AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕಾದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವು; ಕೃತ್ಯದ ವೇಳೆ ಫೇಸ್​ಬುಕ್ ಲೈವ್ ವಿಡಿಯೋ ಮಾಡಿದ 19 ವರ್ಷದ ಆರೋಪಿ

ಗುಂಡಿನ ದಾಳಿ ನಡೆಸುತ್ತಿರುವ ಕಪ್ಪು ವರ್ಣೀಯ ತನ್ನೆಲ್ಲ ಕೃತ್ಯಗಳನ್ನು ಫೇಸ್​ಬುಕ್ ಲೈವ್ ಮೂಲಕ ಪ್ರಸಾರ ಮಾಡುತ್ತಿದ್ದಾನೆ. ಆತ ಈಗ ಎಲ್ಲಿದ್ದಾನೆ ಎಂಬ ನಿರ್ದಿಷ್ಟ ಸ್ಥಳವನ್ನು ನಾವು ಪತ್ತೆಹಚ್ಚುತ್ತಿದ್ದೇವೆ ಎಂದು ಮೆಂಫಿಸ್ ಪೊಲೀಸ್ ಅಧಿಕಾರಿಗಳು

ಅಮೆರಿಕಾದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವು; ಕೃತ್ಯದ ವೇಳೆ ಫೇಸ್​ಬುಕ್ ಲೈವ್ ವಿಡಿಯೋ ಮಾಡಿದ 19 ವರ್ಷದ ಆರೋಪಿ
ಅಮೆರಿಕದ ಮೆಂಫಿಸ್‌ನಲ್ಲಿ ಗುಂಡಿನ ದಾಳಿ ನಡೆಸಿದ ಯುವಕ
TV9 Web
| Edited By: |

Updated on: Sep 08, 2022 | 11:58 AM

Share

ಟೆನ್ನೆಸ್ಸೀ: ಅಮೆರಿಕದ (United States) ಮೆಂಫಿಸ್‌ನಲ್ಲಿ ಬುಧವಾರ ಸಂಜೆ 19 ವರ್ಷದ ಕಪ್ಪು ವರ್ಣೀಯ ಯುವಕನೊಬ್ಬ ಗುಂಡಿನ ದಾಳಿ ನಡೆಸಿದ್ದು, ತನ್ನ ಕೃತ್ಯಗಳನ್ನು ಫೇಸ್‌ಬುಕ್‌ ಲೈವ್ (Facebook Live) ಪ್ರಸಾರ ಮಾಡಿದ್ದಾನೆ. ಎಜೆಕಿಯೆಲ್ ಕೆಲ್ಲಿ ಎಂದು ಗುರುತಿಸಲಾದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಇದಕ್ಕೂ ಮೊದಲು ಮೆಂಫಿಸ್ ಪೊಲೀಸ್ ಇಲಾಖೆಯ ಅಧಿಕಾರಿಗಳು ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದರು. ಗುಂಡಿನ ದಾಳಿ ನಡೆಸುತ್ತಿರುವ ಕಪ್ಪು ವರ್ಣೀಯ ತನ್ನೆಲ್ಲ ಕೃತ್ಯಗಳನ್ನು ಫೇಸ್​ಬುಕ್ ಲೈವ್ ಮೂಲಕ ಪ್ರಸಾರ ಮಾಡುತ್ತಿದ್ದಾನೆ. ಆತ ಈಗ ಎಲ್ಲಿದ್ದಾನೆ ಎಂಬ ನಿರ್ದಿಷ್ಟ ಸ್ಥಳವನ್ನು ನಾವು ಪತ್ತೆಹಚ್ಚುತ್ತಿದ್ದೇವೆ. ಅಲ್ಲಿಯವರೆಗೂ ನೀವೆಲ್ಲರೂ ಎಚ್ಚರಿಕೆಯಿಂದ ಇದ್ದು ನಮಗೆ ಸಹಕರಿಸಿ ಎಂದು ಮನವಿ ಮಾಡಿದ್ದರು.

ಇದನ್ನೂ ಓದಿ: Murder News: ರಾಜಸ್ಥಾನದಲ್ಲಿ ಮನೆಗೆ ತೆರಳುತ್ತಿದ್ದ ಬಿಜೆಪಿ ನಾಯಕನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ

ಜನರು ಮನೆ ಬಿಟ್ಟು ಆಚೆ ಬಾರದಂತೆ ಪೊಲೀಸರು ಸೂಚಿಸಿದ್ದರು. “ಶಂಕಿತ ವ್ಯಕ್ತಿ ಇನ್ನೂ ತಲೆಮರೆಸಿಕೊಂಡಿದ್ದಾನೆ. ನೀವು ಹೊರಗೆ ಹೋಗಲೇಬೇಕಾದ ಅನಿವಾರ್ಯತೆ ಇಲ್ಲದಿದ್ದರೆ ಇದು ಬಗೆಹರಿಯುವವರೆಗೆ ನೀವೆಲ್ಲರೂ ಮನೆಯೊಳಗೆ ಇರಿ” ಎಂದು ಪೊಲೀಸರು ಹೇಳಿದ್ದರು.

ಪೊಲೀಸರು ಗುಂಡಿನ ದಾಳಿ ನಡೆಸಿದ ಯುವಕನ ಚಿತ್ರ ಹಾಗೂ ಆತ ಚಾಲನೆ ಮಾಡುತ್ತಿರುವ ವಾಹನದ ವಿವರಣೆಯನ್ನು ಬಿಡುಗಡೆ ಮಾಡಿದ್ದಾರೆ. ಆರಂಭದಲ್ಲಿ ನೀಲಿ ಅಥವಾ ಸಿಲ್ವರ್ ಸೆಡಾನ್‌ನಲ್ಲಿ ಓಡಾಡುತ್ತಿದ್ದ ಆತ ಕೊನೆಗೆ ಬೂದು ಬಣ್ಣದ ಎಸ್‌ಯುವಿಯಲ್ಲಿ ಹೋಗುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ