿಸಿದರು.

ದಾಳಿಗಳನ್ನು ಕೋಮುವಾದಕ್ಕಿಂತ ಹೆಚ್ಚು ರಾಜಕೀಯ ಎಂದು ಬಣ್ಣಿಸಿದ ಯೂನಸ್, ಭಾರತವು ಅವುಗಳನ್ನು ಹೇಗೆ ಪ್ರಚಾರ ಮಾಡುತ್ತಿದೆ ಎಂದು ಪ್ರಶ್ನಿಸಿದರು. “ಈ ದಾಳಿಗಳು ರಾಜಕೀಯ ಸ್ವರೂಪದ್ದಾಗಿವೆಯೇ ಹೊರತು ಕೋಮುವಾದವಲ್ಲ. ಭಾರತವು ಈ ಘಟನೆಗಳನ್ನು ದೊಡ್ಡ ರೀತಿಯಲ್ಲಿ ಪ್ರಚಾರ ಮಾಡುತ್ತಿದೆ. ನಾವು ಏನನ್ನೂ ಮಾಡಲು ಸಾಧ್ಯವಿಲ್ಲ ಎಂದು ನಾವು ಹೇಳಿಲ್ಲ; ನಾವು ಎಲ್ಲವನ್ನೂ ಮಾಡುತ್ತಿದ್ದೇವೆ ಎಂದು ಹೇಳಿದ್ದೇವೆ ಎಂದು ಮುಖ್ಯ ಸಲಹೆಗಾರರು ಹೇಳಿದರು.

ಇದನ್ನೂ ಓದಿ: ಶಿವಾಜಿ ಪ್ರತಿಮೆ ಉರುಳಿ ಬಿದ್ದಿದ್ದಕ್ಕೆ ಮೋದಿ ಮಹಾರಾಷ್ಟ್ರದ ಪ್ರತಿಯೊಬ್ಬ ವ್ಯಕ್ತಿಯ ಕ್ಷಮೆಯಾಚಿಸಬೇಕು: ರಾಹುಲ್ ಗಾಂಧಿ

ಶೇಖ್ ಹಸೀನಾಳನ್ನು ಹೊರಹಾಕಿದ ನಂತರ ಬಾಂಗ್ಲಾದೇಶವು ಅಫ್ಘಾನಿಸ್ತಾನವಾಗಿ ಬದಲಾಗುತ್ತದೆ ಎಂಬ ಈ ನಿರೂಪಣೆಯನ್ನು ಭಾರತ ಬಿಡಬೇಕಾಗಿದೆ. ಭಾರತವು ಈ ನಿರೂಪಣೆಯಿಂದ ಆಕರ್ಷಿತವಾಗಿದೆ. ಭಾರತವು ಈ ನಿರೂಪಣೆಯಿಂದ ಹೊರಬರಬೇಕಾಗಿದೆ. ಬಾಂಗ್ಲಾದೇಶವು ಇತರ ಯಾವುದೇ ರಾಷ್ಟ್ರದಂತೆ ಮತ್ತೊಂದು ನೆರೆಯ ರಾಷ್ಟ್ರವಾಗಿದೆ ಎಂದಿದ್ದಾರೆ ಯೂನಸ್.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್